ಪಹಲ್ಗಾಮ್ ದಾಳಿ: ಪಾಕ್ ಮೂಲದ ಉಗ್ರ ಸಾಜಿದ್ ಜಾಟ್ ಪ್ರಮುಖ ಸಂಚುಕೋರ ; ಎನ್‌ಐಎಯಿಂದ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆರೋಪಪಟ್ಟಿ ಸಲ್ಲಿಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಾಜಿದ್ ಜಾಟ್‌ನನ್ನು ಪ್ರಮುಖ ಸಂಚುಕೋರ ಎಂದು ಹೆಸರಿಸಲಾಗಿದೆ. ಸಾಜಿದ್‌ನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ ಎನ್‌ಐಎ (NIA) 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಪಹಲ್ಗಾಮ್ ಭಯೋತ್ಪಾದಕ … Continued

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ ; ಇವರು ಯಾರು ಗೊತ್ತೆ ?

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ಭಾನುವಾರ ಬಿಹಾರದ ಸಚಿವರಾದ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ. ನಿತಿನ್‌ ನಬಿನ್ ಅವರು ಪ್ರಸ್ತುತ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರದಲ್ಲಿ ಸಚಿವರಾಗಿದ್ದು, ಅಲ್ಲಿ ಅವರು ಲೋಕೋಪಯೋಗಿ (ರಸ್ತೆ ನಿರ್ಮಾಣ) ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ … Continued

ಕಾಂಗ್ರೆಸ್​​​​​ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 95 ನೇ ವಯಸ್ಸಿನ‌ ಶಾಮನೂರ ಶಿವಶಂಕರಪ್ಪ ಅವರು … Continued

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ : ಯುಡಿಎಫ್‌ ಗೆ ಭರ್ಜರಿ ಗೆಲುವು ; ಆಡಳಿತಾರೂಢ ಎಡರಂಗಕ್ಕೆ ಹಿನ್ನಡೆ

ತಿರುವನಂತಪುರಂ: 2025ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ (UDF) ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳೆರಡರಲ್ಲೂ ಭರ್ಜರಿ ವಿಜಯವನ್ನು ದಾಖಲಿಸಿದೆ. ಆರು ಪ್ರಮುಖ ಮಹಾನಗರ ಪಾಲಿಕೆಗಳಲ್ಲಿ ಯುಡಿಎಫ್ ನಾಲ್ಕರಲ್ಲಿ (ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು) ಭರ್ಜರಿ ಜಯಗಳಿಸಿದೆ.  ಎಲ್‌ಡಿಎಫ್ (LDF) ಕೋಝಿಕ್ಕೋಡ್ ಅನ್ನು ಮಾತ್ರ ಉಳಿಸಿಕೊಂಡಿದೆ. ಆದರೆ, … Continued

ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್‌ ಆರಂಭ…! ದೇಶ ವಿಭಜನೆಯ ನಂತರ ಇದೇ ಮೊದಲು

ಲಾಹೋರ್: ಪಾಕಿಸ್ತಾನದಲ್ಲಿ ವಿಭಜನೆಯಾದ (Partition) ನಂತರ ಮೊದಲ ಬಾರಿಗೆ, ಸಂಸ್ಕೃತ ಭಾಷೆ ಕೋರ್ಸ್‌ ಆರಂಭಿಸಿದೆ. ಲಾಹೋರ್ ಯೂನಿವರ್ಸಿಟಿ ಆಫ್ ಮ್ಯಾನೇಜ್‌ಮೆಂಟ್ ಸೈನ್ಸಸ್ (LUMS) ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಶಾಸ್ತ್ರೀಯ ಭಾಷೆಯಾದ ಸಂಸ್ಕೃತಕ್ಕೆ ನಾಲ್ಕು ಕ್ರೆಡಿಟ್‌ಗಳ ಕೋರ್ಸ್ ಅನ್ನು ಪ್ರಾರಂಭಿಸಿದೆ. ಈ ಉಪಕ್ರಮವು ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಬಂದ ಭಾರಿ ಪ್ರತಿಕ್ರಿಯೆಯಿಂದ ಬಂದಿದೆ. ಈ ಹಿಂದೆ ಮೂರು ತಿಂಗಳ … Continued

ಜನಗಣತಿ 2027 : ಸಂಪೂರ್ಣ ಡಿಜಿಟಲ್, ದತ್ತಾಂಶ ಸಂಗ್ರಹಣೆಗೆ ಅಪ್ಲಿಕೇಶನ್‌ಗಳು ; ಇದಕ್ಕಾಗಿ ₹11,718 ಕೋಟಿ ಅನುಮೋದನೆ

ನವದೆಹಲಿ : ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದೆ. ದೇಶದ ಮೂಲಭೂತ ದತ್ತಾಂಶ ಸಂಗ್ರಹಣಾ ಪ್ರಕ್ರಿಯೆಗೆ ಆಧುನಿಕ ಸ್ಪರ್ಶ ನೀಡುವ ನಿಟ್ಟಿನಲ್ಲಿ, ಜನಗಣತಿ 2027 ಕ್ಕೆ ಬರೋಬ್ಬರಿ ₹11,718 ಕೋಟಿ ಮೊತ್ತದ ಬೃಹತ್ ಅನುದಾನವನ್ನು ಕೇಂದ್ರ ಸಚಿವ ಸಂಪುಟವು ಶುಕ್ರವಾರ (ಡಿಸೆಂಬರ್ 12) ಅನುಮೋದಿಸಿದೆ. ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ಜನಗಣತಿ ನಡೆಯಲಿದೆ. ಹಳೆಯ … Continued

ಪುತಿನ್ ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಮೋದಿ-ಟ್ರಂಪ್ ದೂರವಾಣಿ ಮಾತುಕತೆ ; ಮಹತ್ವದ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಅವರು ಭಾರತ-ಅಮೆರಿಕದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ (India-US Comprehensive Global Strategic Partnership)ಯಲ್ಲಿನ ಪ್ರಗತಿಯನ್ನು ಅವಲೋಕಿಸಿದರು ಮತ್ತು ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸಲು ಮಾತುಕತೆಯಲ್ಲಿ ನಿರಂತರವಾದ ವೇಗವನ್ನು ಕಾಯ್ದುಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. … Continued

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು, 1 ಲಕ್ಷ ದಂಡ

ಬೆಳಗಾವಿ: ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲು ಈ ಮಸೂದೆ ಅವಕಾಶ ನೀಡುತ್ತದೆ. ಸಮಾಜ ಕಲ್ಯಾಣ ಸಚಿವ … Continued

ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬದಲಿಗೆ ‘ಪಾಲಿಯೆಸ್ಟರ್‌’ ಶಾಲುಗಳ ಪೂರೈಕೆ ; ಬೃಹತ್‌ ಹಗರಣ ಬೆಳಕಿಗೆ

ಹೈದರಾಬಾದ್ : ಶುದ್ಧ ರೇಷ್ಮೆ ಎಂದು ಹೇಳಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ (Tirumala Venkateswara Temple)  ಸುಮಾರು ಹತ್ತು ವರ್ಷಗಳ ಕಾಲ ಕಳಪೆ ಗುಣಮಟ್ಟದ ಪಾಲಿಯೆಸ್ಟರ್ ಶಾಲುಗಳನ್ನು (Dupattas) ಪೂರೈಸಿದ ಬೃಹತ್ ವಂಚನೆಯು ಬೆಳಕಿಗೆ ಬಂದಿದ್ದು, ದೇವಸ್ಥಾನ ಆಡಳಿತ ಮತ್ತು ಭಕ್ತರಲ್ಲಿ ತೀವ್ರ ಆಘಾತ ಮೂಡಿಸಿದೆ. ತಿರುಮಲ ತಿರುಪತಿ ದೇವಸ್ಥಾನಂ (TTD) ನ … Continued

ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ʼದೀಪಾವಳಿ ಹಬ್ಬʼ ಸೇರ್ಪಡೆ ; ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ

ನವದೆಹಲಿ: ಭಾರತದ ಅತ್ಯಂತ ಪ್ರಮುಖ ಮತ್ತು ಆಕರ್ಷಕ ಹಬ್ಬವಾದ ದೀಪಾವಳಿಯನ್ನು (Deepavali), ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪ್ರಾತಿನಿಧಿಕ ಪಟ್ಟಿಗೆ (Representative List of Intangible Cultural Heritage of Humanity) ಸೇರಿಸಲಾಗಿದೆ. 2025ರ ಪಟ್ಟಿಯಲ್ಲಿ ಸೇರ್ಪಡೆಗೊಂಡ 19 ಇತರ ಸಾಂಸ್ಕೃತಿಕ ಪರಂಪರೆಗಳ ಜೊತೆಗೆ ದೀಪಾವಳಿಯು … Continued