ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕನ ವಿರುದ್ಧ ಅನುಚಿತ ವರ್ತನೆ ಮತ್ತು ಹಲ್ಲೆ ಆರೋಪದ ಮೇಲೆ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಸಲ್ಲಿಸಿದ ಔಪಚಾರಿಕ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ಸೆಕ್ಷನ್ 354 (ಮಹಿಳೆಯ ವಿನಯವನ್ನು ಆಕ್ರೋಶಗೊಳಿಸುವುದು), 506 (ಅಪರಾಧ ಬೆದರಿಕೆ), 509 … Continued

ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐ ಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಪಂ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ ನಿರಂತರವಾಗಿ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಲೈಂಗಿಕ ದೌರ್ಜನ್ಯದ ವೀಡಿಯೊ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಶುಕ್ರವಾರ ಮತ್ತೊಂದು ಎಫ್ ಐಆರ್ ದಾಖಲಾಗಿದ್ದು, … Continued

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಮೈಸೂರು: ಮೈಸೂರು: ಪ್ರಜ್ವಲ್ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜ್ಯನದ ಪ್ರಕರಣಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (H.D Revanna) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ, ಹಾಗೂ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಪೆನ್‍ಡ್ರೈವ್ ಪ್ರಕರಣದಲ್ಲಿ ಎ1 … Continued

ನೀತಿ ಸಂಹಿತೆ ಉಲ್ಲಂಘನೆ : ಬಿ.ವೈ.ರಾಘವೇಂದ್ರ ವಿರುದ್ಧ ದೂರು ದಾಖಲು

ಚಿತ್ರದುರ್ಗ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರ್ಮಿಕ ಸ್ಥಳವಾದ ಭೋವಿ ಗುರುಪೀಠವನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅನುಮತಿ ಪಡೆಯದೆ ಸಭೆ ನಡೆಸಿ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಅವರು … Continued

ಚುನಾವಣಾ ಆಯೋಗದ ಸೂಚನೆ : ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಶೋಭಾ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ … Continued

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಚೆನ್ನೈ/ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಲ್ಲದೆ, ತಮಿಳುನಾಡಿನ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರೂ ಕೂಡಾ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ಧಾರೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆ … Continued

ಗುತ್ತಿಗೆದಾರನ ಮೇಲೆ ಹಲ್ಲೆ: ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು

ತುಮಕೂರು : ಗುತ್ತಿಗೆದಾರರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್‌.ಆರ್. ಶ್ರೀನಿವಾಸ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿದೆ. ರವಿಕುಮಾರ ಎಂಬ ಗುತ್ತಿಗೆದಾರರು ರವಿಕುಮಾರ್ ತುಮಕೂರಿನ ತಿಲಕ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಲ್ಲೆಯ ನಂತರ ಅವರು ಒಂದು ದಿನ ಆಸ್ಪತ್ರೆಯಲ್ಲಿದ್ದರು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎಂದು ದೂರಿನಲ್ಲಿ … Continued

ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಪ್ರತಿಕ್ರಿಯಿಸಿದ್ದು, ಇದೊಂದು ನಿರಾಧಾರ ಆರೋಪವಾಗಿದೆ ಎಂದು ತಳ್ಳಿಹಾಕಿದ್ದಾರೆ. ಹಾಗೂ ತನಿಖೆಗೆ ಸಹಕರಿಸಲು ಸಿದ್ಧ ಎಂದು ಹೇಳಿದ್ದಾರೆ. ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಯಿ ಮತ್ತು ಮಗಳು ಈ ಹಿಂದೆ ಅನೇಕ ಬಾರಿ ತಮ್ಮನ್ನು ಭೇಟಿ ಮಾಡುವ ಪ್ರಯತ್ನ ಮಾಡಿದ್ದರು. … Continued

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ತಾಯಿ ಗುರುವಾರ ಸಂಜೆ ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದು, ದೂರಿನನ್ವಯ ಸದಾಶಿವನಗರ ಪೊಲೀಸ್‌ ಠಾಣೆ … Continued

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ : ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು, ಸಯ್ಯದ್ ನಾಸೀರ್ ಹುಸೇನ್ ಹೇಳಿದ್ದೇನು?

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ ನಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ಜಯಗಳಿಸಿದ್ದಾರೆ. ಗೆಲುವಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ … Continued