ರೈತರ ಪ್ರತಿಭಟನೆ: ಯು ಟರ್ನ್‌ ಹೊಡೆದ ಕೆನಡಾ ಪ್ರಧಾನಿ

ನವ ದೆಹಲಿ: ಈಗ ಯು-ಟರ್ನ್ ಹೊಡೆದಿರುವ ಕೆನಡಾ ಪ್ರಧಾನಿ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಆಂದೋಲನ ಮಾಡುತ್ತಿರುವ ರೈತರೊಂದಿಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದ್ದಕ್ಕಾಗಿ ಭಾರತ ಸರ್ಕಾರವನ್ನು ಶ್ಲಾಘಿಸಿದ್ದಾರೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆಯ ಸಂದರ್ಭದಲ್ಲಿ ಈ ವಿಷಯವನ್ನು ತಿಳಿಸಿದರು. ವಿಶೇಷವೆಂದರೆ ಕೆನಡಾ … Continued

ಫೆ,೧೮ರಂದು ರಾಷ್ಟ್ರವ್ಯಾಪಿ ರೈಲು ತಡೆ:ಸಂಯುಕ್ತ ಕಿಸಾನ್‌ ಮೋರ್ಚಾ ಘೋಷಣೆ

ನವ ದೆಹಲಿ: ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿದ ರೈತ ಸಂಘಗಳು ಫೆಬ್ರವರಿ 18 ರಂದು ರಾಷ್ಟ್ರವ್ಯಾಪಿ ನಾಲ್ಕು ತಾಸುಗಳ ರೈಲು ತಡೆ ಚಳವಳಿ ಮಾಡುವುದಾಗಿ ಪ್ರಕಟಿಸಿವೆ. ಫೆಬ್ರವರಿ 12 ರಿಂದ ರಾಜಸ್ಥಾನದಲ್ಲಿ ಟೋಲ್ ಸಂಗ್ರಹಣೆಗೆ ನೀಡುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆಬ್ರವರಿ … Continued

ರೈತರ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗುವುದು ಬೇಡ

ರಾಯಚೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗಬಾರದು. ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಚಳಿ ಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. .ಕೇಂದ್ರ ಸರ್ಕಾರ ಅವಸರದಲ್ಲಿ ವಿಧೇಯಕ ಪಾಸು ಮಾಡಬಾರದಿತ್ತು. ಕೃಷಿ ಮಸೂದೆಗೆ ಎರಡ್ಮೂರು ತಿಂಗಳ ಕಾಲಾವಕಾಶ … Continued

ಗಾಜಿಪುರ ರೈತ ಹೋರಾಟಕ್ಕೆ ಕರ್ನಾಟಕದ ೫೦ ರೈತರು

ಗಾಜಿಪುರ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತೀಯ ಕಿಸಾನ್‌ ಯೂನಿಯನ್‌ ನಡೆಸುತ್ತಿರುವ ಚಳವಳಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ೫೦ ಜನ ರೈತರ ಗುಂಪು ಸೋಮವಾರ ಆಗಮಿಸಿತು. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಹೋರಾಟಗಾರರ ಡೇರೆಗಳನ್ನು ಕರ್ನಾಟಕದ ಕೃಷಿಕರು ಸೇರಿಕೊಂಡರು. ನಾವು ಬೆಂಗಳೂರು ಹಾಗೂ ಮೈಸೂರಿನಲ್ಲಿ ರೈತ ಪರ ಹೋರಾಟದಲ್ಲಿ ಪಾಲ್ಗೊಂಡಿದ್ದೇವೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದೆವೆ. … Continued

ಈಗ ಸತ್ಯಾಗ್ರಹದ ರೂಪ ಪಡೆಯುತ್ತಿರುವ ರೈತ ಆಂದೋಳನ

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ನಂತರ, ಕೆಲ ದುಷ್ಟಶಕ್ತಿಗಳು ಸೇರಿಕೊಂಡು ಮಾಡಿದ ಹಿಂಸೆ ಪ್ರಾಮಾಣಿಕವಾದ ಅಹಿಂಸಾತ್ಮಕ ಪ್ರತಿಭಟನೆ ದುರ್ಬಲಗೊಳಿಸುವುದನ್ನು ತಡೆಯುವುದು ಎಷ್ಟು ಕಷ್ಟ ಎಂಬ ಬಗ್ಗೆ ಸಾಕಷ್ಟು ಅಭಿಪ್ರಾಯಗಳಿವೆ. ಆದರೆ ಫೆ.೧ರಿಂದ ಮತ್ತೆ ಅಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ ದೆಹಲಿಯ ಹೊರವಲಯದ ಸಿಂಘು ಗಡಿಗೆ ಸೀಮಿತವಾಗಿದ್ದ ಈ ಅಹಿಂಸಾತ್ಮಕ ಪ್ರತಿಭಟನೆ, ಸತ್ಯಾಗ್ರಹದ ರೂಪದಲ್ಲಿ ಈಗ … Continued

ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಇನ್ನೂ ರೈತನಿಗೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಆದರೆ ಈಗ ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಿದ್ದೇವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಬೆಂಬಲ ಬೆಲೆ ನೀಡಿದ್ದು ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ ಎಂಬ … Continued

ಪಂಜಾಬ್‌-ಹರ್ಯಾಣದಲ್ಲಿ ಚಕ್‌ ಜಾಮ್‌ ಯಶಸ್ವಿ

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ ರೈತರು ಶನಿವಾರ ರೈತ ಸಂಘಟನೆಗಳು ಕರೆ ನೀಡಿದ ದೇಶವ್ಯಾಪಿ ರಸ್ತೆ ಅಂಗವಾಗಿ ನಡೆದ ಚಳವಳಿ ಪಂಜಾಬ್ ಮತ್ತು ಹರಿಯಾಣದಲ್ಲಿ ಸಂಪೂರ್ಣ ಯಶಸ್ವಿಗೊಂಡಿತು. ಪಂಜಾಬ್‌ ಹಾಗೂ ಹರಿಯಾಣದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ರಸ್ತೆಗಿಳಿದು ಸಂಚಾರವನ್ನು ತಡೆದರು.ಟ್ರಾಕ್ಟರ್‌ಗಳ ಮೂಲಕ ಬಂದ ರೈತರು ರಸ್ತೆಯಲ್ಲಿ ಜಮಾಯಿಸಿದರು. ಮುಖಂಡರ ಮಾರ್ಗದರ್ಶನದಲ್ಲಿ ಶಾಂತ ರೀತಿಯ … Continued

ಸಂಯಮದಿಂದ ವರ್ತಿಸಲು ಸರ್ಕಾರ-ರೈತರಿಗೆ ವಿಶ್ವಸಂಸ್ಥೆ ಮನವಿ

ನವದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಹಾಗೂ ಭಾರತೀಯ ಅಧಿಕಾರಿಗಳು ಮನವ ಹಕ್ಕುಗಳಿಗೆ ಧಕ್ಕೆಯಾಗದಂತೆ ಸಂಯಮದಿಂದ  ನಡೆದುಕೊಳ್ಳಬೇಕೆಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ. ಎಲ್ಲರಿಗೂ ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ “ಸಮನಾದ ಪರಿಹಾರಗಳನ್ನು” ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿಗೆ ಮಾನವ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು ಎಂದು ವಿಶ್ವಸಂಸ್ಥೆಯ ಮಾನವ … Continued

ರೈತರ ಹೋರಾಟ: ಮೋದಿ ಸರ್ಕಾರಕ್ಕೆ ಉಗುಳಲೂ ಆಗದ ನುಂಗಲೂ ಆಗದ ತುತ್ತು

ಕೇಂದ್ರದ ಮೋದಿ ಸರ್ಕಾರವು ಕೃಷಿ ಕಾನೂನುಗಳ ಯುದ್ಧದಲ್ಲಿ ಕೆಲವಷ್ಟನ್ನು ಕಳೆದುಕೊಂಡಿದೆ, ಆದರೆ ಕಳೆದುಕೊಂಡಿದ್ದನ್ನು ಮರೆಮಾಚಲು ಮುಗಿದು ಹೋಗಿದ್ದ ಹಾಗೂ ಮುಗಿಯಲೇ ಬೇಕಾಗಿದ್ದ ಸಿಖ್ ಪ್ರತ್ಯೇಕತಾವಾದಿ ವಿಷಯವನ್ನುಮತ್ತೆ ಮುನ್ನೆಲೆಗೆ ತರುವ ದುಸ್ಸಾಹಸಕ್ಕೆ ಕೈ ಹಾಕಿದೆ. ಈಗ ರೈತರ ಪ್ರತಿಭಟನೆಗೆ ಮೂರು ತಿಂಗಳಾಗಿದೆ. ದೆಹಲಿಯ ಹೊರವಲಯದಲ್ಲಿ ರೈತರು ನಿರಂತರವಾಗಿ ಒಂದೇ ಸಮನೆ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರದ … Continued

ನಾಳೆ ದೇಶಾದ್ಯಂತ ರೈತರಿಂದ ರಸ್ತೆತಡೆ

ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಫೆ.೬ರಂದು ಕರೆನೀಡಿದ ರಸ್ತೆ ತಡೆ ಚಳವಳಿಯಿಂದ  ಹಲವು ರಾಜ್ಯಗಳಲ್ಲಿ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರಕಾರ ಆಯವ್ಯಯದಲ್ಲಿ ರೈತರ ಬೇಡಿಕೆಗಳನ್ನು ಕಡೆಗಣಿಸಿದ್ದನ್ನು ಖಂಡಿಸಿ ದೇಶಾದ್ಯಂತ ರಸ್ತಾ ರೋಕೊ ನಡೆಸಲಾಗುತ್ತಿದೆ. ದೆಹಲಿಯನ್ನು ಹೊರತುಪಡಿಸಿ, ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಕೆಲವೆಡೆ ಮತ್ತು … Continued