ಮಳೆ ಆರ್ಭಟಕ್ಕೆ ನಲುಗಿದ ಕೇರಳ: ಸಾವಿನ ಸಂಖ್ಯೆ 26ಕ್ಕೆ ಏರಿಕೆ

ತಿರುವನಂತಪುರ: ಮಳೆರಾಯನ ಆರ್ಭಟಕ್ಕೆ ನೆರೆಯ ಕೇರಳ ಮತ್ತೊಮ್ಮೆ ಬೆಚ್ಚಿಬಿದ್ದಿದೆ. ಗುಡ್ಡ ಕುಸಿತ, ಪ್ರವಾಹದಿಂದಾಗಿ ಕೇರಳದವರ ಬದುಕು ಸರ್ವನಾಶವಾಗುತ್ತಿದ್ದು, ಮಳೆ ಸಂಬಂಧದ ಘಟನೆಗಳಲ್ಲಿ ಇದುವರೆಗೆ 26 ಮಂದಿ ಮೃತಪಟ್ಟಿದ್ದಾರೆ. ಕೊಟ್ಟಾಯಂನ ಕೊಟ್ಟಿಕ್ಕಲ್ ಒಂದರಲ್ಲೇ 11 ಜನ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪೀರ್‍ಮೆಡ್ ಎಂಬಲ್ಲಿ ಅತ್ಯಧಿಕ 24 ಸೆಂಟಿ ಮೀಟರ್ ಮಳೆಯಾಗಿದ್ದರೆ … Continued