ಔಷಧ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟ : 12 ಸಾವು, 13 ಕಾರ್ಮಿಕರ ರಕ್ಷಣೆ

ಹೈದರಾಬಾದ್ : ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಸಮೈಲಾರಂ ಹಂತ 1 ರ ಪ್ರದೇಶದ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ 12 ಜನರು ಸಾವಿಗೀಡಾಗಿದ್ದಾರೆ ಹಾಗೂ 13 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಸ್ಫೋಟ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಾರ್ಖಾನೆಯಲ್ಲಿನ ರಿಯಾಕ್ಟರ್ ಸ್ಫೋಟಗೊಂಡ ನಂತರ ನಡೆದ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು … Continued

ವೀಡಿಯೊ | ಬಲೂಚ್ ಬಂಡುಕೋರರಿಂದ ಪಾಕಿಸ್ತಾನ ಮಿಲಿಟರಿ ಬಸ್‌ ಸ್ಫೋಟಿಸಿದ ಮೊದಲ ದೃಶ್ಯ ಬಿಡುಗಡೆ ; 90 ಸೈನಿಕರು ಸತ್ತಿದ್ದಾರೆ ಎಂದ ಬಿಎಲ್‌ಎ

ಬಲೂಚ್ ಲಿಬರೇಶನ್ ಆರ್ಮಿ (BLA) ಬೆಂಗಾವಲು ಪಡೆಯ ಮೇಲಿನ ದಾಳಿಯಲ್ಲಿ 90 ಪಾಕಿಸ್ತಾನಿ ಸೈನ್ಯದ ಸಿಬ್ಬಂದಿಯನ್ನು ಕೊಂದಿರುವುದಾಗಿ ಹೇಳಿಕೊಂಡ ಕೆಲವೇ ಗಂಟೆಗಳ ನಂತರ, ಅದರ ವಿಶೇಷ ಪಡೆಗಳ ಘಟಕವಾದ ಮಜೀದ್ ಬ್ರಿಗೇಡ್ ನಡೆಸಿದ ದಾಳಿಯ ಮೊದಲ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ಬಿಎಲ್‌ಎ (BLA) ಬಿಡುಗಡೆ ಮಾಡಿದ ವೀಡಿಯೊ ಬಸ್‌ ಸ್ಫೋಟಗೊಂಡಿದ್ದನ್ನು ಸೆರೆಹಿಡಿದಿದೆ, ಅದರ ನಂತರ ಬಸ್‌ನಿಂದ … Continued

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ; 8 ಮಂದಿ ಸಾವು : 5 ಕಿಮೀ ದೂರದ ವರೆಗೆ ಕೇಳಿದ ಸ್ಫೋಟದ ಸದ್ದು

ಮುಂಬೈ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ನಾಗ್ಪುರ ಬಳಿಯ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ಯಾಹ್ನ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಾವನ್ನು ಖಚಿತಪಡಿಸಿದ್ದಾರೆ. “ಭಂಡಾರಾದಲ್ಲಿ, ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ, ದೊಡ್ಡ ಅನಾಹುತ ಸಂಭವಿಸಿದೆ, ಇದರ ಪರಿಣಾಮವಾಗಿ … Continued

ಆಘಾತಕಾರಿ…| ಬೈದಿದ್ದಕ್ಕೆ ಯೂ ಟ್ಯೂಬ್‌ ನೋಡಿ ಬಾಂಬ್ ತಯಾರಿಸಿ ಶಿಕ್ಷಕಿಯ ಕುರ್ಚಿ ಕೆಳಗಿಟ್ಟು ಸ್ಫೋಟಿಸಿದ ವಿದ್ಯಾರ್ಥಿಗಳು…!

ಯೂ ಟ್ಯೂಬ್‌ (You tube) ನೋಡಿ ಬಾಂಬ್ ತಯಾರಿಸುವುದನ್ನು ಕಲಿತ 12ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕಿಯೊಬ್ಬರ ಕುರ್ಚಿಯ ಕೆಳಗೆ ಅದನ್ನು ಇಟ್ಟು ಸ್ಪೋಟಿಸಿದ (Bomb Blast), ಆಘಾತಕಾರಿ ಘಟನೆ ವರದಿಯಾಗಿದೆ. ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಶಿಕ್ಷಕಿ ಅಪಾಯದಿಂದ ಪಾರಾಗಿದ್ದಾರೆ. ವರದಿಯ ಪ್ರಕಾರ, 12 ನೇ ತರಗತಿಯ ವಿದ್ಯಾರ್ಥಿಗಳ ಗುಂಪೊಂದುಶಿಕ್ಷಕಿಯನ್ನು ಹೆದರಿಸಲು … Continued

ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್‌ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued

ಫಾರ್ಮಾ ಕಂಪನಿ ಘಟಕದಲ್ಲಿ ರಿಯಾಕ್ಟರ್ ಸ್ಫೋಟ; 15 ಮಂದಿ ಸಾವು, ಹಲವರಿಗೆ ಗಾಯ

ಬುಧವಾರ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ನಂತರ ಕನಿಷ್ಠ ಹದಿನೈದು ಜನರು ಮೃತಪಟ್ಟಿದ್ದಾರೆ ಮತ್ತು ಸುಮಾರು 41 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯ ಘಟಕದಲ್ಲಿ ಈ ಘಟನೆ ನಡೆದಿದೆ. ಫಾರ್ಮಾ ಸಂಸ್ಥೆಯ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟವು ಗಮನಾರ್ಹ ಹಾನಿಯನ್ನುಂಟುಮಾಡಿತು ಮತ್ತು ಅನೇಕರು … Continued

ಶಿವಕಾಶಿಯ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸಾವು

ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಮಹಿಳಾ ಕಾರ್ಮಿಕರು ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಕೆಲವು ಮಂದಿಗೆ ಸುಟ್ಟಗಾಯಗಳಾಗಿವೆ ಎಂದು ವರದಿಯಾಗಿದೆ. ತಮಿಳುನಾಡಿನ ವಿರುದುನಗರ ಜಿಲ್ಲೆಯ ಶ್ರೀ ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ರಾಸಾಯನಿಕಗಳನ್ನು ನಿರ್ವಹಿಸುವಾಗ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ … Continued

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : 9 ಮಂದಿಗೆ ಗಾಯ

ಬೆಂಗಳೂರು: ಐಟಿಪಿಎಲ್ ರಸ್ತೆಯ ವೈಟ್‌ಫೀಲ್ಡ್ ಬಳಿಯಿರುವ ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 9 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಒಯ್ಯಲಾಗಿದೆ. ಗಾಯಗೊಂಡವರಲ್ಲಿ ಮೂವರು ಕೆಫೆಯ ಉದ್ಯೋಗಿಗಳು ಎಂದು ವರದಿಯಾಗಿದೆ. ಈವರೆಗಿನ ವರದಿಗಳ ಪ್ರಕಾರ, ಸಮೀಪದ ಯಾವುದೇ ಕಟ್ಟಡ ಅಥವಾ ಸಂಸ್ಥೆಗೆ … Continued

ಶಿರಾಳಕೊಪ್ಪ : ಚೀಲದಲ್ಲಿದ್ದ ವಸ್ತು ಸ್ಪೋಟ ; ಇಬ್ಬರಿಗೆ ಗಾಯ

ಶಿವಮೊಗ್ಗ: ಬ್ಯಾಗಿನಲ್ಲಿದ್ದ ವಸ್ತು ಸ್ಪೋಟಗೊಂಡು ಇಬ್ಬರಿಗೆ ಗಾಯಗಳಾದ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭಾನುವಾರ (ಫೆ.18) ಸಂಭವಿಸಿದೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಶಿರಾಳಕೊಪ್ಪದಲ್ಲಿನ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದ್ದು, ಕುಟುಂಬವೊಂದು ಸಂತೆಗಾಗಿ ಬಂದಿದ್ದ ಸಂದರ್ಭ ಅವರಿಟ್ಟಿದ್ದ ಚೀಲ ಸ್ಫೋಟಗೊಂಡಿದೆ ಎನ್ನಲಾಗಿದೆ. ಸಂತೆಯ ವೇಳೆ ಸಿಡಿಮದ್ದನ್ನು ತಂದಿದ್ದ ಚೀಲವನ್ನು ಅಂಗಡಿ ಬಳಿ … Continued

ಬೆಳ್ತಂಗಡಿ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಸಾವು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಬಳಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೇರಳದ ಸ್ವಾಮಿ(55), ವರ್ಗೀಸ್‌ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ … Continued