ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡಲ್ಲ ಎಂದು ಶ್ವೇತಭವನ ಸ್ಪಷ್ಟನೆ ; ಸುಳ್ಳು ಸುದ್ದಿ ಪ್ರಸಾರ ಮಾಡಿ ಕ್ಷಮೆಯಾಚಿಸಿದ ಪಾಕ್‌ ಸುದ್ದಿ ವಾಹಿನಿಗಳು…!

ನವದೆಹಲಿ: ಸೆಪ್ಟೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಸುಳ್ಳು ಸುದ್ದಿಯನ್ನು ಹರಡಿದ್ದಕ್ಕಾಗಿ ಪಾಕಿಸ್ತಾನದ ಟಿವಿ ಮಾಧ್ಯಮಗಳು ಜಾಗತಿಕವಾಗಿ ಮುಜುಗರ ಎದುರಿಸಬೇಕಾಯಿತು. ನಂತರ ಪಾಕಿಸ್ತಾನದ ಎರಡು ಪ್ರಮುಖ ಟಿವಿ ಸುದ್ದಿ ವಾಹಿನಿಗಳು ವರದಿಗಳನ್ನು ಹಿಂತೆಗೆದುಕೊಂಡವು, ಅವುಗಳಲ್ಲಿ ಒಂದು ಟಿವಿ ಸುದ್ದಿವಾಹಿನಿ ಕ್ಷಮೆಯಾಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಮಾ ಟಿವಿ, ಜಿಯೋ … Continued

ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್‌ ಉಪಪ್ರಧಾನಿ..!

ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ … Continued

ರೈತನ ಆತ್ಮಹತ್ಯೆ ಸುಳ್ಳು ಸುದ್ದಿ ಟ್ವೀಟ್‌ ಮಾಡಿದ ಆರೋಪ ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದರಿಂದ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಹಾವೇರಿ ಸೆನ್‌ (ಸೈಬರ್‌, … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪೋಸ್ಟ್‌ : 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂಬ ಸುಳ್ಳು ಸುದ್ದಿಯನ್ನು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ. ಈ … Continued