ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರಿಂದ ‘ಅಪ್ಪಿಕೋ’ ಚಳವಳಿ ; ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವನ್ನು ಮತ್ತಷ್ಟು ತೀವ್ರಗೊಳಿಸಿರುವ ನೂರಾರು ರೈತರು ಭಾನುವಾರ ‘ಅಪ್ಪಿಕೋ’ (ಮರ ಅಪ್ಪಿಕೊಳ್ಳುವ) ಚಳವಳಿಗೆ ಚಾಲನೆ ನೀಡಿದ್ದಾರೆ.  ತಮ್ಮ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಹಾಗೂ ಯೋಜನೆಗಾಗಿ ಮರಗಳನ್ನು ಕಡಿಯಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿರುವ ಅವರು ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ … Continued

ಮುಧೋಳ | ಭುಗಿಲೆದ್ದ ರೈತರ ಆಕ್ರೋಶ ; ಕಬ್ಬು ತುಂಬಿದ್ದ ಹಲವಾರು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ; ಲೋಡ್‌ ಗಟ್ಟಲೆ ಕಬ್ಬು ಸುಟ್ಟು ಕರಕಲು

ಬಾಗಲಕೋಟೆ: ಪ್ರತಿ ಟನ್​​ ಕಬ್ಬಿಗೆ 3,500 ರೂ.ಗಳನ್ನು ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಹಲವಾರು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರೂ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ … Continued

ಮೃತ ತಾಯಿಯ ಕೊನೆಯ ಆಸೆ ಈಡೇರಿಸಿದ ಮಗ ; ಗ್ರಾಮದ 290 ರೈತರ 30 ವರ್ಷದ ಸಾಲ ತೀರಿಸಿದ ಉದ್ಯಮಿ….!

 ಸೂರತ್:  ಹಣದಿಂದ ಭಾವನೆಗಳನ್ನು ಖರೀದಿಸಲು ಸಾಧ್ಯವಿಲ್ಲದೆ ಇರಬಹುದು, ಆದರೆ ಹಣದ ವಿವೇಕಯುತ ಬಳಕೆಯು ತೊಂದರೆಯಲ್ಲಿರುವವರ ಜೀವನವನ್ನು ಬೆಳಗಿಸಬಲ್ಲದು. ಇಂತಹ ಒಂದು ಅಪರೂಪದ ಮಾನವೀಯ ನಿದರ್ಶನವು ಸೂರತ್ತಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಲ್ಲಿನ ಉದ್ಯಮಿ ಬಾಬುಭಾಯಿ ಜಿರಾವಾಲಾ (ಚೋಡ್ವಾಡ್ಯಾ) ಅವರು ತಮ್ಮ ತಾಯಿಯ ಪುಣ್ಯತಿಥಿಯ ನೆನಪಿಗಾಗಿ ಅಮ್ರೇಲಿ ಜಿಲ್ಲೆಯ ತಮ್ಮ ಜಿರಾ ಗ್ರಾಮದ 290 ರೈತರ 30 … Continued

ರಾಜ್ಯದ ತೊಗರಿ ಬೆಳೆಗಾರರಿಗೆ ಸಿಹಿ ಸುದ್ದಿ ; ಪ್ರೋತ್ಸಾಹ ಧನ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ‌ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 450 ರೂ.ಗಳ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ, ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ. ರಾಜ್ಯ ಸರ್ಕಾರದ ವತಿಯಿಂದ ತೊಗರಿ ಪ್ರತಿ ಕ್ವಿಂಟಾಲ್‌ಗೆ 450 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued

ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ: ಎಸಿ ಕಚೇರಿ ಪೀಠೋಪಕರಣ ಒಯ್ದ ರೈತರು

ಬೆಳಗಾವಿ : ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಪೀಠೋಪರಣ, ಪ್ರಿಂಟರ್, ಕಂಪ್ಯೂಟರ್ ಗಳನ್ನು ರೈತರು ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಜಪ್ತಿ ಮಾಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ವಿಸ್ತರಣೆಗೆ ಅಲ್ಲಿನ ಪರಿಸರದ ರೈತರು ಜಮೀನು … Continued

ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದಿಗೆ ಮುಂದಾದ ಕಂಪನಿ: ಬೆಳೆಗಾರರಿಗೆ ಎದುರಾಯ್ತು ದರ ಕಡಿಮೆಯಾಗುವ ಆತಂಕ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ. ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದ್ದು, ಶ್ರೀಲಂಕಾ ಮೂಲದ ವ್ಯಾಪಾರಿ … Continued

ರೈತ ಮುಖಂಡರು-ಕೇಂದ್ರ ಸಚಿವರ ಮಾತುಕತೆ ವಿಫಲ : ದೆಹಲಿ ಚಲೋ ಮೆರವಣಿಗೆ ಆರಂಭ ; 30 ನಿಮಿಷದಲ್ಲಿ ಬ್ಯಾರಿಕೇಡ್‌ ತುಂಡು ಮಾಡ್ತೇವೆ ಎಂದ ರೈತರು

ನವದೆಹಲಿ: ಸೋಮವಾರ ತಡರಾತ್ರಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವಿನ ಮಹತ್ವದ ಸಭೆ ಯಾವುದೇ ನಿರ್ಣಯವಿಲ್ಲದೆ ಅಂತ್ಯಗೊಂಡಿದ್ದು, ರೈತರು ಇಂದು, ಮಂಗಳವಾರ ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು, ಮಂಗಳವಾರ ಬೆಳಗ್ಗೆ 10 ಗಂಟೆಗೆ ‘ದೆಹಲಿ ಚಲೋ’ ಮೆರವಣಿಗೆ ಆರಂಭಗೊಂಡಿದ್ದು, ಪಂಜಾಬ್‌ನ ಸಂಗ್ರೂರ್‌ನಿಂದ ರೈತರು 2,500 ಟ್ರಾಕ್ಟರ್ ಟ್ರಾಲಿಗಳಲ್ಲಿ ಹರಿಯಾಣ ಮೂಲಕ ದೆಹಲಿಗೆ … Continued

ಸಾಲಮನ್ನಾದ ಆಸೆಗೆ ಬರಗಾಲ ಬರಲೆಂದು ರೈತರು ಬಯಸ್ತಾರೆ ; ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಚಿವ ಶಿವಾನಂದ ಪಾಟೀಲ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. … Continued

ವೈನ್ ಮದ್ಯವಲ್ಲ, ವೈನ್ ಮಾರಾಟ ಹೆಚ್ಚಾದರೆ ರೈತರಿಗೆ ಲಾಭ

ಮುಂಬೈ: ವೈನ್ ಮದ್ಯವಲ್ಲ, ವೈನ್ ಮಾರಾಟ ಹೆಚ್ಚಿದರೆ ರೈತರಿಗೆ ಹೆಚ್ಚಿನ ಲಾಭ ಬರುತ್ತದೆ ಎಂದು ಶಿವಸೇನೆಯ ಮುಖಂಡ ಸಂಜಯ ರಾವತ್ ಹೇಳಿದ್ದಾರೆ. ರಾಜ್ಯದ ಸೂಪರ್ ಮಾರ್ಕೆಟುಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲಿ ರಾವತ್ ಈ ರೀತಿ ಸಮರ್ಥಿಸಿಕೊಂಡಿದ್ದಾರೆ. ಈ ಕ್ರಮದಿಂದ ರೈತರ ಆದಾಯ ದ್ವಿಗೊಳ್ಳಲಿದೆ. ಆದರೆ ಬಿಜೆಪಿ … Continued