ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಜಯ; ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಕೊಲಂಬೊ: ಭಾನುವಾರ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಇಶಾನ್ ಕಿಶನ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಭಾರತದ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿಗೆ ಪಾಕಿಸ್ತಾನ ಮಣಿದಿದೆ. ಪಾಕ್ ವಿರುದ್ಧ 61 ರನ್‌ಗಳ ಬೃಹತ್ ಜಯ ದಾಖಲಿಸಿದ ಭಾರತ, ಟಿ20 ವಿಶ್ವಕಪ್‌ನ ಸೂಪರ್-8 ಹಂತವನ್ನು ಅಧಿಕೃತವಾಗಿ ಖಚಿತಪಡಿಸಿಕೊಂಡಿದೆ. ಈ ಗೆಲುವಿನ ಮೂಲಕ ಟಿ20 ವಿಶ್ವಕಪ್ … Continued

ಸಾವಿನಲ್ಲೂ ಸಾರ್ಥಕತೆ : 10 ತಿಂಗಳ ಕಂದಮ್ಮನ ಅಂಗಾಂಗ ದಾನ ; ನಾಲ್ವರಿಗೆ ಮರುಜೀವ ನೀಡಿದ ಕೇರಳದ ಪುಟ್ಟ ಮಗು

ತಿರುವನಂತಪುರಂ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ (Brain Dead)  10 ತಿಂಗಳ ಪುಟ್ಟ ಹೆಣ್ಣುಮಗುವೊಂದು ತನ್ನ ಅಂಗಾಂಗ ದಾನ ಮಾಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿರುವ ಅಪರೂಪದ ಹಾಗೂ ಹೃದಯಸ್ಪರ್ಶಿ ಘಟನೆ ಕೇರಳದಲ್ಲಿ ನಡೆದಿದೆ. ಫೆಬ್ರವರಿ 13ರ ಶುಕ್ರವಾರ ನಡೆದ ಈ ಅಂಗಾಂಗ ದಾನವು ಕೇರಳದಾದ್ಯಂತ ಮತ್ತೊಂದು ಶಿಶು ಸೇರಿದಂತೆ  ನಾಲ್ವರಿಗೆ ಹೊಸ ಬದುಕು ನೀಡಲಿದೆ. … Continued

ವೀಡಿಯೊಗಳು | ಚೀನಾದ ‘Seedance 2’ ಎಐ ವೀಡಿಯೊ ನೋಡಿದ್ರೆ ಬೆಚ್ಚಿ ಬೀಳ್ತಿರಾ ; ಶೂಟಿಂಗ್ ಇಲ್ಲದೆ ತಯಾರಾಗುತ್ತೆ ಸಿನಿಮಾ : ಹಾಲಿವುಡ್‌ಗೆ ನಡುಕ…!

ಬೀಜಿಂಗ್/ಕ್ಯಾಲಿಫೋರ್ನಿಯಾ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಅಮೆರಿಕ ಮತ್ತು ಚೀನಾ ನಡುವಿನ ಪೈಪೋಟಿ ಈಗ ಹೊಸ ಹಂತಕ್ಕೆ ತಲುಪಿದೆ. ಟಿಕ್‌ಟಾಕ್‌ನ ಮಾತೃ ಸಂಸ್ಥೆ ‘ಬೈಟ್‌ಡ್ಯಾನ್ಸ್’ (ByteDance) ಬಿಡುಗಡೆ ಮಾಡಿರುವ ನೂತನ ಎಐ ವಿಡಿಯೋ ಮಾಡೆಲ್ ‘Seedance 2.0’, ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ಇದರ ಅದ್ಭುತ ಕಾರ್ಯಕ್ಷಮತೆಯನ್ನು ಕಂಡ ಸಾಮಾಜಿಕ ಜಾಲತಾಣ ಬಳಕೆದಾರರು “ಇನ್ನು ಮುಂದೆ … Continued

ಪತ್ನಿಗೆ ಗರ್ಭಪಾತ ; ದೈವ ಪ್ರಸನ್ನಗೊಳಿಸಲು ನೆರೆಮನೆಯವರ ತಲೆ ಕತ್ತರಿಸಿದ ವ್ಯಕ್ತಿ…!

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಗುರುವಾರ ಬೆಳಗಿನ ಜಾವ ಧಾರ್ಮಿಕ ಆಚರಣೆಯೊಂದರಲ್ಲಿ 21 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ನೆರೆಹೊರೆಯವರ ಶಿರಚ್ಛೇದ ಮಾಡಿದ ಘಟನೆ ನಡೆದಿದೆ ಎಂದುವರದಿಯಾಗಿದೆ. ರಕ್ಷಣೆಗೆ ಬಂದ ಮತ್ತಿಬ್ಬರ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಆರೋಪಿಯನ್ನು ಛತ್ರಪತಿ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಗಳು ಈ ಹತ್ಯೆಗಳಿಗೆ ‘ಮಾಟಮಂತ್ರ’ಕ್ಕೆ … Continued

ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ ಪೊಲೀಸರ ವಶಕ್ಕೆ

ಬೆಂಗಳೂರು : ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಿಜೆಪಿ ಶಾಸಕ ಬೈರತಿ ಬಸವರಾj ಅವರನ್ನು ಅಹಮದಾಬಾದ್‌ನಿಂದ ಆಗಮಿಸಿದ ಬೆನ್ನಲ್ಲೇ, ಗುರುವಾರ ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಟರ್ಮಿನಲ್-1ರಲ್ಲಿ ಅವರ ಆಗಮನಕ್ಕಾಗಿ ಕಾಯುತ್ತಿದ್ದ ಪೊಲೀಸ್ ತಂಡವು ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಕೆ.ಆರ್. ಪುರಂ ಶಾಸಕರನ್ನು ಸಂಜೆ 7 ಗಂಟೆ ಸುಮಾರಿಗೆ ಕ್ರಿಮಿನಲ್ … Continued

ಅಮೆರಿಕ ಪೊಲೀಸ್ ಅಧಿಕಾರಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಸಿಯಾಟಲ್: 2023ರಲ್ಲಿ ಅತಿವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಜಾಹ್ನವಿ ಕಂಡುಲ ಅವರ ಕುಟುಂಬಕ್ಕೆ ಸಿಯಾಟಲ್ ನಗರ ಆಡಳಿತವು 29 ಮಿಲಿಯನ್ ಡಾಲರ್ (ಸುಮಾರು 262 ಕೋಟಿ ರೂಪಾಯಿ) ಪರಿಹಾರ ನೀಡಲು ಒಪ್ಪಿಕೊಂಡಿದೆ. 2023ರಲ್ಲಿ ಸಿಯಾಟಲ್‌ನ ಈಶಾನ್ಯ ವಿಶ್ವವಿದ್ಯಾಲಯದಲ್ಲಿ ಮಾಹಿತಿ ವ್ಯವಸ್ಥೆ (Information Systems) ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ … Continued

ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಹಾಡುವುದು ಕಡ್ಡಾಯ : ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ದೇಶದ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ‘ವಂದೇ ಮಾತರಂ’ ಅನ್ನು ಇನ್ಮುಂದೆ ಅದರ ಮೂಲ 6 ಚರಣಗಳೊಂದಿಗೆ ಹಾಡಬೇಕು ಎಂದು ಗೃಹ ಸಚಿವಾಲಯವು ತಿಳಿಸಿದೆ. ರಾಷ್ಟ್ರೀಯ ಗೌರವ ಮತ್ತು … Continued

ಭಾರತಕ್ಕೆ ರಾಜತಾಂತ್ರಿಕ ಜಯ; ಭಾರತ-ಅಮೆರಿಕ ಒಪ್ಪಂದದ ಫ್ಯಾಕ್ಟ್‌ಶೀಟಿನಲ್ಲಿ ಬೇಳೆಕಾಳು, ಕೃಷಿಯ ಪ್ರಮುಖ ನಿಯಮ ಪರಿಷ್ಕರಿಸಿದ ಅಮೆರಿಕ

ವಾಷಿಂಗ್ಟನ್/ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಐತಿಹಾಸಿಕ ವ್ಯಾಪಾರ ಒಪ್ಪಂದದ ವಿಚಾರದಲ್ಲಿ ಅಮೆರಿಕದ  ಶ್ವೇತಭವನವು ಅಧಿಕೃತ ‘ಫ್ಯಾಕ್ಟ್ ಶೀಟ್’ ಬಿಡುಗಡೆ ಮಾಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ ಒಪ್ಪಂದದ ಫ್ಯಾಕ್ಟ್‌ಶೀಟ್‌ನಲ್ಲಿರುವ ಪದಗಳು ಮತ್ತು ಕೆಲವು ನಿಯಮಗಳನ್ನು ಅಮೆರಿಕ ಸದ್ದಿಲ್ಲದೆ ಪರಿಷ್ಕರಿಸಿದೆ. ಭಾರತ ಮತ್ತು ಅಮೆರಿಕವು  ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ಅನಾವರಣಗೊಳಿಸಿದ ಕೆಲವು ದಿನಗಳ … Continued

ಟಿ20 ವಿಶ್ವಕಪ್‌ 2026 : ಭಾರತದ ವಿರುದ್ಧದ ಪಂದ್ಯ ಆಡಲ್ಲ ಎಂದಿದ್ದ ಪಾಕಿಸ್ತಾನ ಯೂ ಟರ್ನ್‌ ಹೊಡೆಯಲು ಕಾರಣಗಳೇನು..?

ಕಳೆದ ಕೆಲವು ದಿನಗಳಿಂದ ಜಾಗತಿಕ ಕ್ರಿಕೆಟ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಅನಿಶ್ಚಿತತೆ ಕೊನೆಗೊಂಡಿದೆ. ಫೆಬ್ರವರಿ 15 ರಂದು ನಡೆಯಲಿರುವ ಭಾರತ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಪ್ರಸ್ತಾವಿತ ನಿರ್ಧಾರದಿಂದ ಪಾಕಿಸ್ತಾನ ಸರ್ಕಾರ ಹಿಂದೆ ಸರಿದಿದೆ. ರಾಜತಾಂತ್ರಿಕ ಸಂಘರ್ಷ ಮತ್ತು ಬಹಿಷ್ಕಾರದ ಎಚ್ಚರಿಕೆ ನೀಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ … Continued

ಟಿ20 ವಿಶ್ವಕಪ್ : ಯು-ಟರ್ನ್ ಹೊಡೆದ ಪಾಕಿಸ್ತಾನ ; ಭಾರತದ ವಿರುದ್ಧದ ಪಂದ್ಯ ಆಡಲು ನಿರ್ಧಾರ…!

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)  ಯೂ ಟರ್ನ್‌ ಹೊಡೆದಿದೆ. ಐಸಿಸಿ (ICC) ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ, ಅದು ತಾನು ಈ ಹಿಂದೆ  ಘೋಷಿಸಿದ್ದ ಭಾರತದ ವಿರುದ್ಧದ ಪಂದ್ಯದ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಮೂಲಕ 2026ರ ಟಿ20 ವಿಶ್ವಕಪ್‌ನಲ್ಲಿ ನಿಗದಿಯಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯುವುದು ಖಚಿತವಾಗಿದೆ. ಪಾಕಿಸ್ತಾನ … Continued