ಹೋರಾಟಕ್ಕೆ ೧೦೦ನೇ ದಿನ: ರೈತರಿಂದ ಕರಾಳ ದಿನಾಚರಣೆ

ನವ ದೆಹಲಿ: ಕೇಂದ್ರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ೧೦೦ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ರೈತರು ಕರಾಳ ದಿನ ಆಚರಿಸಿದರು. ಹಾಗೂ ಕುಂಡಲಿ- ಮನೇಸಾರ್ ಪಲ್ ವಾಲ್ ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ೫ ಗಂಟೆ ಹೆದ್ದಾರಿ ತಡೆ ನಡೆಸಲಾಯಿತು.ಅಲ್ಲದೆ, ರೈತರ ಹೋರಾಟ ೧೦೦ ದಿನ … Continued

ರೈತರ ಆಂದೋಲನಕ್ಕೆ ಧ್ವನಿಯಾಗುವವರ ವಿರುದ್ಧ ಐಟಿ ದಾಳಿ; ರಾಹುಲ್‌

ನವ ದೆಹಲಿ:ದೇಶದಲ್ಲಿ ನಡೆಯುತ್ತಿರುವ ರೈತರ ಆಂದೋಲನಕ್ಕೆ ಧ್ವನಿಗೂಡಿಸುವವರ ವಿರುದ್ಧ ಮೋದಿ ಸರ್ಕಾರ ದಾಳಿ ನಡೆಸಿ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗುರುವಾರ ಮೂರು ಖ್ಯಾತ ಹಿಂದಿ ಪದ್ಯಗಳ ಸಾಲುಗಳನ್ನು ಬಳಸುವ ಮೂಲಕ ಕೇಂದ್ರ ಸರ್ಕಾರವನ್ನು ಟೀಕಿಸಿದರು. ರೈತರ ಪರವಾಗಿರುವವರ ಮೇಲೆ ದಾಳಿ ನಡೆಸಿದ್ದಾರೆ … Continued

ಜೈಲಿನಿಂದ ಹೊರಬಂದು ಮತ್ತೆ ರೈತ ಹೋರಾಟಕ್ಕೆ ಸಜ್ಜಾದ ನೋದೀಪ್‌ ಕೌರ್‌

ಹಿಂಸಾತ್ಮಕ ಪ್ರತಿಭಟನೆಗೆ ಕಾರಣರೆಂಬ ಆರೋಪಕ್ಕೆ ೪೫ ದಿನಗಳ ಕಾರಾಗೃಹವಾಸ ಪೂರ್ಣಗೊಳಿಸಿ ಬಿಡುಗಡೆಗೊಂಡಿರುವ ಸಾಮಾಜಿಕ ಕಾರ್ಯಕರ್ತೆ ನೋದೀಪ್‌ ಕೌರ್‌ (೨೩) ರೈತರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕರ್ನಾಲ್‌ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ನೋದೀಪ್‌, ತಾನು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ರೈತರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ನಾನು ಜೈಲಿನಿಂದ ಹೊರಬಂದಿದ್ದೇನೆ, … Continued

ರೈತರೊಂದಿಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಮಾತುಕತೆ ನಡೆಸಲಿ:ಹೊಸ ಸಲಹೆ ಮುಂದಿಟ್ಟ ಬಿಕೆಯು

ಲಕ್ನೋ: ರೈತರ ಪ್ರತಿಭಟನೆಯ ಕುರಿತಾದ ತೊಡಕು ಪರಿಹರಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರೈತರೊಂದಿಗೆ ಮಾತುಕತೆ ನಡೆಸಬೇಕೆಂದು ಭಾರತೀಯ ಕಿಸಾನ್ ಯೂನಿಯನ್ (ಟಿಕೈಟ್) ಸೂಚಿಸಿದೆ. ಒಂದು ಸಮಯದಲ್ಲಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕು ಎಂಬ ಅವರ ಬೇಡಿಕೆಯನ್ನು ಈಡೇರಿಸಲಾಗಿಲ್ಲ ಮತ್ತು ಪ್ರಧಾನಿ ವಾಗ್ದಾಳಿ ಬಸ್ತಿ ಜಿಲ್ಲೆಯ ಮುಂದರ್ವಾದಲ್ಲಿ ಮಹಾಪಂಚಾಯತಿಯನ್ನುದ್ದೇಶಿಸಿ ಮಾತನಾಡಿದ ಬಿಕೆಯು ಅಧ್ಯಕ್ಷ ನರೇಶ್ ಟಿಕಾಯಿಟ್: “ಕೇಂದ್ರ … Continued

ಜನ ಬೀದಿಗೆ ಬಂದ್ರೆ ಸರ್ಕಾರಗಳೇ ಬದ್ಲಾಗಿವೆ, ಇನ್ನು ಕಾಯ್ದೆ ಯಾವ ಲೆಕ್ಕ

ಹರಿಯಾಣ: ಜನರು ಬೀದಿಗೆ ಬಂದರೆ ಸರಕಾರಗಳೇ ಬದಲಾಗಿವೆ, ಇನ್ನು ಕಾಯ್ದೆಗಳು ಯಾವ ಲೆಕ್ಕ ಎಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಹೇಳಿದ್ದಾರೆ. ಅವರು ಸೋನಿಪತ್‌ ಜಿಲ್ಲೆಯಲ್ಲಿ ನಡೆದ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಮಾತನಾಡಿ, ಜನರನ್ನು ಸೇರಿಸಿದರೆ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲಾಗುವುದಿಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಜನರು ಬೀದಿಗೆ ಬಂದರೆ ಸರಕಾರಗಳೇ ಬದಲಾಗುತ್ತವೆ ಎಂಬುದನ್ನು ಸಚಿವರು ಮರೆಯಬಾರದು … Continued

ಪ್ರತಿಭಟನಾನಿರತ ರೈತ ಮುಖಂಡರನ್ನು ಭೇಟಿ ಮಾಡಲಿರುವ ದೆಹಲಿ ಸಿಎಂ ಕೇಜ್ರಿವಾಲ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಆಂದೋಲನದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ದೆಹಲಿ ವಿಧಾನಸಭೆ ಸಭಾಂಗಣದಲ್ಲಿ ಭಾನುವಾರ ಕೇಜ್ರಿವಾಲ್‌, ಹೋರಾಟ ನಿರತ ರೈತರನ್ನು ಭೇಟಿ ಮಾಡಿ ಕೃಷಿ ಕಾನೂನುಗಳು ಹಾಗೂ ರೈತರ ಕಾಳಜಿ ಕುರಿತು ಚರ್ಚಿಸಲಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ, ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ, ಸಿಎಂ ಕೇಜ್ರಿವಾಲ್ … Continued

ಮಾ.೨೦ರಿಂದ ರಾಜ್ಯದಲ್ಲಿ ರೈತರ ಸಮಾವೇಶ

ದೆಹಲಿಯಲ್ಲಿ ರೈತ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಾರ್ಚ್‌ ೨೦ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತ ಸಮಾವೇಶ ಆಯೋಜಿಸಲಾಗುವುದು ಎಂದು ರೈತ ಸಂಘದ ವರಿಷ್ಠೆ ಚುಕ್ಕಿ ನಂಜುಂಡಸ್ವಾಮಿ ಹೇಳಿದ್ದಾರೆ. ಮಾ.೨೦ರಂದು ಶಿವಮೊಗ್ಗ, ಮಾ.೨೧ರಂದು ಹಾವೇರಿ, ಮಾ.೨೨ರಂದು ಬೆಳಗಾವಿಯಲ್ಲಿ ರೈತ ಸಮಾವೇಶ ನಡೆಯಲಿದೆ. ಸಮಾವೇಶಗಳಲ್ಲಿ ಭಾರತೀಯ ಕಿಸಾನ ಯೂನಿಯನ್‌ ಮುಖಂಡ … Continued

ದೆಹಲಿ ಗಡಿಗಳಲ್ಲಿ ಸಂಚಾರಕ್ಕೆ ನಿರ್ಬಂಧ

ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ರೈತರು ಆಂದೋಲನವನ್ನು ಮುಂದುವರಿಸುತ್ತಿರುವುದರಿಂದ ಘಾಜಿಪುರ, ಟಿಕ್ರಿ ಮತ್ತು ಸಿಂಗು ಗಡಿಗಳನ್ನು ನಿರ್ಬಂಧಿಸಲಾಗಿದೆ. ಗರಿಷ್ಠ ಪ್ರಯಾಣದ ಸಮಯದಲ್ಲಿ ರಾಜಧಾನಿಯ ಕೆಲವು ಭಾಗಗಳಲ್ಲಿ ಭಾರಿ ಟ್ರಾಫಿಕ್ ಜಾಮ್‌ಗೆ ಕಾರಣವಾಗಬಹುದಾದ ದಟ್ಟಣೆಯನ್ನು ದೆಹಲಿ ಪೊಲೀಸರು ತಿರುಗಿಸಿದ್ದಾರೆ. ಆಂದೋಲನದಿಂದಾಗಿ ಗಾಜಿಪುರ-ಗಾಜಿಯಾಬಾದ್ (ಯುಪಿ ಗೇಟ್) ಗಡಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿರುವುದರಿಂದ ದೆಹಲಿ ಮತ್ತು ಗಾಜಿಯಾಬಾದ್ ಗರಿಷ್ಠ ಸಮಯದಲ್ಲಿ … Continued

ರೈತರ ಬೇಡಿಕೆ ಈಡೇರುವ ವರೆಗೂ ಸರ್ಕಾರಕ್ಕೆ ಶಾಂತಿಯಿಂದಿರಲು ಬಿಡಲ್ಲ

ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಶಾಂತಿಯಿಂದ ಕುಳಿತುಕೊಳ್ಳಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಮುಂಚೂಣಿಯಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯಿತ್‌ ಹೇಳಿದ್ದಾರೆ. ರೈತರ “ಮಹಾಪಂಚಾಯತ್” ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಆಂದೋಲನಕ್ಕೆ ಮುಂದಾಗಿರುವ 40 ನಾಯಕರು ಇಡೀ ದೇಶದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರವು ನಮ್ಮ ಪರವಾಗಿ ತೀರ್ಮಾನಿಸುವ … Continued

ರೈತ ವಿರೋಧಿ ಕಾನೂನುಗಳು ದೇಶವಾಸಿಗಳ ಮೇಲೆ ನಡೆಸಿದ ದಾಳಿ: ರಾಹುಲ್‌ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ದಾಳಿ ಮುಂದುವರೆಸಿದ ರಾಹುಲ್‌ ಗಾಂಧಿ, ರೈತ ವಿರೋಧಿ ಮೂರು ಕಾನೂನುಗಳು ಕೇವಲ ರೈತರ ಮೇಲಷ್ಟೇ ಅಲ್ಲ, ದೇಶದ ಶೇ.೪೦ರಷ್ಟು ಜನರ ಮೇಲೆ ನಡೆಸಿದ ಆಕ್ರಮಣವಾಗಿದೆ ಎಂದು ತಿಳಿಸಿದ್ದಾರೆ. ಅವರು ರಾಜಸ್ಥಾನದಲ್ಲಿ ರೈತರ ಆಂದೋಲನ ಬೆಂಬಲಿಸಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿ, ಉತ್ತಮ ಭವಿಷ್ಯ ಖಚಿತಪಡಿಸಿಕೊಳ್ಳಲು … Continued