ಜಗಳ ಬಗೆಹರಿಸಲು ಬಂದ ಪತ್ನಿ ಸಂಬಂಧಿಕರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ ಪತಿ: ಒಬ್ಬರು ಸಾವು, ಮೂವರಿಗೆ ಗಾಯ

ಯಾದಗಿರಿ : ದಂಪತಿ ಜಗಳ ಸರಿಮಾಡಲು ಹೋಗಿದ್ದ ಪತ್ನಿಯ ಸಂಬಂಧಿಕರನ್ನೇ ಮನೆಯಲ್ಲಿ ಕೂಡಿಹಾಕಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದು, ಈ ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿ, ಇತರ ಮೂವರು ಗಾಯಗೊಂಡ ಘಟನೆ ನಾರಾಯಣಪುರದ ಛಾಯಾ ಕಾಲೊನಿಯಲ್ಲಿ ಬುಧವಾರ ನಡೆದಿದೆ‌. ಆರೋಪಿ ಶರಣಪ್ಪ  ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ … Continued