ಅಯ್ಯೊ ದೇವ್ರೆ…| ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಹೆಸರು- ಫೋಟೋ ಪ್ರಕಟ…!

ಉತ್ತರ ಪ್ರದೇಶ ಪೊಲೀಸರಿಗೆ ಮುಜುಗರ ಉಂಟುಮಾಡುವ ವಿದ್ಯಮಾನವೊಂದರಲ್ಲಿ, ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಆಕೆಯ ಹೆಸರು ಮಾತ್ರವಲ್ಲದೆ ಆಕೆಯ ಫೋಟೋಗಳೂ ಕೂಡ ಪ್ರಕಟವಾಗಿದೆ…! ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಹೆಸರು ಮತ್ತು ಭಾವಚಿತ್ರ ಪ್ರಕಟವಾಗಿರುವುದು ಶನಿವಾರ ವೈರಲ್ ಆಗಿದೆ. ಈ ವಿಷಯ ತನಿಖೆಯಲ್ಲಿದೆ ಎಂದು … Continued

ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ ವಿಧೇಯಕ 2024 ಮಂಡನೆ : ಪರೀಕ್ಷೆ ಅಕ್ರಮಕ್ಕೆ ಗರಿಷ್ಠ 10 ವರ್ಷ ಜೈಲು, 1 ಕೋಟಿ ರೂ.ದಂಡ

ನವದೆಹಲಿ: ಯುಪಿಎಸ್‌ಸಿ, ನೀಟ್‌, ಜೆಇಇ, ಇತರ ಸರ್ಕಾರಿ ನೇಮಕಾತಿ ಪರೀಕ್ಷೆಗಳು ಸೇರಿದಂತೆ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆ ಮತ್ತು ನಕಲಿ ವೆಬ್‌ಸೈಟ್‌ಗಳಂತಹ ಅವ್ಯವಹಾರಗಳನ್ನು ಪರಿಶೀಲಿಸಲು ಕೇಂದ್ರವು ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕ- 2024 ಅನ್ನು ಮಂಡಿಸಿದೆ.  ಮಸೂದೆಯು ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೆ … Continued

5,8,9ನೇ ತರಗತಿಗೆ SA-2 ಪರೀಕ್ಷೆ; ಮಾದರಿ ಪ್ರಶ್ನೋತರ ಪತ್ರಿಕೆ ಪ್ರಕಟ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ … Continued

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಅಂತಿಮ ವೇಳಾಪಟ್ಟಿ ಪ್ರಕಟ ಪ್ರಕಾರ, ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 22ರ ವರೆಗೆ ದ್ವಿತೀಯ … Continued

ಪರೀಕ್ಷೆಯಲ್ಲಿ ವಿದ್ಯಾರ್ಥಿ ಈ ರೀತಿ ಉತ್ತರ ಬರೆಯುವುದನ್ನೂ ನೋಡಿದ್ದೀರಾ… ಮತ್ತೊಬ್ಬ ಉತ್ತರ ಪತ್ರಿಕೆಯಲ್ಲೇ ನೂರರ ನೋಟುಗಳನ್ನಿಟ್ಟಿದ್ದಾನೆ…!

ಶಾಲಾ-ಕಾಲೇಜುಗಳಲ್ಲಿ ವರ್ಷವಿಡೀ ಮೋಜು ಮಸ್ತಿ ಮಾಡುವ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಉತ್ತರ ಪತ್ರಿಕೆಯಲ್ಲಿ ತಪ್ಪು ಬರೆಯುತ್ತಾರೆ. ಅದೇ, ಕೆಲವು ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಇಂತಹ ವಿಷಯಗಳನ್ನೂ ಬರೆಯುತ್ತಾರೆ. ಅದು ಈಗ ಸಾಕಷ್ಟು ವೈರಲ್ ಆಗಿದೆ. ಉತ್ತರ ಪತ್ರಿಕೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಜನರು ತಮಾಷೆ ಮಾಡುತ್ತಿದ್ದಾರೆ. ಪರೀಕ್ಷೆಯಲ್ಲಿ ಪ್ರಶ್ನೆಗಳಿಗೆ ಉತ್ತರ ಸಿಗದಿದ್ದಾಗ … Continued

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆಗೆ ಅವಕಾಶವಿಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ … Continued

ಹಿಜಾಬ್ – ಕೇಸರಿ ಶಾಲು ವಿವಾದ: ಪರೀಕ್ಷೆ ತಪ್ಪಿಸಿಕೊಂಡರೆ ಬೇರೆ ಅವಕಾಶವಿಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. ಹಿಂದೂ ಮಕ್ಕಳಿಗೂಇದು ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪರೀಕ್ಷೆ ಬೇಕೆಂದರೆ ಹಿಜಾಬ್, ಕೇಸರಿ ಶಾಲು ತೆಗೆದು ಪರೀಕ್ಷೆ ಬರೆಯಬೇಕು. ಈ ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡರೆ ಅವರಿಗೆ … Continued

ತಮಿಳುನಾಡು:೯,೧೦, ೧೧ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣ..!‌

ತಮಿಳುನಾಡಿನಲ್ಲಿ 9, 10 ಮತ್ತು 11ನೇ ತರಗತಿಗಳಲ್ಲಿ ಕಲಿಯುತ್ತಿರುವ (ರಾಜ್ಯ ಪಠ್ಯಕ್ರಮ) ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಗುರುವಾರ ಪ್ರಕಟಿಸಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಅವರನ್ನು ‘ಆಲ್ ಪಾಸ್’ ಎಂದು ಘೋಷಿಸಿದ್ದಾರೆ. ಮೇ 3 ಮತ್ತು ಮೇ 21 ರ ನಡುವೆ ಸರ್ಕಾರ 12 ನೇ ತರಗತಿ ಪರೀಕ್ಷೆಗಳನ್ನು ಘೋಷಿಸಿದ … Continued

ತಾಂತ್ರಿಕ ಸಮಸ್ಯೆ: ಐಟಿಐ ವಿದ್ಯಾರ್ಥಿಗಳ ಪರೀಕ್ಷೆಗೆ ತೊಡಕು

ಬೆಂಗಳೂರು: ತಾಂತ್ರಿಕ ತೊಂದರೆಯಿಂದಾಗಿ ಐಟಿಐ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುವ ಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ೧೭೫೦ಕ್ಕೂ ಹೆಚ್ಚು ಐಟಿಐ ಕಾಲೇಜುಗಳಿದ್ದು, ೧ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿದೆ. ಕಳೆದ ವರ್ಷ ಜುಲೈ-ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೊವಿಡ್‌ ಕಾರಣದಿಂದ ಮುಂದೂಡಲಾಗಿತ್ತು. ೨೦೨೦ರ ನವಂಬರ್‌ನಲ್ಲಿ ಪ್ರಾಯೋಗಿಕ ಹಾಗೂ ಎಂಜಿನೀಯರಿಂಗ್‌ ಡ್ರಾಯಿಂಗ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಉಳಿದ ವಿಷಯಗಳ ಪರೀಕ್ಷೆಗಳನ್ನು ಆನ್‌ಲೈನ್‌ … Continued