ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡಲು ಅನುಮತಿ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರವು ಸೋಮವಾರ ರಂಜಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಚಂದ್ರನ ದರ್ಶನದ ಆಧಾರದ ಮೇಲೆ ಮಾರ್ಚ್ 1 ಅಥವಾ 2 ರಂದು ಪ್ರಾರಂಭವಾಗುವ ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಒಂದು ಗಂಟೆ ಮುಂಚಿತವಾಗಿ ಕಚೇರಿಗಳಿಂದ ಹೋಗಲು ತೆಲಂಗಾಣ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದೇಶಗಳು ಮುಸ್ಲಿಂ … Continued

ಬಿಜೆಪಿ ಹೈಕಮಾಂಡ್ ನೊಟೀಸಿಗೆ ಉತ್ತರ ನೀಡಿದ ಯತ್ನಾಳ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕೇಂದ್ರ ಚುನಾವಣಾ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅದಕ್ಕೆ 9 ಪುಟಗಳ ಸುದೀರ್ಘ ಉತ್ತರ ನೀಡಿದ್ದಾರೆ. ಶೋಕಾಸ್ ನೋಟಿಸ್ ಗೆ 72 ಗಂಟೆಯೊಳಗೆ ಉತ್ತರ ನೀಡುವಂತೆ ಯತ್ನಾಳ ಅವರಿಗೆ ಕೇಂದ್ರ ಚುನಾವಣಾ ಶಿಸ್ತು ಸಮಿತಿ ಸೂಚಿಸಿದ್ದ ಹಿನ್ನೆಲೆಯಲ್ಲಿ … Continued

ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? : ರಣವೀರ್ ಅಲಹಾಬಾದಿಯಾಗೆ ‘ಸುಪ್ರೀಂ ಕೋರ್ಟ್‌’ ಕೆಂಡಾಮಂಡಲ

ನವದೆಹಲಿ: ಇಂಡಿಯಾ’ಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ನೀಡಿದ ಅಶ್ಲೀಲ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಅಸ್ಸಾಂ ಹಾಗೂ ರಾಜಸ್ಥಾನದಲ್ಲಿ ಯೂಟ್ಯೂಬರ್‌ ರಣವೀರ್‌ ಅಲಹಾಬಾದಿಯಾ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ತಡೆ ನೀಡಿದೆ. ಆದರೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಣವೀರ್‌ ಅಲಹಾಬಾದಿಯಾ ಹೇಳಿಕೆಗಳ ಬಗ್ಗೆ … Continued

ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…

ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued

ಚೀನಾ ನಮ್ಮ ಶತ್ರುವಲ್ಲ ; ಭಾರತದ ಧೋರಣೆ ಬದಲಾಗಬೇಕು : ಮತ್ತೆ ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ

ನವದೆಹಲಿ : ತಮ್ಮ ಹೇಳಿಕೆಗಳ ಮೂಲಕ ವಿವಾದ ಸೃಷ್ಟಿಸುವ ಕಾಂಗ್ರೆಸ್‌ ಪಕ್ಷದ  ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda) ಈಗ ನೀಡಿರುವ ಮತ್ತೊಂದು ಹೇಳಿಕೆ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್‌ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಯಾಂ ಪಿತ್ರೋಡಾ ಅವರು, ಭಾರತದ ಮನಸ್ಥಿತಿಯನ್ನು ಬದಲಾಯಿಸುವ ಅವಶ್ಯಕತೆಯಿದ್ದು, ಭಾರತವು … Continued

ವೀಡಿಯೊ..| ಡ್ರೋನ್ ಗಳನ್ನೇ ಬೇಟೆಯಾಡಲು ಹದ್ದುಗಳ ನೇಮಕ…! ತೆಲಂಗಾಣ ಪೊಲೀಸರಿಂದ ವಿಶೇಷ ತರಬೇತಿ | ಹದ್ದು ಹೇಗೆ ಬೇಟೆಯಾಡ್ತದೆ ನೋಡಿ…

ರಾಕ್ಷಸ ಡ್ರೋನ್‌ಗಳನ್ನು   ಬೇಟೆಯಾಡುವ ಸಲುವಾಗಿ ತೆಲಂಗಾಣ ಪೊಲೀಸರ ಗರುಡ ಪಡೆಗೆ ಹದ್ದುಗಳು, ಗಿಡುಗಗಳು, ಫಾಲ್ಕನ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪಕ್ಷಿಗಳನ್ನು ಸೇರಿಸಿದೆ. ತೆಲಂಗಾಣ ಪೊಲೀಸರು ಮೊಯಿನಾಬಾದ್‌ನಲ್ಲಿರುವ ಇಂಟಿಗ್ರೇಟೆಡ್ ಇಂಟೆಲಿಜೆನ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (IITA) ಇವುಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂದು ವರದಿ ತಿಳಿಸಿದೆ, ಹೊಸ ಗರುಡ ಪಡೆ ಡ್ರೋನ್ ವಿರೋಧಿ ಭದ್ರತಾ ಕ್ರಮಗಳು ಮತ್ತು ಕಣ್ಗಾವಲು ಉದ್ದೇಶಕ್ಕಾಗಿ … Continued

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 11 ಮಹಿಳೆಯರು, 4 ಮಕ್ಕಳು ಸೇರಿ 18 ಮಂದಿ ಸಾವು

ನವದೆಹಲಿ: ಮಹಾಕುಂಭಕ್ಕೆ ಹೋಗುವ ಎರಡು ರೈಲುಗಳು ತಡವಾಗಿ ಬಂದಿದ್ದರಿಂದ ಜನದಟ್ಟಣೆಯಿಂದ ಕೂಡಿದ್ದ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಹಠಾತ್ ನೂಕು ನುಗ್ಗಲು ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಕೀಯ ಅಧಿಕಾರಿ ಸಾವುಗಳನ್ನು ದೃಢಪಡಿಸಿದ್ದಾರೆ. ಘಟನೆಯಲ್ಲಿ … Continued

ಜಯಲಲಿತಾ ಬಳಿ ಇದ್ದ 27 ಕೆಜಿ ಚಿನ್ನಾಭರಣ, 1116 ಕೆಜಿ ಬೆಳ್ಳಿ, 1526 ಎಕರೆ ಭೂಮಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ; ಆಸ್ತಿ ಹರಾಜಿನ ಹಣ ಸಾರ್ವಜನಿಕ ಕಲ್ಯಾಣಕ್ಕೆ ಬಳಸಲು ಆದೇಶ

ಬೆಂಗಳೂರು : ಬೆಂಗಳೂರಿನ ವಿಶೇಷ ಕೋರ್ಟ್ ನ ವಶದಲ್ಲಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಬೆಲೆಬಾಳುವ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಬೆಂಗಳೂರು ನ್ಯಾಯಾಲಯದ ಆದೇಶದ ಒಂದು ದಿನದ ನಂತರ, ವಶಪಡಿಸಿಕೊಂಡ ಆಸ್ತಿಯನ್ನು ಶನಿವಾರ ಅಧಿಕೃತವಾಗಿ ತಮಿಳುನಾಡು ಸರ್ಕಾರಕ್ಕೆ ವರ್ಗಾಯಿಸಲಾಯಿತು. ಕರ್ನಾಟಕ ಅಧಿಕಾರಿಗಳು ತಮಿಳುನಾಡಿಗೆ ಹಸ್ತಾಂತರಿಸಿದ ಐಷಾರಾಮಿ ವಸ್ತುಗಳಲ್ಲಿ ಚಿನ್ನದಿಂದ ಮಾಡಿದ ಖಡ್ಗ ಮತ್ತು … Continued

2007ರ ನಂತರ ಇದೇ ಮೊದಲ ಬಾರಿಗೆ ಬಿ ಎಸ್‌ ಎನ್‌ ಎಲ್‌ ಗೆ ಭರ್ಜರಿ ಲಾಭ…!

ನವದೆಹಲಿ: ಸುಮಾರು 17 ವರ್ಷಗಳ ನಂತರ ಲಾಭದಾಯಕತೆಗೆ ಮರಳಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಶುಕ್ರವಾರ ಹೇಳಿದ್ದಾರೆ. ಬಿಎಸ್‌ಎನ್‌ಎಲ್‌ (BSNL) ಡಿಸೆಂಬರ್ ತ್ರೈಮಾಸಿಕದಲ್ಲಿ 262 ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ಇದು ಸೇವಾ ಕೊಡುಗೆಗಳು ಮತ್ತು ಚಂದಾದಾರರ ವಿಸ್ತರಣೆಯ ಮೇಲೆ ಕೇಂದ್ರೀಕರಿಸಿದ ಸರ್ಕಾರಿ ಸ್ವಾಮ್ಯದ ಸಂಸ್ಥೆಗೆ “ಮಹತ್ವದ ತಿರುವು” ಎಂದು ಅವರು ಹೇಳಿದ್ದಾರೆ. … Continued

ದಾಖಲೆ ಬರೆದ ಮಹಾಕುಂಭ ಮೇಳ 2025 ; ಈವರೆಗೆ ತ್ರಿವೇಣಿ ಸಂಗಮದಲ್ಲಿ 50 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ನವದೆಹಲಿ : ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಶುಕ್ರವಾರ ಸಂಜೆಯವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಶುಕ್ರವಾರ ಸಂಜೆ 6 ಗಂಟೆ ವರೆಗೆ 92.84 ಲಕ್ಷ ಜನರು ಪವಿತ್ರ ನದಿಗಳಲ್ಲಿ ಸ್ನಾನ ಮಾಡಿದ್ದಾರೆ. ಗುರುವಾರ ರಾತ್ರಿ … Continued