ಐ-ಪಿಎಸಿ ಪ್ರಕರಣ | ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳಬೇಡಿ”: ಮಮತಾಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಸಲಹೆಗಾರರ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ದಾಳಿಯ ವೇಳೆ ಹಸ್ತಕ್ಷೇಪ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿವಾದವು ಕೇವಲ ‘ಕೇಂದ್ರ ಮತ್ತು ರಾಜ್ಯದ ನಡುವಿನ ಒಕ್ಕೂಟ ವ್ಯವಸ್ಥೆಯ ವಿವಾದ’ (Federal … Continued

2026ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’? 1877ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !

ನವದೆಹಲಿ: 2026-2027ರ ಅವಧಿಯಲ್ಲಿ ಅತೀ ವಿನಾಶಕಾರಿ ಎನ್ನಬಹುದಾದ “ಮೆಗಾ ಎಲ್ ನಿನೋ” (Mega El Niño) ಸಂಭವಿಸುವ ಸಾಧ್ಯತೆಗಳ ಬಗ್ಗೆ ವಿಜ್ಞಾನಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಇದು ದಾಖಲಿತ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ಘಟನೆಗಳಲ್ಲಿ ಒಂದಾಗಬಹುದಾಗಿದ್ದು, 1877-78ರ ಭೀಕರ ಎಲ್ ನಿನೋ ಪರಿಸ್ಥಿತಿಯನ್ನು ನೆನಪಿಸುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹವಾಮಾನ ತಜ್ಞ ರಯಾನ್ ಮಾವು … Continued

ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಹತ್ಯಾಕಾಂಡ (ಏಪ್ರಿಲ್ 22, 2025) ನಡೆದು ಇಂದಿಗೆ  ಒಂದು ವರ್ಷ. 26 ಅಮಾಯಕರ ಜೀವ ಬಲಿಪಡೆದ ಈ ದಾಳಿಯ ತನಿಖೆಯು ಈಗ ಕೇವಲ ಸ್ಥಳೀಯ ಕಾರ್ಯಾಚರಣೆಯಾಗಿ ಉಳಿದಿಲ್ಲ; ಬದಲಿಗೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲಿಗೆಳೆದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇತೃತ್ವದಲ್ಲಿ ನಡೆದ ಈ ತನಿಖೆಯು … Continued

ವಿಡಿಯೊ..| ಪ್ರಧಾನಿ ಮೋದಿ ಒಬ್ಬ ‘ಭಯೋತ್ಪಾದಕ’ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ನಂತರ ಸ್ಪಷ್ಟೀಕರಣ

ಚೆನ್ನೈ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆಯನ್ನು (AIADMK) ಪ್ರಶ್ನಿಸುವ ಸಂದರ್ಭದಲ್ಲಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. “ಅಣ್ಣಾದೊರೈ ಅವರ ಫೋಟೋ ಹಾಕಿಕೊಳ್ಳುವ ಎಐಎಡಿಎಂಕೆ … Continued

ನ್ಯಾಯವು ಒತ್ತಡಕ್ಕೆ ಮಣಿಯದು : ದೆಹಲಿ ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲ್ಲ ಎಂದ ಹೈಕೋರ್ಟ್ ನ್ಯಾಯಮೂರ್ತಿ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಸೋಮವಾರ ತಿರಸ್ಕರಿಸಿದರು. ಕೇಜ್ರಿವಾಲ್ ಅವರ ಆರೋಪವನ್ನು ತಳ್ಳಿಹಾಕಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರು, ಈ ಪ್ರಕರಣದ ವಿಚಾರಣೆಯಿಂದ … Continued

ಆರ್ಥಿಕ ಮುಗ್ಗಟ್ಟು: ಹಿಮಾಚಲದಲ್ಲಿ ಹಿರಿಯ ಶ್ರೇಣಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ; ಶೇ. 30ರಷ್ಟು ವೇತನ ತಡೆ ಹಿಡಿದ ಸರ್ಕಾರ…!

ಶಿಮ್ಲಾ: ರಾಜ್ಯದ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವ ಉದ್ದೇಶದಿಂದ ಹಿಮಾಚಲ ಪ್ರದೇಶ ಸರ್ಕಾರವು ಹಿರಿಯ ಶ್ರೇಣಿ ಸರ್ಕಾರಿ ಅಧಿಕಾರಿಗಳ ವೇತನದ ಶೇಕಡಾ 30ರಷ್ಟನ್ನು ಸದ್ಯಕ್ಕೆ ಕಡಿತ ಮಾಡಲು ನಿರ್ಧರಿಸಿದೆ. ಏಪ್ರಿಲ್ ತಿಂಗಳಿಂದ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳವನ್ನು ಮಾತ್ರ ಹಿರಿಯ ಅಧಿಕಾರಿಗಳಿಗೆ ನೀಡಲಾಗುತ್ತದೆ. ರಾಜ್ಯದ ಹಣಕಾಸಿನ ಮುಗ್ಗಟ್ಟಿನಿಂದ ಹೊರಬರುವ ಪ್ರಯತ್ನವಾಗಿ ಮುಂದಿನ ಆರು ತಿಂಗಳ … Continued

ವಿಡಿಯೋ | ಮ್ಯಾರಥಾನ್‌ ಓಟದ ಸ್ಪರ್ಧೆಯಲ್ಲಿ ಮಾನವ ಕ್ರೀಡಾಪಟುಗಳನ್ನೇ ಹಿಂದಿಕ್ಕಿ ದಾಖಲೆ ಬರೆದ ರೋಬೋಟ್‌ಗಳು…!

ಬೀಜಿಂಗ್: ತಂತ್ರಜ್ಞಾನ ಲೋಕದಲ್ಲಿ ಹೊಸ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ. ಭಾನುವಾರ ನಡೆದ ‘ಬೀಜಿಂಗ್ ಇ-ಟೌನ್ ಹ್ಯೂಮನಾಯ್ಡ್ ರೋಬೋಟ್ ಹಾಫ್ ಮ್ಯಾರಥಾನ್’ನಲ್ಲಿ ಮಾನವರೂಪಿ ರೋಬೋಟ್‌ಗಳು ಮಾನವ ಅಥ್ಲೀಟ್‌ಗಳನ್ನು ಹಿಂದಿಕ್ಕುವ ಮೂಲಕ ಹೊಸ ಇತಿಹಾಸ ಬರೆದಿವೆ. ಇದೇ ಮೊದಲ ಬಾರಿಗೆ ಮ್ಯಾರಥಾನ್‌ ಓಟದ ಸ್ಪರ್ಧೆಯಲ್ಲಿ ಮಾನವರೂಪಿ ರೋಬೋಟ್‌ಗಳು ಮನುಷ್ಯರಿಗಿಂತ ವೇಗವಾಗಿ ಓಡಿ ಗುರಿ ತಲುಪಿ ಬೆರಗುಗೊಳಿಸಿವೆ. ಚೀನಾದ ಪ್ರಖ್ಯಾತ ಟೆಕ್ … Continued

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಧ್ವಜವಿದ್ದ ಹಡಗುಗಳ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ

ದುಬೈ/ನವದೆಹಲಿ: ಜಾಗತಿಕ ತೈಲ ವ್ಯಾಪಾರದ ಪ್ರಮುಖ ಕೇಂದ್ರವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಶನಿವಾರ ಭಾರೀ ಉದ್ವಿಗ್ನತೆ ಸೃಷ್ಟಿಯಾಗಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಯು ಎರಡು ಭಾರತೀಯ ಧ್ವಜ ಹೊಂದಿರುವ ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಹಡಗುಗಳು ಅನಿವಾರ್ಯವಾಗಿ ತಮ್ಮ ಪಯಣವನ್ನು ಅರ್ಧಕ್ಕೇ ನಿಲ್ಲಿಸಿ ಹಿಂತಿರುಗಿವೆ ಎಂದು ಸಮುದ್ರ ಭದ್ರತಾ ಮೂಲಗಳು … Continued

ಹಾರ್ಮುಜ್ ಜಲಸಂಧಿ ಸಂಪೂರ್ಣ ಓಪನ್‌ : ಇರಾನಿನಿಂದ ಮಹತ್ವದ ಘೋಷಣೆ ; ಜಾಗತಿಕ ತೈಲ ಮಾರುಕಟ್ಟೆ ನಿರಾಳ

ತೆಹ್ರಾನ್/ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಉದ್ವಿಗ್ನತೆಯ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಲೆಬನಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮದ ಹಿನ್ನೆಲೆಯಲ್ಲಿ, ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ವಾಣಿಜ್ಯ ಹಡಗುಗಳ ಸಂಚಾರಕ್ಕಾಗಿ ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ ಎಂದು ಇರಾನ್ ಘೋಷಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು … Continued

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ವಿಧೇಯಕಕ್ಕೆ ಹಿನ್ನಡೆ : ಸಿಗದ ಮೂರನೇ ಎರಡರಷ್ಟು ಬಹುಮತ

ನವದೆಹಲಿ: ಕೇಂದ್ರ ಸರ್ಕಾರವು ಮಂಡಿಸಿದ್ದ ಮಹಿಳಾ ಮೀಸಲಾತಿ ತಿದ್ದುಪಡಿ ವಿಧೇಯಕವು ಶುಕ್ರವಾರ ಲೋಕಸಭೆಯಲ್ಲಿ ಅಗತ್ಯ ಮತಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ಸಂವಿಧಾನದ (131ನೇ ತಿದ್ದುಪಡಿ) ವಿಧೇಯಕ, 2026 ಅನ್ನು ಅಂಗೀಕರಿಸಲು ಕೇಂದ್ರಕ್ಕೆ ಮೂರನೇ ಎರಡರಷ್ಟು (2/3) ಬಹುಮತದ ಅಗತ್ಯವಿತ್ತು. ಆದರೆ ಮತದಾನದ ವೇಳೆ ವಿಧೇಯಕದ ಪರವಾಗಿ ೨೯೮ ಸಂಸದರು ಮತ್ತು ವಿರುದ್ಧವಾಗಿ 230 ಸಂಸದರು ಮತ ಚಲಾಯಿಸಿದರು. … Continued