ವೀಡಿಯೊ…| ಬಿಹಾರದ ಚುನಾವಣಾ ಪ್ರಚಾರದ ವೇಳೆ ಕೆರೆಗೆ ಜಿಗಿದು ಮೀನು ಹಿಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಕಾವೇರುತ್ತಿದ್ದು, ಆಡಳಿತಾರೂಢ ಎನ್‌ಡಿಎ ಮತ್ತು ಮಹಾಘಟಬಂಧನ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಬಲ್ಲ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್‌ 6 ಮತ್ತು 2ನೇ ಹಂತದ ಮತದಾನ ನವೆಂಬರ್‌ 11ರಂದು ನಡೆಯಲಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯುವ ನಾನಾ ಕಸರತ್ತಿನಲ್ಲಿ ನಿರತವಾಗಿವೆ. ಈ ಮಧ್ಯೆ ಬೇಗುಸರಾಯ್‌ನ (Begusarai) ಕೊಳವೊಂದಕ್ಕೆ ಹಾರಿದ … Continued

ಕಿರಿಮಂಜೇಶ್ವರ : ಸಮುದ್ರಕ್ಕೆ ಮೀನು ಹಿಡಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಮೀನು ಹಿಡಿಯಲು (Fishing) ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು (Baindur) ತಾಲೂಕಿನ ಕಿರಿಮಂಜೇಶ್ವರ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಿರಿಮಂಜೇಶ್ವರ ಬಳಿ ಹೊಸಹಿತ್ಲು ಬೀಚ್‌ನಲ್ಲಿ (Hosahithlu Beach) ಮಂಗಳವಾರ ಸಂಜೆ ಈ ದುರಂತ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳಾದ ಸಂಕೇತ (16), ಸೂರಜ (15) ಹಾಗೂ ಆಶಿಶ್ (14) ನೀರಿನಲ್ಲಿ ಮುಳುಗಿ … Continued

ಹುಕ್ಕೇರಿ | ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕು ಬೆನಕನಹೊಳಿ ಬಳಿಯ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರಿಗಾಗಿ ಹುಡುಕಾಟ ನಡೆದಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ (49)ಮತ್ತು ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ (12) … Continued

ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued