ದೆಹಲಿ ಸ್ಫೋಟ | ಹೊರಬಿದ್ದ ಇನ್ನೊಂದು ವೀಡಿಯೊ ; ಆತ್ಮಹತ್ಯಾ ಬಾಂಬರ್‌ ಉಮರ್ ನಬಿ ಸ್ಫೋಟಕ ತುಂಬಿದ ಕಾರು ಚಲಾಯಿಸಿದ ದೃಶ್ಯ ಸೆರೆ

 ನವದೆಹಲಿ: ಕಳೆದ ನವೆಂಬರ್ 10 ರಂದು ಕೆಂಪು ಕೋಟೆ (Red Fort) ಬಳಿ ನಡೆದ ಭೀಕರ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಕೆಂಪು ಕೋಟೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡಾ. ಉಮರ್ ನವೆಂಬರ್ 10 ರ ಬೆಳಿಗ್ಗೆ i20 ಕಾರಿನಲ್ಲಿ ಬದರ್ಪುರ ಗಡಿ ಟೋಲ್ ಮೂಲಕ ದೆಹಲಿಗೆ ಪ್ರವೇಶಿಸುತ್ತಿರುವುದನ್ನು ತೋರಿಸುವ ಹೊಸ … Continued

“ವೈಟ್ ಕಾಲರ್” ಭಯೋತ್ಪಾದನಾ ಜಾಲ ಪತ್ತೆ ; ಕಾಶ್ಮೀರದ ವೈದ್ಯನ ಫರೀದಾಬಾದ್‌ ಬಾಡಿಗೆ ಮನೆಯಲ್ಲಿ 2500 ಕೆಜಿ ಸ್ಫೋಟಕ ವಶ…!

ಫರಿದಾಬಾದ್: ಕೆಲವು ಗಂಟೆಗಳ 350 ಕೆ.ಜಿ. ಸ್ಫೋಟಕಗಳು ಮತ್ತು ಹಲವು ಶಸ್ತ್ರಾಸ್ತ್ರಗಳನ್ನು ಬಾಡಿಗೆ ಮನೆಯೊಂದರಿಂದ ವಶಪಡಿಸಿಕೊಂಡ ಬೆನ್ನಲ್ಲೇ, ಹರಿಯಾಣದ ಫರಿದಾಬಾದ್‌ನಲ್ಲಿ ಮತ್ತೊಂದು ಮನೆಯಿಂದ ಬರೋಬ್ಬರಿ 2,563 ಕೆ.ಜಿ. ಯಷ್ಟು ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವೈದ್ಯರಾದ ಡಾ. ಮುಜಮ್ಮಿಲ್ ಶಕೀಲ್ ಎಂಬಾತ ಬಾಡಿಗೆಗೆ ಪಡೆದಿದ್ದ. ಉಗ್ರಗಾಮಿತನಕ್ಕೆ ಒಳಗಾದ ವೃತ್ತಿಪರರನ್ನು … Continued

ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ ; ಮೂವರ ಬಂಧನ

ಬೆಂಗಳೂರು : ಬೆಂಗಳೂರಿನ ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಜಿಲೆಟಿನ್‌ ಹಾಗೂ ಡಿಟೊನೇಟರ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಗಣೇಶ, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಜುಲೈ 23ರಂದು ಮಧ್ಯಾಹ್ನ ಕಲಾಸಿಪಾಳ್ಯದ ಶೌಚಾಲಯದ ಬಳಿ ಜಿಲೆಟಿನ್‌, ಡಿಟೊನೇಟರ್‌ ಪತ್ತೆಯಾಗಿದ್ದವು. ನಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ 6 (ಆರ್.ಇ.ಎಕ್ಸ್ – … Continued

ಅಡಕೆ ಎಂದು ಭಾವಿಸಿ ಜಜ್ಜಿದಾಗ ಸಿಡಿಮದ್ದು ಸ್ಫೋಟ, ಮಹಿಳೆಗೆ ತೀವ್ರ ಗಾಯ

ಮೈಸೂರು: ಮನೆ ಬಳಿ ರಸ್ತೆಯಲ್ಲಿ ಬಿದ್ದಿದ್ದ ಸಿಡಿಮದ್ದನ್ನು ಅಡಕೆ ಎಂದು ಭಾವಿಸಿ ಚೂರು ಮಾಡಲು ಕಲ್ಲಿನಿಂದ ಜಜ್ಜಿದಾಗ ಅದು ಸ್ಫೋಟಗೊಂಡು ಮಹಿಳೆಯೊಬ್ಬರು ತೀವ್ರ ಗಾಯಗೊಂಡ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗ್ರಾಮದ ಕಮಲಮ್ಮ (55) ಎಂಬವರು ಗಾಯಗೊಂಡವರು. ಶುಕ್ರವಾರ ಬೆಳಗ್ಗೆ ಜಮೀನಿನಿಂದ ಮನೆಗೆ ಬರುತ್ತಿದ್ದ ವೇಳೆ … Continued

ಬೆಂಗಳೂರು : ಬೆಳ್ಳಂದೂರು ಶಾಲೆ ಬಳಿ ಸ್ಫೋಟಕ ವಸ್ತುಗಳು ಪತ್ತೆ ; ಆತಂಕ

ಬೆಂಗಳೂರು : ಬೆಂಗಳೂರಿನ ಶಾಲೆಯೊಂದರ ಮುಂಭಾಗ ಜಮೀನಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ ಎಂದು ವರದಿಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ, ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸ್ಫೋಟಕಗಳನ್ನು ಟ್ರ್ಯಾಕ್ಟರ್‌ ಒಂದರಲ್ಲಿ ಇಟ್ಟಿರುವುದು ಪತ್ತೆಯಾಗಿದೆ. ಕಟ್ಟಡ ನಿರ್ಮಾಣ ಮಾಡುವ … Continued

ಜಮ್ಮುವಿನಲ್ಲಿ ೯.೭೫ ಕೆಜಿ ಸ್ಫೋಟಕ ಪತ್ತೆ

ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ೯.೭೫ ಕೆಜಿಯಷ್ಟು ಸ್ಫೋಟಕ ಸಾಗಿಸುತ್ತಿದ್ದ ವ್ಯಕ್ತಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಗುಂಡಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ವ್ಯಕ್ತಿಯನ್ನು ಬಂಧಿಸಿ ಅವನಿಂದ ೭೮ ಜಿಲೆಟಿನ್‌ ಕಡ್ಡಿಗಳು, ೨೭೫ ಮೀಟರ್‌ ತಂತಿ ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕಿಸ್ತ್ವಾರ್‌ ಜಿಲ್ಲೆಯ ಜಲವಿದ್ಯುತ್‌ ಯೋಜನಾ ಪ್ರದೇಶದ ಸಮೀಪ ಅಡಗುದಾಣದಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ. ಜಿಲೆಟಿನ್ ಕಡ್ಡಿ, 3,267 ಡಿಟೊನೇಟರ್‌ಗಳು ಸೇರಿದಂತೆ ಹಲವಾರು ಇತರ ವಸ್ತುಗಳು ಪತ್ತೆಯಾಗಿವೆ. ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಪಿಕ್ ಅಪ್ ವಾಹನದಲ್ಲಿ 3,267 ಎಲೆಕ್ಟ್ರಾನಿಕ್ … Continued

ಅಂಬಾನಿ ಮನೆ ಬಳಿ ನಿಂತಿದ್ದ ಸ್ಫೋಟಕ ಹೊಂದಿದ ಎಸ್‌ಯುವಿ ಪ್ರಕರಣಕ್ಕೆ ದಿನಕ್ಕೊಂದು ತಿರುವು..!

ಮುಂಬೈ: ಕಳೆದ ವಾರ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ನಿಲುಗಡೆ ಮಾಡಿದ್ದ ಸ್ಫೋಟಕ ಹೊಂದಿರುವ ವಾಹನದ ಮಾಲೀಕ ಹಿರೆನ್ ಮನ್ಸುಖ್ ಶುಕ್ರವಾರ ನೆರೆಯ ಥಾಣೆ ಪ್ರದೇಶದ ಕೊಲ್ಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಗೃಹ ಸಚಿವರ ಹೇಳಿಕೆಯಿಂದ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಈಗ ಪ್ರಕರಣ ದಿನಕ್ಕೊಂದು ತಿರುವು … Continued

ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ

ಮುಂಬೈ: ಏಶಿಯಾದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಅವರ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ … Continued

ಸ್ಫೋಟಕ ವಸ್ತುಗಳ ಬಳಕೆ ಪರವಾನಿಗೆ ಪಡೆಯಲು ಇನ್ನಷ್ಟು ಕಾಲಾವಕಾಶ ಕೊಡಿ

ಬೆಂಗಳೂರು; ಕಲ್ಲು ಕ್ವಾರಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸ್ಫೋಟಕ ವಸ್ತುಗಳ ಪರವಾನಿಗೆ ಪಡೆಯಲು ಗಣಿ ಸುರಕ್ಷತಾ ಮಹಾ ನಿದೇರ್ಶಕರು( ಡಿಜಿಎಂಎಸ್) ನೀಡಿರುವ ಸಮಯಾವಕಾಶವನ್ನು  ಇನ್ನಷ್ಟು ‌ ವಿಸ್ತರಣೆ ಮಾಡುವಂತೆ ಕೋರಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಮನವಿ ಮಾಡಿದೆ. ಬುಧವಾರ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ … Continued