ʼನ್ಯಾಶನಲ್‌ ಕಾನ್ಫರೆನ್ಸ್ʼನಲ್ಲಿ ಭಿನ್ನಮತ ಸ್ಫೋಟ; ಪಕ್ಷ-ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ರೂಹುಲ್ಲಾ ಮೆಹ್ದಿ ನಿರ್ಧಾರ

ಶ್ರೀನಗರ: ಶ್ರೀನಗರ ಲೋಕಸಭಾ ಕ್ಷೇತ್ರದ ನ್ಯಾಶನಲ್‌ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಸಂಸದ ಆಗಾ ರೂಹುಲ್ಲಾ ಮೆಹ್ದಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಿದ್ದಾರೆ. ಪಕ್ಷದ ನಾಯಕತ್ವದ ಜೊತೆಗೆ ಉಂಟಾಗಿರುವ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳೇ ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಆಗಾ … Continued

ಫಾರೂಕ್ ಅಬ್ದುಲ್ಲಾ ಮೇಲೆ ಗುಂಡು ಹಾರಿಸಲು ಯತ್ನ : ಕೂದಲೆಳೆ ಅಂತರದಲ್ಲಿ ಪಾರು

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಶುಕ್ರವಾರ ರಾತ್ರಿ ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ನಡೆದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೊಲೀಸರ ಪ್ರಕಾರ, ರಾತ್ರಿ 10:30ರ ಸುಮಾರಿಗೆ ಅಬ್ದುಲ್ಲಾ ಮತ್ತು ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಗುಂಡು … Continued

ವೀಡಿಯೊ…| ವೈಷ್ಣೋದೇವಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಅದ್ಭುತವಾಗಿ ಭಜನೆ ಹಾಡಿದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ…!

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ (Jammu & Kashmir) ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಅವರು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಜನೆ ಹಾಡಿದ್ದಾರೆ. ಮಾತಾ ವೈಷ್ಣೋದೇವಿ ತೀರ್ಥೋದ್ಭವದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ‘ತುನೆ ಮುಜೆ ಬುಲಾಯ ಶೆರಾವಾಲಿಯೇ’ ಭಜನೆ … Continued

ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಇಡೀ ಜಗತ್ತಿಗೆ ಸೇರಿದವನು : ಫಾರೂಕ್ ಅಬ್ದುಲ್ಲಾ

ಅಯೋಧ್ಯಾ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಹಕರಿಸಿದ ಜನರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಅಭಿನಂದಿಸಿದ್ದಾರೆ. ರಾಮಮಂದಿರದ ಮಹಾ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. “ಅಯೋಧ್ಯೆ ರಾಮ ಮಂದಿರವು ಉದ್ಘಾಟನೆಗೊಳ್ಳಲಿದೆ. ದೇವಾಲಯಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಅದು ಈಗ ಸಿದ್ಧವಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ … Continued

ಫಾರೂಕ್ ಅಬ್ದುಲ್ಲಾಗೆ ಕೊರೊನಾ ಸೋಂಕು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೊನಾ ದೃಢಪಟ್ಟಿದ್ದು, ಸಣ್ಣಪುಟ್ಟ ಲಕ್ಷಣಗಳು ಕಂಡು ಬಂದಿವೆ. ಪರೀಕ್ಷೆ ವರದಿ ಬರುವವರೆಗೂ ನಾನು ಮತ್ತು ನಮ್ಮ ಕುಟುಂಬದ ಎಲ್ಲಾ ಸದಸ್ಯರೂ ಐಸೋಲೇಷನ್ ನಲ್ಲಿ ಇರಲಿದ್ದೇವೆ. ನಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು … Continued

ಆಸ್ತಿ ಮುಟ್ಟುಗೋಲು ಪ್ರಶ್ನಿಸಿ ಫಾರುಕ್‌ ಹೈಕೋರ್ಟಿಗೆ ಮೊರೆ

ಶ್ರೀನಗರ: ಆಸ್ತಿ ಮುಟ್ಟುಗೋಲು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದಡಿಸೆಂಬರ್‌ 19ರಂದು … Continued