ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued