ಬಿಜೆಪಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ, ಎಸ್‌.ಟಿ. ಸೋಮಶೇಖರ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ ಹೆಬ್ಬಾರ (Shivaram Hebbar) ಹಾಗೂ ಎಸ್.ಟಿ. ಸೋಮಶೇಖರ (ST Somashekhar) ಅವರನ್ನು ಬಿಜೆಪಿ (BJP)ಯಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಸವನಗೌಡ ಪಾಟೀಲ ಯತ್ನಾಳ್‌ ಅವರ ಉಚ್ಚಾಟನೆ ಮಾಡಿದ ಕೆಲವು ದಿನಗಳ ನಂತರ ಈ … Continued

ಲಾಲು ಕುಟುಂಬದಲ್ಲಿ ಬಿರುಗಾಳಿ ; ಹಿರಿಯ ಮಗನನ್ನು ಆರ್‌ ಜೆಡಿ ಪಕ್ಷ, ಕುಟುಂಬದಿಂದ ಹೊರಹಾಕಿದ ಲಾಲು ಪ್ರಸಾದ ಯಾದವ್‌…!

ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸ್ಥಾಪಕ ಹಾಗೂ ವರಿಷ್ಠ ನೇತಾರ ಲಾಲು ಪ್ರಸಾದ ಯಾದವ್ ಭಾನುವಾರ ತಮ್ಮ ಹಿರಿಯ ಪುತ್ರ ತೇಜಪ್ರತಾಪ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಅಲ್ಲದೆ, ತೇಜಪ್ರತಾಪ ಅವರನ್ನು ಕುಟುಂಬದಿಂದಲೂ ಹೊರಹಾಕಿದ್ದಾರೆ. ತೇಜಪ್ರತಾಪ ಅವರ “ಬೇಜವಾಬ್ದಾರಿಯುತ ನಡವಳಿಕೆ” ಮತ್ತು ಅವರು ಕುಟುಂಬದ ಮೌಲ್ಯಗಳು ಮತ್ತು ಸಾರ್ವಜನಿಕ ಸಭ್ಯತೆಯಿಂದ … Continued

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ

ನವದೆಹಲಿ: ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರನ್ನು ಉಚ್ಚಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ (BJP) ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದ್ದು, ತಕ್ಷಣವೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಮಾರ್ಚ್ … Continued

ಪರಿಷತ್ ಚುನಾವಣೆ: ಕಾಂಗ್ರೆಸ್ಸಿನಿಂದ ಐವರು ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

ಬೆಂಗಳೂರು: ‌ರಾಜ್ಯದಲ್ಲಿ ಜೂನ್‌ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಒಟ್ಟು 6 ಕ್ಷೇತ್ರಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಟಿಕೆಟ್ ಕೈತಪ್ಪಿದ … Continued

ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ, ಸಿ.ಕೆ. ನಾಣು ಉಚ್ಚಾಟನೆ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ. ಇಬ್ರಾಹಿಂ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾಣು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ … Continued