2000 ವರ್ಷಗಳ ನಂತರ ಪತ್ತೆಯಾದ ʼಅಲೆಕ್ಸಾಂಡರ್ ದಿ ಗ್ರೇಟ್ʼ ನಿರ್ಮಿಸಿದ್ದ ‘ಕಣ್ಮರೆಯಾಗಿದ್ದ ನಗರ’..!

ಜಗತ್ತನ್ನೇ ಗೆಲ್ಲ ಹೊರಟಿದ್ದ ಗ್ರೀಕ್ ಚಕ್ರವರ್ತಿ ಅಲೆಕ್ಸಾಂಡರ್ ದಿ ಗ್ರೇಟ್ ಸ್ಥಾಪಿಸಿದನೆನ್ನಲಾದ, ಶತಮಾನಗಳಿಂದ ಮಣ್ಣಿನಡಿಯಲ್ಲಿ ಹೂತುಹೋಗಿದ್ದ ಐತಿಹಾಸಿಕ ನಗರವೊಂದನ್ನು ಪುರಾತತ್ವ ಶಾಸ್ತ್ರಜ್ಞರು ಪತ್ತೆಹಚ್ಚಿದ್ದಾರೆ. ದಕ್ಷಿಣ ಇರಾಕ್‌ನ ಟೈಗ್ರಿಸ್ ನದಿಯ ದಡದಲ್ಲಿರುವ ಈ ನಗರವನ್ನು ‘ಅಲೆಕ್ಸಾಂಡ್ರಿಯಾ’ ಎಂದು ಗುರುತಿಸಲಾಗಿದೆ. ಸುಮಾರು ಕ್ರಿ.ಪೂ. 4ನೇ ಶತಮಾನದಲ್ಲಿ ನಿರ್ಮಾಣವಾಗಿದ್ದ ಈ ನಗರವು ಕಾಲಕ್ರಮೇಣ ಇತಿಹಾಸದ ಪುಟಗಳಿಂದ ಮರೆಯಾಗಿತ್ತು. ಕಳೆದ ದಶಕದಿಂದಲೂ … Continued

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ: 400 ಸಾವು, 250 ಜನರಿಗೆ ಗಾಯ ; ತಾಲಿಬಾನ್‌

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರರು ಮಂಗಳವಾರ ಬೆಳಿಗ್ಗೆ ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರತ್ ಈ ಬಗ್ಗೆ ಮಾಹಿತಿ ನೀಡಿ, ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆ ಸುಮಾರಿಗೆ … Continued

“ಎಲ್ಲರನ್ನೂ ಕ್ಷಮಿಸಿಬಿಡು…ಈಗ ಹೊರಡುವ ಸಮಯ ಬಂದಿದೆ, ಹೋಗಿ ಬಾ..”: ಹರೀಶ ರಾಣಾಗೆ ಕುಟುಂಬದ ಭಾವನಾತ್ಮಕ ವಿದಾಯ

ನವದೆಹಲಿ: “ಇನ್ನು ಹೊರಡುವ ಸಮಯ ಬಂದಿದೆ, ಸರಿನಾ?..” – ಗಾಜಿಯಾಬಾದ್‌ನ ಆ ನಿಶ್ಯಬ್ದ ಗಲ್ಲಿಯ ಒಂದು ಮನೆಯಲ್ಲಿ, ಚಲನೆಯಿಲ್ಲದೆ ಮಲಗಿದ್ದ ಹರೀಶ ರಾಣಾ ಸುತ್ತ ಅವರ ಕುಟುಂಬಸ್ಥರು ಜಮಾಯಿಸಿದ್ದರು. ಅದು ಹರೀಶ ರಾಣಾ ಅವರಿಗೆ ಮನಯವರು ಹಾಗೂ ಪ್ರೀತಿ ಪಾತ್ರರ ಅಂತಿಮ ವಿದಾಯದ ಕ್ಷಣಗಳು. ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಅವರು ಅಂತಿಮ … Continued

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿಗೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ:  ಚುನಾವಣಾ ಆಯೋಗವು ಇಂದು, ಭಾನುವಾರ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ಒಂದೇ ಹಂತದಲ್ಲಿ ನಡೆಯಲಿದ್ದರೆ, ಪಶ್ಚಿಮ ಬಂಗಾಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ … Continued

ಇರಾನಿನ ನೂತನ ಸರ್ವೋಚ್ಚ ನಾಯಕ, ಐಆರ್‌ಜಿಸಿ ಅಧಿಕಾರಿಗಳ ಮಾಹಿತಿ ನೀಡಿದವರಿಗೆ 92 ಕೋಟಿ ರೂ. ಬಹುಮಾನ ಘೋಷಿಸಿದ ಅಮೆರಿಕ

ಇರಾನ್‌ನ  ನೂತನ ಸರ್ವೋಚ್ಚ ನಾಯಕ (Supreme Leader) ಮೊಜ್ತಬಾ ಖಮೇನಿ ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗೆ ಸಂಬಂಧಿಸಿದ ಹಲವಾರು ಹಿರಿಯ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಅಮೆರಿಕವು 10 ಮಿಲಿಯನ್ ಡಾಲರ್ ಅಥವಾ ಪ್ರಸ್ತುತ ವಿನಿಮಯ ದರದಂತೆ 92,47,48,000 ರೂಪಾಯಿಗಳ ವರೆಗೆ ಬಹುಮಾನವನ್ನು ಘೋಷಿಸಿದೆ. ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್ ನಡೆಸುತ್ತಿರುವ ಅಮೆರಿಕ … Continued

ನೆಮ್ಮದಿ ಸುದ್ದಿ : ‘ಹಾರ್ಮುಜ್’ ಮೂಲಕ ಭಾರತದ 2 ಎಲ್‌ಪಿಜಿ ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ, ಒಂದು ಹಡಗು ಭಾರತಕ್ಕೆ ಪ್ರಯಾಣ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಆವರಿಸಿರುವ ಬೆನ್ನಲ್ಲೇ, ಭಾರತ ಮತ್ತು ಇರಾನ್ ನಡುವೆ ಹಡಗುಗಳ ಸಂಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜತಾಂತ್ರಿಕ ಒಪ್ಪಂದ ಏರ್ಪಟ್ಟಿದೆ. ಇದರ ಫಲವಾಗಿ, ಸುಮಾರು 40,000 ಮೆಟ್ರಿಕ್ ಟನ್ ಅಡುಗೆ ಅನಿಲ (LPG) ಹೊತ್ತ ‘ಶಿವಾಲಿಕ’ ಹೆಸರಿನ ಬೃಹತ್ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿದ್ದು, ಮುಂದಿನ 7 ದಿನಗಳಲ್ಲಿ ಭಾರತದ ಕರಾವಳಿಯನ್ನು ತಲುಪಲಿದೆ … Continued

ಜಾಗತಿಕ ತಲ್ಲಣದ ನಡುವೆ ಮಹತ್ವದ ಬೆಳವಣಿಗೆ :ಹಾರ್ಮುಜ್ ಜಲಸಂಧಿ ಬಳಸಲು ಕೆಲವು ದೇಶಗಳಿಗೆ ಅನುಮತಿ ಎಂದ ಇರಾನ್

ತೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್‌ ಜೊತೆಗಿನ ಇರಾನ್‌ ಯುದ್ಧದ ಹಿನ್ನೆಲೆಯಲ್ಲಿ ಆಯಕಟ್ಟಿನ ಹಾರ್ಮುಜ್ ಜಲಸಂಧಿ ಬಹುತೇಕ ಮುಚ್ಚಲ್ಪಟ್ಟಿದ್ದರೂ, ಕೆಲವು ದೇಶಗಳ ಹಡಗುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಇರಾನ್ ಉಪ ವಿದೇಶಾಂಗ ಸಚಿವ ಮಜೀದ್ ತಖ್ತ್-ರಾವಂಚಿ ತಿಳಿಸಿದ್ದಾರೆ. ಸುದ್ದಿಸಂಸ್ಥೆ ಎಎಫ್‌ಪಿ (AFP)ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಹಲವು ದೇಶಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ … Continued

ಐತಿಹಾಸಿಕ ತೀರ್ಪು: ಗಾಜಿಯಾಬಾದಿನ ಹರೀಶ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್ ಅನುಮತಿ

ನವದೆಹಲಿ: ಕಳೆದ 13 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ (Persistent Vegetative State) ಹಾಸಿಗೆಯಲ್ಲಿದ್ದ 32 ವರ್ಷದ ಯುವಕನಿಗೆ ದಯಾ ಮರಣ(ಗೌರವಯುತ ಸಾವಿನ ಹಕ್ಕು)ಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂ ಕೋರ್ಟ್ ಬುಧವಾರ ಐತಿಹಾಸಿಕ ತೀರ್ಪು ಪ್ರಕಟಿಸಿದೆ. 2018ರ ‘ಕಾಮನ್ ಕಾಸ್’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಮಾರ್ಗಸೂಚಿಗಳ ಅಡಿಯಲ್ಲಿ, ನ್ಯಾಯಾಂಗದ ಮೂಲಕ ದಯಾಮರಣಕ್ಕೆ (Passive Euthanasia) … Continued

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ…!

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ನನಗೆ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ … Continued

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆ ಕಾಮಗಾರಿಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಶರಾವತಿ ಸಿಂಹ ಬಾಲದ ಕೋತಿ (LTM) ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಉದ್ದೇಶಿತ ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಅಥವಾ ಚಟುವಟಿಕೆಗಳನ್ನು ನಡೆಸದಂತೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು … Continued