ದೆಹಲಿ ಹೊಟೇಲ್‌ ಅಗ್ನಿ ದುರಂತ : ಐಸಿಯುನಲ್ಲಿದ್ದ ತಂದೆ ಸನಿಹ ಇರಲು ಹೊಟೇಲ್‌ನಲ್ಲಿ ತಂಗಿದ್ದ ಸಿಎ ಕುಟುಂಬದ 8 ಮಂದಿ ಸಾವು

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಫ್ಲರಿಶ್ ಸ್ಟೇ’ (Flourish Stay) ಹೋಟೆಲ್‌ನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಎಂಟು ಸದಸ್ಯರು ಸೇರಿದಂತೆ ಕನಿಷ್ಠ 21 ಜನರು ಜೀವಂತವಾಗಿ ದಹನವಾಗಿದ್ದಾರೆ. ಮೃತರ ಪೈಕಿ 12 ಮಂದಿ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ವರದಿಯಾಗಿದೆ. ಗುರುಗ್ರಾಮದ ಸೆಕ್ಟರ್ 46 … Continued

ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ರೆಸ್ಟೋರೆಂಟ್‌’ನಲ್ಲಿ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಗ್ನಿ ದುರಂತವು … Continued

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಕಾರ್ಯಕ್ರಮದಲ್ಲಿ ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಕಪೇಟೆಯಲ್ಲಿರುವ ಬಳೇಪೇಟೆಯ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಬ್ಯಾನರ್ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ … Continued

ಸ್ವಿಟ್ಜರ್ಲೆಂಡ್ ಬಾರ್‌ನಲ್ಲಿ ಭೀಕರ ಅಗ್ನಿ ದುರಂತ: 40ಕ್ಕೂ ಹೆಚ್ಚು ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ-ವರದಿ

ಕ್ರಾನ್ಸ್ ಮೊಂಟಾನ (ಸ್ವಿಟ್ಜರ್ಲೆಂಡ್): ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸ್ವಿಟ್ಜರ್ಲೆಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದ ಬಾರ್‌ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಗುರುವಾರ ಮುಂಜಾನೆ ಸುಮಾರು 1:30ರ … Continued

ಕಾರವಾರ | ಅಮದಳ್ಳಿಯಲ್ಲಿ ಸುಟ್ಟು ಕರಕಲಾದ ಆಟೋ, ಎರಡು ಕಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಆಟೋ  ಮತ್ತು ಎರಡು ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವಾಹನಗಳನ್ನು ಆವರಿಸಿಕೊಂಡಿದೆ. ಬೆಂಕಿಯ ತೀವ್ರತೆಯಿಂದಾಗಿ ಸ್ಥಳದಲ್ಲಿದ್ದ ಕಾರುಗಳು ಮತ್ತು ಆಟೋ ರಿಕ್ಷಾ ಸಂಪೂರ್ಣವಾಗಿ ನಾಶವಾಗಿವೆ. ಈ ಅವಘಡದಿಂದ … Continued

25 ಜನ ಸಾವಿಗೀಡಾದ ಗೋವಾ ನೈಟ್‌ಕ್ಲಬ್ ಬೆಂಕಿ ದುರಂತದ ಘಟನೆ ; ಮಾಲೀಕರು ದೇಶ ಬಿಟ್ಟು ಪಲಾಯನ

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ 25 ಜನರು ಸಾವಿಗೀಡಾಗಿ, ಆರು ಮಂದಿ ಗಾಯಗೊಂಡ ಕೆಲವೇ ಗಂಟೆಗಳ ನಂತರ, ನೈಟ್‌ಕ್ಲಬ್ ಮಾಲೀಕರಾದ ಸೌರಭ ಮತ್ತು ಗೌರವ್ ಲೂತ್ರಾ ಸಹೋದರರು ಥೈಲ್ಯಾಂಡಿನ  ಫುಕೆಟ್‌ಗೆ (Phuket) ವಿಮಾನದಲ್ಲಿ ಪರಾರಿಯಾಗಿರುವುದನ್ನು ಗೋವಾ ಪೊಲೀಸರು ಖಚಿತಪಡಿಸಿದ್ದು, ಅವರಿಗಾಗಿ ಅಂತಾರಾಷ್ಟ್ರೀಯ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೋಮವಾರ ತಿಳಿಸಿದ್ದಾರೆ. ಬೆಂಕಿ … Continued

ಹಾಂಗ್ ಕಾಂಗ್‌ನಲ್ಲಿ ಭೀಕರ ಅಗ್ನಿ ಅನಾಹುತ: 44 ಸಾವು, ನೂರಾರು ಮಂದಿ ನಾಪತ್ತೆ

ಹಾಂಗ್ ಕಾಂಗ್: ಹಾಂಗ್ ಕಾಂಗ್‌ನ ಎತ್ತರದ ವಸತಿ ಸಂಕೀರ್ಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 44 ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಶಕಗಳಲ್ಲಿ ಹಾಂಗ್ ಕಾಂಗ್ ಕಂಡ ಅತ್ಯಂತ ಭೀಕರ ಬೆಂಕಿಯ ಘಟನೆ ಇದಾಗಿದೆ. ಇದು ಬುಧವಾರ ಮಧ್ಯಾಹ್ನ 2,000 ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಎಂಟು ಕಟ್ಟಡಗಳ ವಸತಿ … Continued

ವೀಡಿಯೊ…| ಕಾರವಾರ: ಮನೆಯಲ್ಲಿ ಹಚ್ಚಿದ್ದ ದೀಪದಿಂದ ಧಗಧಗನೆ ಹೊತ್ತಿ ಉರಿದ ಮನೆ

ಕಾರವಾರ: ಮನೆಯೊಂದಕ್ಕೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಹೊತ್ತಿ ಉರಿದು ಅಪಾರ ಹಾನಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದಗದ್ದಾದಲ್ಲಿ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ನಂದನಗದ್ದಾ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಇರುವ ಶಾಂತಾರಾಮ ದೇಸಾಯಿ ಎಂಬುವರ ಹಂಚಿನ ಮನೆಗೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ … Continued

ವೀಡಿಯೊ..| ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ

ದುಬೈ: ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ದುಬೈ ಮಾಧ್ಯಮ ಕಚೇರಿ (DMO) ಶನಿವಾರ ತಿಳಿಸಿದೆ. ಶುಕ್ರವಾರ ರಾತ್ರಿ ಬೆಂಕಿ ಪ್ರಾರಂಭವಾದ ನಂತರ ಮರೀನಾ ಪಿನ್ನಾಕಲ್‌ನ 764 ಅಪಾರ್ಟ್‌ಮೆಂಟ್‌ಗಳ ಎಲ್ಲಾ 3,820 ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ದುಬೈ ನಾಗರಿಕ ರಕ್ಷಣಾ ತಂಡಗಳು ಆರು ಗಂಟೆಗಳ ಕಾಲ ಅವಿಶ್ರಾಂತವಾಗಿ ಕೆಲಸ … Continued

ಸಿಂಗಾಪುರದ ಶಾಲೆಯಲ್ಲಿ ಬೆಂಕಿ ಅನಾಹುತದಲ್ಲಿ ಆಂಧ್ರ ಡಿಸಿಎಂ ಪವನ ಕಲ್ಯಾಣ ಪುತ್ರನಿಗೆ ಗಾಯ ; ಆಸ್ಪತ್ರೆಗೆ ದಾಖಲು

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ ಅವರ ಕಿರಿಯ ಪುತ್ರ ಮಾರ್ಕ್ ಶಂಕರ ಅವರು ಸಿಂಗಾಪುರದ ತಮ್ಮ ಶಾಲೆಯಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೊಗೆಯಿಂದ ಉಸಿರಾಟದ ತೊಂದರೆಯ ಜೊತೆಗೆ ಶಂಕರ ಅವರ ಕೈಗಳು ಮತ್ತು ಕಾಲುಗಳಿಗೆ ಗಾಯಗಳಾಗಿವೆ ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಕಲ್ಯಾಣ ಅವರು … Continued