ಕೇರಳದ ವಿದ್ಯಾರ್ಥಿ ಶವವಾಗಿ ಪತ್ತೆಯಾಗುವ ಮುನ್ನ ಹಿರಿಯ ವಿದ್ಯಾರ್ಥಿಗಳು, ಸಹಪಾಠಿಗಳಿಂದ ನಿರಂತರ 29 ಗಂಟೆಗಳ ಕಾಲ ಚಿತ್ರಹಿಂಸೆ : ವರದಿ

ಮಾಧ್ಯಮ ವರದಿಯ ಪ್ರಕಾರ ಫೆಬ್ರವರಿ 18 ರಂದು ಕೇರಳದ ವಯನಾಡ್ ಜಿಲ್ಲೆಯ ಕಾಲೇಜು ಹಾಸ್ಟೆಲ್‌ನ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ 20 ವರ್ಷದ ಪಶುವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥನ್ ಜೆ.ಎಸ್. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳಿಂದ ಸುಮಾರು 29 ಗಂಟೆಗಳ ಕಾಲ “ನಿರಂತರವಾಗಿ” ಹಲ್ಲೆ ಚಿತ್ರಹಿಂಸೆಗೆ ಒಳಗಾಗಿದ್ದರು. ಶುಕ್ರವಾರ ಸಂಜೆ ಕೇರಳದ … Continued

ಕಾರವಾರ: ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

ಕಾರವಾರ: ಅಭಿಮಾನಿಯೊಬ್ಬ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋನಾರವಾಡದ ಅರುಣ ವರ್ಣೇಕರ ಎಂಬವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದ್ದಾರೆ. ಎಡಗೈ ತೋರು ಬೆರಳು … Continued

ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡು ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಚೀನಾ ಯತ್ನ : ಎಚ್ಚರಿಸಿದ ಮೈಕ್ರೋಸಾಫ್ಟ್

ನವದೆಹಲಿ : ಕೃತಕ ಬುದ್ಧಿಮತ್ತೆ ಸೃಷ್ಟಿಸಿದ ವಿಷಯಗಳನ್ನು ಬಳಸಿಕೊಂಡು ಭಾರತ, ಅಮೆರಿಕ ಮತ್ತು ದಕ್ಷಿಣ ಕೊರಿಯಾದಲ್ಲಿನ ಮುಂಬರುವ ರಾಷ್ಟ್ರೀಯ ಚುನಾವಣೆಗಳಿಗೆ ಅಡ್ಡಿಪಡಿಸಲು ಚೀನಾ ಸಜ್ಜಾಗುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ತೈವಾನ್‌ನ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಚೀನಾವು ಪ್ರಾಯೋಗಿಕವಾಗಿ ಈ ಆಟ ನಡೆಸಿದ ನಂತರ, ಫಲಿತಾಂಶದ ಮೇಲೆ ಪ್ರಭಾವ ಬೀರಲು ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡ … Continued

ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ, ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ ಸೇರಿ ಹಲವು ಭರವಸೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಣಾಳಿಕೆಯ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. … Continued

ನೀನು ಬಂದ್ರೆ ಶಾಲಾ ವಾತಾವರಣ ಹಾಳಾಗಲಿದೆ…: ಅತ್ಯಾಚಾರ ಸಂತ್ರಸ್ತೆಗೆ 12 ತರಗತಿ ಪರೀಕ್ಷೆ ಬರೆಯಲು ಬಿಡದ ಶಾಲೆ…!

ಅಜ್ಮೀರ್: ಕಳೆದ ವರ್ಷ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದರಿಂದ ತನ್ನ ಶಾಲೆಯು ತನಗೆ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಬಿಡಲಿಲ್ಲ ಎಂದು ರಾಜಸ್ಥಾನದಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ್ದಾಳೆ. ಪರೀಕ್ಷೆಗೆ ಹಾಜರಾದರೆ ಶಾಲೆಯ ವಾತಾವರಣ ಹಾಳಾಗುತ್ತದೆ ಎಂದು ಶಾಲಾ ಅಧಿಕಾರಿಗಳು ಹೇಳಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾಳೆ. ವಿದ್ಯಾರ್ಥಿನಿ 4 ತಿಂಗಳಿನಿಂದ ತರಗತಿಗಳಿಗೆ ಹಾಜರಾಗದ ಕಾರಣ … Continued

“ಅಮೇಥಿ ನನ್ನನ್ನು ಬಯಸಿದರೆ…”: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಗಾಂಧಿ ಕುಟುಂಬದ ಅಳಿಯ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ತಮ್ಮ ರಾಜಕೀಯ ಪಾದಾರ್ಪಣೆಯ ಸುಳಿವು ನೀಡಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಗುರುವಾರ “ನಾನು ಸಂಸದನಾಗಲು ಬಯಸಿದರೆ ನಾನು ಅವರನ್ನು ಪ್ರತಿನಿಧಿಸಬೇಕೆಂದು ಅಮೇಥಿಯ ಜನರು ನಿರೀಕ್ಷಿಸುತ್ತಾರೆ ಎಂದು ಹೇಳಿದ್ದಾರೆ. ರಾಯಬರೇಲಿ, … Continued

ಒಂದು ವರ್ಷದ ಹಿಂದೆ 17,545 ಕೋಟಿ ರೂ.ಗಳಿಷ್ಟಿದ್ದ ಬೈಜು ರವೀಂದ್ರನ್ ಆಸ್ತಿ ಈಗ ಶೂನ್ಯಕ್ಕೆ…!

ಇತ್ತೀಚೆಗೆ ಬಿಡುಗಡೆಯಾದ ಫೋರ್ಬ್ಸ್ ವರ್ಲ್ಡ್‌ನ ಬಿಲಿಯನೇರ್‌ಗಳ ಪಟ್ಟಿ 2024 ರ ಪ್ರಕಾರ ಒಂದು ವರ್ಷದ ಹಿಂದೆ ಬೈಜು ಸಂಸ್ಥಾಪಕ ಮತ್ತು ಸಿಇಒ ಬೈಜು ರವೀಂದ್ರನ್ ₹ 17,545 ಕೋಟಿ ಇದ್ದ ನಿವ್ವಳ  ಆಸ್ತಿ   ಮೌಲ್ಯವು ಈಗ ಶೂನ್ಯಕ್ಕೆ ಕುಸಿದಿದೆ. ಒಂದು ಕಾಲದಲ್ಲಿ ಅತ್ಯಮೂಲ್ಯವಾದ ಸ್ಟಾರ್ಟ್‌ಅಪ್‌ಗಳಲ್ಲಿ ಒಂದಾಗಿದ್ದ ಬೈಜೂಸ್ ಇತ್ತೀಚಿನ ದಿನಗಳಲ್ಲಿ ಹಲವಾರು ಹಿನ್ನಡೆಗಳನ್ನು ಎದುರಿಸುತ್ತಿದೆ, ಇದರಲ್ಲಿ … Continued

ಇಂಡಿ : ಯಶಸ್ವಿ ಕಾರ್ಯಾಚರಣೆ ; ಜೀವಂತವಾಗಿ ಹೊರಬಂದ ಬೋರ್‌ ವೆಲ್‌ ನಲ್ಲಿ ಬಿದ್ದಿದ್ದ 2 ವರ್ಷದ ಬಾಲಕ

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಜೀವಂತವಾಗಿ ಹೊರ ತೆಗೆಯಲಾಗಿದೆ. ಸುಮಾರು 16 ಗಂಟೆಗಳ ಕಾರ್ಯಾಚರಣೆ ಬಳಿಕ ಎರಡು ವರ್ಷದ ಸಾತ್ವಿಕ ಮುಜಗೊಂಡ ಎಂಬ ಮಗುವನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು … Continued

50 ವರ್ಷಗಳ ಹಿಂದೆ ಸತತವಾಗಿ 120 ಗಂಟೆಗಳ ಕಾಲ ಹಸಿವಿನಿಂದ ಬಳಲಿದ ಘಟನೆ ನೆನಪಿಸಿಕೊಂಡ ಇನ್ಫೋಸಿಸ್ ನಾರಾಯಣಮೂರ್ತಿ

ವಿಶ್ವಸಂಸ್ಥೆ: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 50 ವರ್ಷಗಳ ಹಿಂದೆ ನಿರಂತರ 120 ಗಂಟೆ ಕಾಲ ಹಸಿವಿನಿಂದ ಬಳಲಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಗೆ ಭಾರತದ ಪರ್ಮನೆಂಟ್ ಮಿಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುರೋಪ್‌ನಲ್ಲಿ ಹಿಚ್‌ಹೈಕಿಂಗ್ ಮಾಡುವಾಗ 120 ಗಂಟೆಗಳ ಕಾಲ “ಹಸಿವನ್ನು ಅನುಭವಿಸಿದ್ದೆ” ಎಂದು ನಾರಾಯಣ ಮೂರ್ತಿ … Continued