ಮಂಡ್ಯ: ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ನಾಲ್ವರು ನೀರು ಪಾಲು

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರು ನೀರು ಪಾಲಾದ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮೈಸೂರಿನ ಗುಂಡೂರಾವ್ ನಗರ ನಿವಾಸಿಗಳಾದ ನಾಗೇಶ (45), ಅವರ ಪುತ್ರ ಭರತ (17), ಮಹಾದೇವ (14), ಗುರುಕುಮಾರ (32) ಎಂದು ಗುರುತಿಸಲಾಗಿದೆ. ಆಂಜನೇಯಸ್ವಾಮಿ ದೇವಾಲಯದಲ್ಲಿನ ಧಾರ್ಮಿಕ ಕಾರ್ಯಕ್ರಮಕ್ಕೆ … Continued

ಸಿದ್ದಗಂಗಾ ಮಠದ ಗೋಕಟ್ಟೆಗೆ ಬಿದ್ದು ನಾಲ್ವರು ನೀರು ಪಾಲು: ನೀರಿಗೆ ಬಿದ್ದವನ ರಕ್ಷಣೆ, ರಕ್ಷಣೆಗೆ ಹೋದವರು ನೀರು ಪಾಲು

ತುಮಕೂರು: ಈಜಲು ಹೋಗಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ಘಟನೆ ತುಮಕೂರಿನ (Tumakuru) ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಿದ್ದಗಂಗಾ ಮಠದ ಹಿಂಭಾಗದ ನೀರಿನ ಕೃಷಿ ಹೊಂಡ ಗೋಕಟ್ಟೆಯಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಲು ಮೊದಲು ಇಬ್ಬರು ನೀರಿಗೆ ಧುಮುಕಿದರು. ಅವರು ಆಪತ್ತಿನಲ್ಲಿದ್ದಿದ್ದು ಕಂಡು ಇನ್ನೊಬ್ಬರು ಧುಮುಕಿದ್ದಾರೆ. ಇವರಲ್ಲಿ … Continued

ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಮುಳುಗಿ ಸಾವು

ಬೆಳಗಾವಿ: ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ. ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ರಜೆ ಹಿನ್ನೆಲೆಯಲ್ಲಿ ಘಟಪ್ರಭಾ ಪುರ ಸಭೆ ವ್ಯಾಪ್ತಿಯ ಮನಿಷ್ ಬಾರ್’ನ ಆರು ಜನ ಕೆಲಸದ ಹುಡುಗರು ಧೂಪದಾಳ ಡ್ಯಾಂಗೆ ಈಜಲು ಹೋಗಿದ್ದರು. ಓರ್ವ … Continued