ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!
ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued