ತಂದೆಯ ಅಚಾತುರ್ಯಕ್ಕೆ ಪುಟ್ಟ ಮಗು ಸಾವು: ವಾಹನ ರಿವರ್ಸ್‌ ತೆಗೆದುಕೊಳ್ಳುವಾಗ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ವಾಹನ

ಬೆಂಗಳೂರು: ಇಟ್ಟಿಗೆ ತುಂಬಿದ್ದ ವಾಹನವನ್ನು ಹಿಂದಕ್ಕೆ ತೆಗೆಯುವಾಗ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಹರಿದು ಕಂದಮ್ಮ ಸಾವಿಗೀಡಾದ ಘಟನೆ ಬೆಂಗಳೂರು ಹೊರವಲಯ ಕಾಮನಹಳ್ಳಿ ಸಮೀಪದ ಗೋಣಿಘಟ್ಟಪುರದಲ್ಲಿ ನಡೆದಿದೆ. ಒಂದೂವರೆ ವರ್ಷದ ಮನಿಶಾ ದೇವಿ ಮೃತ ಮಗು ಎಂದು ಗುರುತಿಸಲಾಗಿದೆ. ಮಗುವಿನ ತಂದೆ ಬಾಲಕೃಷ್ಣ ಅವರೇ ವಾಹನವನ್ನು ಹಿಂದಕ್ಕೆ ಚಲಾಯಿಸುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. … Continued