ನಿತಿನ್ ಗಡ್ಕರಿ ವಿರುದ್ಧ ಅಪಪ್ರಚಾರ ಆರೋಪ; ನಾಲ್ವರು ಇನ್‌ಫ್ಲುವೆನ್ಸರ್‌ಗಳ ವಿರುದ್ಧ ಎಫ್‌ಐಆರ್

ನಾಗ್ಪುರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ಸಂಚು ರೂಪಿಸಿ ಅಪಪ್ರಚಾರ ನಡೆಸಿದ ಆರೋಪದಡಿ ಬಿಹಾರದ ಖ್ಯಾತ ಯೂಟ್ಯೂಬರ್ ಮಣೀಶ ಕಶ್ಯಪ್ ಸೇರಿದಂತೆ ನಾಲ್ವರು ಸಾಮಾಜಿಕ ಜಾಲತಾಣ ಇನ್‌ಫ್ಲುವೆನ್ಸರ್‌ಗಳ ವಿರುದ್ಧ ನಾಗ್ಪುರ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಣೀಶ ಕಶ್ಯಪ್ ಹೊರತುಪಡಿಸಿ, ದೇಸಿ ಬಾಯ್ಸ್ ಎನ್‌ಸಿಆರ್ (Desi … Continued

ಕಬಡ್ಡಿ ಪಂದ್ಯಾವಳಿಯಲ್ಲಿ ಬೆಟ್ಟಿಂಗ್: ಗೃಹ ಸಚಿವ ಪರಮೇಶ್ವರ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ಬೆಂಗಳೂರು : ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ವಿರುದ್ಧ ಎಫ್ಐ‌ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿ‌ನಿಧಿಗಳ ವಿಶೇಷ‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಎಚ್ ಆರ್ ನಾಗಭೂಷಣ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ … Continued

ರಾಹುಲ್ ಗಾಂಧಿಗೆ ಸಂಕಷ್ಟ : ಬ್ರಿಟಿಷ್ ಪೌರತ್ವ ಆರೋಪ ; ಎಫ್‌ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಲಕ್ನೋ : ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯಾಗಿದ್ದು, ಬ್ರಿಟನ್ ಪಾಸ್‌ಪೋರ್ಟ್ ಹೊಂದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ … Continued

ಹೆರಿಗೆ ಆಪರೇಷನ್ ವೇಳೆ ಮಹಿಳೆ ಹೊಟ್ಟೆಯೊಳಗೆ ಅರ್ಧ ಮೀಟರ್ ಸರ್ಜಿಕಲ್ ಬಟ್ಟೆ ಮರೆತು ಹೊಲಿಗೆ ; 15 ತಿಂಗಳ ನಂತರ ಪತ್ತೆ…!

ನವದೆಹಲಿ : ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಬರೋಬ್ಬರಿ ಒಂದೂವರೆ ವರ್ಷಗಳ ಕಾಲ ನರಕಯಾತನೆ ಅನುಭವಿಸಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಹೆರಿಗೆ ಸಮಯದಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಯ ವೇಳೆ ಮಹಿಳೆಯ ಹೊಟ್ಟೆಯೊಳಗೆ ಅರ್ಧ ಮೀಟರ್ ಉದ್ದದ ಸರ್ಜಿಕಲ್ ಬಟ್ಟೆಯನ್ನು (Surgical Cloth) ಮರೆತು ಹೊಲಿಗೆ ಹಾಕಿದ ಆರೋಪ ಕೇಳಿಬಂದಿದೆ. ಗ್ರೇಟರ್ ನೋಯ್ಡಾ ಆಸ್ಪತ್ರೆಯ … Continued

ಕರೂರು ಕಾಲ್ತುಳಿತ ; ಅನುಮತಿ ಇರದಿದ್ರೂ ರೋಡ್​ ಶೋ ; ಕಾರ್ಯಕ್ರಮಕ್ಕೆ ನಟ ವಿಜಯ ತಡವಾಗಿ ಆಗಮಿಸಿದ್ದು ಘಟನೆಗೆ ಕಾರಣ; ಎಫ್‌ಐಆರ್‌ ಆರೋಪ

ಚೆನ್ನೈ: 41 ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಕರೂರು ಕಾಲ್ತುಳಿತ ಘಟನೆಗೆ ನಟ-ರಾಜಕಾರಣಿ ವಿಜಯ ಅವರನ್ನು ಎಫ್‌ಐಆರ್‌ನಲ್ಲಿ ದೂಷಿಸಲಾಗಿದ್ದು, ಅವರು ಕಾರ್ಯಕ್ರಮಕ್ಕೆ ಬರುವುದನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿದರು ಮತ್ತು ಅನುಮತಿಯಿಲ್ಲದೆ ರೋಡ್ ಶೋ ನಡೆಸಿದರು ಎಂದು ಆರೋಪಿಸಲಾಗಿದೆ ಎಫ್‌ಐಆರ್ ಪ್ರಕಾರ, ಟಿವಿಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಥಿಯಜಗನ್ 10,000 ಜನರಿಗೆ ಅನುಮತಿ ಕೋರಿದ್ದರು, ಆದರೆ ವಿಜಯ ಭೇಟಿಯ … Continued

ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಪ್ರೇರೇಪಿಸುವ ಹೇಳಿಕೆ ; ಮೂವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷವನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ, ಪುನೀತ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದ ಮಾಹಿತಿ ಲಭ್ಯವಾಗಿದೆ. ‘ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ ಮತ್ತು … Continued

ಬೆಂಗಳೂರು | ರೌಡಿಶೀಟರ್​ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ ಸೇರಿ ಐವರ ವಿರುದ್ಧ ಎಫ್​ಐಆರ್​

ಬೆಂಗಳೂರು: ರೌಡಿಶೀಟರ್​​ ಶಿವಪ್ರಕಾಶ ಅಲಿಯಾಸ್​ ಬಿಕ್ಲು ಶಿವ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ. ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಸೇರಿ ಐವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರೌಡಿಶೀಟರ್ ಶಿವಕುಮಾರ ಅಲಿಯಾಸ್ … Continued

ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್‌. ರವಿಕುಮಾರ (N Ravikumar) ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೆ.ಪಿ.ನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ … Continued

ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಜಗಳದ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಳೆ ನಿಜಗಲ್ ಬಳಿ ಅನಂತಕುಮಾರ ಹೆಗಡೆ ಅವರು ಕಾರಿನಲ್ಲಿ … Continued

ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ

ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. . ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, … Continued