ಇರಾನ್‌ ಜೊತೆಗಿನ ಒಪ್ಪಂದ ಮುಗಿದ ಅಧ್ಯಾಯ ಎಂದು ಟ್ರಂಪ್‌ ಘೋಷಣೆ ; ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ

ಅಂಕಾರಾ (ಟರ್ಕಿ): ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಪರಸ್ಪರ ದಾಳಿಗಳ ಬಳಿಕ ಇರಾನ್‌ ಜೊತೆಗಿನ ಮಧ್ಯಂತರ ಕದನ ವಿರಾಮ (Ceasefire) ‘ಅಂತ್ಯಗೊಂಡಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಜುಲೈ 8) ಘೋಷಿಸಿದ್ದಾರೆ. ಇರಾನ್‌ನ ನಾಯಕತ್ವವನ್ನು “ಅನಾರೋಗ್ಯಪೀಡಿತರು” ಎಂದು ಟೀಕಿಸಿದ ಅವರು, “ಅವರ ಜೊತೆ ಮಾತುಕತೆ ನಡೆಸುವುದೇ ಸಮಯ ವ್ಯರ್ಥ” … Continued

₹300 ಕೋಟಿ ಬೇನಾಮಿ ಆಸ್ತಿ ಗಳಿಸಿದ ಆರೋಪ : ತೆಲಂಗಾಣದ ಉನ್ನತ ಪೊಲೀಸ್ ಅಧಿಕಾರಿ ಎಸಿಬಿ ಬಲೆಗೆ

ಹೈದರಾಬಾದ್ : ಆದಾಯಕ್ಕೆ ಮೀರಿದ ಆಸ್ತಿ (Disproportionate Assets) ಹೊಂದಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಸಂಜೆ ಪೊಲೀಸ್ ಕಂಪ್ಯೂಟರ್ ಸರ್ವಿಸಸ್‌ (ಪಿಸಿಎಸ್‌) ಡಿಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂಕಿರೆಡ್ಡಿ ಭೀಮ ರೆಡ್ಡಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಿದೆ. ಆದಾಯ ಮೂಲಗಳನ್ನು ಮೀರಿ ಸುಮಾರು 300 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾದ … Continued

ಸುಳ್ಯ : ʼಭಾರತದ ಬ್ರಿಜ್‌ ಮ್ಯಾನ್‌’ ಖ್ಯಾತಿಯ ಡಾ.ಗಿರೀಶ ಭಾರದ್ವಾಜ ಇನ್ನಿಲ್ಲ

ಮಂಗಳೂರು : ಪದ್ಮಶ್ರೀ ಪುರಸ್ಕೃತ, ‘ಭಾರತದ ಬ್ರಿಜ್‌ ಮ್ಯಾನ್‌’ ಎಂದೇ ಖ್ಯಾತರಾಗಿದ್ದ ಗಿರೀಶ ಭಾರದ್ವಾಜ (76) ಅವರು ಮಂಗಳವಾರ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ 150ಕ್ಕೂ ಹೆಚ್ಚು ಪರಿಸರ ಸ್ನೇಹಿ, ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಹೊಸ … Continued

ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ತೃಣಮೂಲ Vs ತೃಣಮೂಲ ಕದನ ತೀವ್ರ : ಪಕ್ಷದ ಪ್ರಧಾನ ಕಚೇರಿಯನ್ನೇ ತಮ್ಮ ವಶಕ್ಕೆ ತೆಗೆದುಕೊಂಡ ಬಂಡಾಯ ಬಣ

ಕೊಲ್ಕತ್ತಾ: ರಿತಬ್ರತ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬಂಡಾಯ ಬಣವು ಕೊಲ್ಕತ್ತಾದ ಮೆಟ್ರೋಪಾಲಿಟನ್ ಪ್ರದೇಶದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಫಿರ್ಹಾದ್ ಹಕೀಮ್, ಸಂದೀಪನ್ ಸಹಾ, ಜಾವೇದ್ ಖಾನ್ ಹಾಗೂ ಪಕ್ಷದ ಖಜಾಂಚಿ ಅಕ್ರುಜ್ಜಮಾನ ಸೇರಿದಂತೆ ಹಲವು ಶಾಸಕರೊಂದಿಗೆ ಕಚೇರಿಗೆ ಆಗಮಿಸಿದ ಬಂಡಾಯ ಬಣದ ನಾಯಕರು, ಕಚೇರಿಯ … Continued

ಭಾರತಕ್ಕೆ ಕಚ್ಚಾ ತೈಲ ನೀಡಿ ಮತ್ತೆ ಭಾರತದಿಂದಲೇ ಪೆಟ್ರೋಲ್‌ ಖರೀದಿಸುತ್ತಿರುವ ರಷ್ಯಾ…! ಇದಕ್ಕೆ ಕಾರಣ…?

ನವದೆಹಲಿ : ಉಕ್ರೇನ್ ನಡೆಸುತ್ತಿರುವ ಡ್ರೋನ್ ದಾಳಿಗಳಿಂದ ತನ್ನ ಇಂಧನ ಉತ್ಪಾದನಾ ಘಟಕಕ್ಕೆ ಉಂಟಾದ ಹಾನಿಯ   ಪರಿಣಾಮವಾಗಿ ಎದುರಾಗಿರುವ ಪೆಟ್ರೋಲ್ ಕೊರತೆಯನ್ನು ನಿವಾರಿಸಲು ರಷ್ಯಾವು ಸಮುದ್ರ ಮಾರ್ಗದ ಮೂಲಕ ಭಾರತದಿಂದ ಪೆಟ್ರೋಲ್ (ಗ್ಯಾಸೋಲಿನ್) ಆಮದು ಮಾಡಿಕೊಳ್ಳಲು ಆರಂಭಿಸಿದೆ ಎಂದು ಕೈಗಾರಿಕಾ ವಲಯದ ಮೂಲಗಳನ್ನು ಉಲ್ಲೇಖಿಸಿಹಲವಾರು ವರದಿಗಳು ತಿಳಿಸಿವೆ. ರಷ್ಯಾದ ಹಲವು ಪ್ರದೇಶಗಳಲ್ಲಿ ಇತ್ತೀಚೆಗೆ ಪೆಟ್ರೋಲ್ ಕೊರತೆ … Continued

‘ಯೂಸರ್‌ನೇಮ್’ ವೈಶಿಷ್ಟ್ಯ ವಿವಾದ: ವಾಟ್ಸ್ಆ್ಯಪ್ ನಂತರ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರ ಸರ್ಕಾರದ ನೋಟಿಸ್

ನವದೆಹಲಿ: ಮೆಸೇಜಿಂಗ್ ವೇದಿಕೆಗಳಾದ ಟೆಲಿಗ್ರಾಂ ಮತ್ತು ಸಿಗ್ನಲ್‌ನಲ್ಲಿರುವ ‘ಯೂಸರ್‌ನೇಮ್’ (Username) ವೈಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಗುರುವಾರ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಮೆಟಾ ಒಡೆತನದ ವಾಟ್ಸ್ಆ್ಯಪ್‌ಗೆ ಇದೇ ವೈಶಿಷ್ಟ್ಯದ ಕುರಿತು ಬುಧವಾರ ನೋಟಿಸ್ ನೀಡಿದ ಒಂದು ದಿನದ ಬಳಿಕ ಈ ಬೆಳವಣಿಗೆನಡೆದಿದೆ. ನೋಟಿಸ್‌ನಲ್ಲಿ, ಮೊಬೈಲ್ … Continued

ವಿಜಯ ಸರ್ಕಾರ ಉರುಳಿಸಲು ಡಿಎಂಕೆ ಸಂಚು ? ಟಿವಿಕೆಯಿಂದ ಶಾಸಕರಿಗೆ ₹35 ಕೋಟಿ ಆಮಿಷದ ಆರೋಪ ; ಮೂವರ ಬಂಧನ

ಚೆನ್ನೈ: ವಿಜಯ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕೂಡ ಪೂರ್ಣಗೊಳ್ಳುವ ಮುನ್ನವೇ ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ (ಹಾರ್ಸ್ ಟ್ರೇಡಿಂಗ್) ಆರೋಪದ ವಿವಾದ ಭುಗಿಲೆದ್ದಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಶಾಸಕರನ್ನು ಸೆಳೆಯಲು ಪ್ರತಿಪಕ್ಷ ಡಿಎಂಕೆ ನಾಯಕರಿಗೆ ಸಂಬಂಧಿಸಿದ ವ್ಯಕ್ತಿಗಳು ₹10 ಕೋಟಿಯಿಂದ ₹50 ಕೋಟಿವರೆಗೆ ಆಮಿಷ ಒಡ್ಡಿದ್ದಾರೆ … Continued

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲಿ ಮಳೆಯಿಲ್ಲದೆ ಕಂಗಾಲಾಗಿಸಿದ ಜೂನ್ ತಿಂಗಳಿಗೆ ಈ ವರ್ಷದ ಜೂನ್‌ ತಿಂಗಳೂ ಸೇರ್ಪಡೆ…!

ನವದೆಹಲಿ: ಭಾರತದಲ್ಲಿ ಈ ವರ್ಷದ (2026) ಮುಂಗಾರು ಆರಂಭದಲ್ಲೇ ತೀವ್ರ ನಿರಾಸೆ ಮೂಡಿಸಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದ್ದು, ವಾಯುವ್ಯ ಭಾರತದ ಹಲವು ಭಾಗಗಳಿಗೆ ಮುಂಗಾರು ಮಾರುತಗಳ ಆಗಮನ ಮತ್ತಷ್ಟು ವಿಳಂಬವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮುಂಗಾರಿನ ಪ್ರಗತಿ ತೀವ್ರ ಅಸಮತೋಲನದಿಂದ ಕೂಡಿದ್ದು, ದೇಶದ ಬಹುದೊಡ್ಡ ಭಾಗಗಳು ಇನ್ನೂ ಮಳೆಯ … Continued

ವಿಚಿತ್ರ ಹಳ್ಳಿ : ಇಲ್ಲಿ ಗಂಡಸರು ಮಾತಾಡೋ ಭಾಷೆ ಬೇರೆ…ಹೆಂಗಸರು ಮಾತಾಡೋ ಭಾಷೆ ಬೇರೆ ; ಆದ್ರೂ ಯಾವುದೇ ಸಮಸ್ಯೆ ಇಲ್ಲ !!

ನೈಜೀರಿಯಾ: ಒಂದೇ ಗ್ರಾಮದಲ್ಲಿ ಬೆಳೆದರೂ ಇಲ್ಲಿ ಗಂಸರು ಮತ್ತು ಹೆಂಗಸರು ಒಂದೇ ಭಾಷೆಯ ಎರಡು ವಿಭಿನ್ನ ರೂಪಗಳನ್ನು ಮಾತನಾಡುತ್ತಾರೆ ಎಂದರೆ ಅಚ್ಚರಿಯಾಗಬಹುದು. ದಕ್ಷಿಣ ನೈಜೀರಿಯಾದ ಉಬಾಂಗ್ (Ubang) ಗ್ರಾಮದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಸಾಗಿಬಂದಿರುವ ಈ ವಿಶಿಷ್ಟ ಭಾಷಾ ಸಂಪ್ರದಾಯ ಇದೀಗ ಜಗತ್ತಿನ ಭಾಷಾ ತಜ್ಞರ ಗಮನ ಸೆಳೆದಿದೆ. ಉಬಾಂಗ್ ಗ್ರಾಮದಲ್ಲಿ ಗಂಡಸರು ಮತ್ತು ಹೆಂಗಸರು ದಿನ … Continued