ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್ ಅಂಟಿಸಿದ ಆರೋಪ; ಮತದಾನ ಸ್ಥಗಿತ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎರಡನೇ ಹಂತದ ಮತದಾನದ ವೇಳೆ ಹೈವೋಲ್ಟೇಜ್ ಕ್ಷೇತ್ರವಾದ ಡೈಮಂಡ್ ಹಾರ್ಬರ್ ವ್ಯಾಪ್ತಿಯ ಫಾಲ್ತಾ ವಿಧಾನಸಭಾ ಕ್ಷೇತ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎವಿಎಂ ಯಂತ್ರದ ಬಿಜೆಪಿಗೆ ಮತ ಒತ್ತುವ ಬಟನ್ ಮೇಲೆ ಟೇಪ್ ಹಚ್ಚಿ ಮತದಾನಕ್ಕೆ ಅಡ್ಡಿಪಡಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದ ಬೆನ್ನಲ್ಲೇ ಕೆಲವು ಬೂತ್‌ಗಳಲ್ಲಿ ಮತದಾನವನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ … Continued

‘ಸುಳ್ಳು ಹೇಳುತ್ತಲೇ ಇರುತ್ತಾರೆ….’: ಕಾಂಗ್ರೆಸ್ ಸರ್ಕಾರದ ಸಮೀಕ್ಷೆ ಮುಂದಿಟ್ಟು ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ‘ಮತ ಕಳ್ಳತನ’ದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರಿಗೆ ಈಗ ಸ್ವಪಕ್ಷದ ಸರ್ಕಾರವಿರುವ ಕರ್ನಾಟಕದಲ್ಲೇ ಇರಿಸುಮುರಿಸಾಗುವ ಸಮೀಕ್ಷೆ ಹೊರಬಿದ್ದಿದೆ. ರಾಜ್ಯ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ. 83ಕ್ಕೂ ಹೆಚ್ಚು ಜನ ಎವಿಎಂ ಮತಯಂತ್ರಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ … Continued

ಕರ್ನಾಟಕದ ಹೆಚ್ಚಿನ ಜನರಿಗೆ ಎವಿಎಂ ಮೇಲೆ ಅಪಾರ ವಿಶ್ವಾಸ ; ಹೊಸ ಸಮೀಕ್ಷೆಯಲ್ಲಿ ಅನೇಕ ಅಂಶಗಳು ಬಹಿರಂಗ

ಬೆಂಗಳೂರು: ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತವೆ ಹಾಗೂ ಇವಿಎಂ (EVM) ಯಂತ್ರಗಳು ನಿಖರವಾದ ಫಲಿತಾಂಶವನ್ನು ನೀಡುತ್ತವೆ ಎಂದು ಕರ್ನಾಟಕದ ಬಹುಪಾಲು ಮತದಾರರು ನಂಬಿದ್ದಾರೆ. ಕರ್ನಾಟಕ ಮೌಲ್ಯಮಾಪನ ಮತ್ತು ಉಸ್ತುವಾರಿ ಪ್ರಾಧಿಕಾರ (Karnataka Monitoring and Evaluation Authority (KMEA)) ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಈ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಆಗಸ್ಟ್ 2025 ರ … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ಇವಿಎಂ ಡೇಟಾಗಳನ್ನು ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಇವಿಎಂ(EVM) ದತ್ತಾಂಶಗಳನ್ನು‌( ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ (Supreme Court) ಚುನಾವಣಾ ಆಯೋಗಕ್ಕೆ ಮಂಗಳವಾರ(ಫೆ.11) ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದ್ದು, ಸದ್ಯಕ್ಕೆ ಇವಿಎಂನಿಂದ ಯಾವುದೇ ದತ್ತಾಂಶ ಅಳಿಸಬೇಡಿ ಅಥವಾ ಯಾವುದೇ … Continued

ಇವಿಎಂ ಹೇಗೆ ತಿರುಚಬಹುದು ಎಂಬುದನ್ನು ತೋರಿಸಿ : ಒಮರ್‌ ಅಬ್ದುಲ್ಲಾ ನಂತರ ಕಾಂಗ್ರೆಸ್‌ ನಿಲುವು ಪ್ರಶ್ನಿಸಿದ ಟಿಎಂಸಿ

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಕಾಂಗ್ರೆಸ್ ನೇತೃತ್ವದ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಕಸದ ಬುಟ್ಟಿಗೆ ಹಾಕಿರುವ ಬೆನ್ನಲ್ಲೇ ಮತ್ತೊಂದು ಪ್ರಮುಖ ವಿಪಕ್ಷವು ಇವಿಎಂ ಸುತ್ತಲಿನ ಕಾಂಗ್ರೆಸ್‌ ಪ್ರಶ್ನೆಗಳನ್ನು ತಳ್ಳಿಹಾಕಿದೆ. ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ತಿರುಚುವ ಬಗ್ಗೆ ಯಾವುದೇ ಪುರಾವೆ ಇದ್ದರೆ ಅದನ್ನು ಚುನಾವಣಾ ಆಯೋಗಕ್ಕೆ ತೋರಿಸಬೇಕು ಎಂದು ತೃಣಮೂಲ ಕಾಂಗ್ರೆಸ್ … Continued

“ನೀವು ಗೆದ್ದಾಗ ಇವಿಎಂ ತಿರುಚುವುದಿಲ್ಲವೇ ? ; ಬ್ಯಾಲೆಟ್ ಪೇಪರ್ ಮೂಲಕ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಚುನಾವಣೆಯಲ್ಲಿ ಮತದಾನದಕ್ಕೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ವ್ಯವಸ್ಥೆ ಮರುಜಾರಿಗೊಳಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚಂದ್ರಬಾಬು ನಾಯ್ಡು ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಅವರಂತಹ ನಾಯಕರು ವಿದ್ಯುನ್ಮಾನ ಮತಯಂತ್ರ (ಇವಿಎಂ) ತಿರುಚಿರುವುದನ್ನು ಪ್ರಶ್ನಿಸಿದ್ದಾರೆ ಎಂಬ ಅರ್ಜಿದಾರರ ವಾದ ತೂಕದಿಂದ ಕೂಡಿಲ್ಲ … Continued

ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿ- ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಏಪ್ರಿಲ್‌ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ಇವಿಎಂಗಳ ಬದಲಿಗೆ ಮತಪತ್ರ ಬಳಕೆ ಮಾಡಬೇಕು … Continued

‘ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ದೃಢ ಪುರಾವೆಗಳಿಲ್ಲದೆ ಹ್ಯಾಕ್‌ ಆಗಿದೆ, ಇಲ್ಲವೇ ತಿರುಚಲಾಗಿದೆ ಎಂಬ ಶಂಕೆಯ ಆಧಾರದ ಮೇಲೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಬಹುದೇ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಪ್ರಶ್ನಿಸಿದೆ. ಇವಿಎಂಗಳ ಮೂಲಕ ಚಲಾವಣೆಯಾದ ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವೋಟರ್-ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಚೀಟಿಗಳೊಂದಿಗೆ ತಾಳೆ ಮಾಡಲು ನಿರ್ದೇಶನ ನಿಡುವಂತೆ … Continued

ಆಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಮತಯಂತ್ರಗಳು!!

ನವದೆಹಲಿ: ಆಸ್ಸಾಂ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣೆಂದು ಪೌಲ್‌ ಅವರಿಗೆ ಸೇರಿದ ಕಾರಿನಲ್ಲಿ ಇವಿಎಂ ಯಂತ್ರಗಳು ಪತ್ತೆಯಾಗಿವೆ. ಘಟನೆ ಬಳಿಕ ಉಥರಕಾಂಡಿ ಕ್ಷೇತ್ರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಈ ಕುರಿತು ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ … Continued