ಅಬ್ಬಬ್ಬಾ…ಮಹಾರಾಷ್ಟ್ರದಲ್ಲಿ 40 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..!!

ಮಹಾರಾಷ್ಟ್ರದಲ್ಲಿ ಭಾನುವಾರ (ಮಾರ್ಚ್ 28) 40,414 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಇದು ರಾಜ್ಯದ ಅತಿ ಹೆಚ್ಚು ಏಕದಿನ ಉಲ್ಬಣವಾಗಿದೆ. ಹಿಂದಿನ ಏಕೈಕ ಏಕದಿನ ಉಲ್ಬಣವು 36,902 ಪ್ರಕರಣಗಳು, ಇದು ಮಾರ್ಚ್ 26 ಶುಕ್ರವಾರ ದಾಖಲಾಗಿದೆ. ಅಲ್ಲದೆ, ದಿನದಲ್ಲಿ 108 ಕೊವಿಡ್‌-19 ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ … Continued

ಬಾಂಗ್ಲಾ ಹಿಂಸಾಚಾರಕ್ಕೆ ೧೧ ಸಾವು: ಇಸ್ಲಾಮಿಸ್ಟ್‌ ಮೂಲಭೂತವಾದಿಗಳಿಂದ ಹಿಂದೂ ದೇವಾಲಯಗಳ ಮೇಲೆ ದಾಳಿ

ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಭೇಟಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಾಂಗ್ಲಾದೇಶದ ಮೂಲಭೂತವಾದಿ ಇಸ್ಲಾಮಿಸ್ಟ್‌ ಸಂಘಟನೆ ಹೆಫಜತ್-ಎ-ಇಸ್ಲಾಮಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.ಉಸ್ತಾದ್ ಅಲಾವುದ್ದೀನ್ ಖಾನ್ ಮ್ಯೂಸಿಕ್ ಅಕಾಡೆಮಿಗೆ ಬೆಂಕಿ ಹಚ್ಚಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿರೋಧಿಸಿ ಬಾಂಗ್ಲಾದೇಶದಲ್ಲಿ … Continued

ಕರ್ನಾಟಕದಲ್ಲಿ 3 ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು..!ಇದು ಐದು ತಿಂಗಳಲ್ಲೇ ಗರಿಷ್ಠ ದೈನಂದಿನ ಪ್ರಕರಣ..!!

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ (ಭಾನುವಾರ) 3,082 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ತಿಳಿಸಿದೆ. ಇದು ಐದು ತಿಂಗಳ ನಂತರ ದಾಖಲಾದ ದೈನಂದಿನ ಗರಿಷ್ಠ ಪ್ರಕರಣಗಳಾಗಿವೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ತಲುಪಿದೆ. 12 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,87,012 … Continued

ಹಿರೆನ್‌ ಸಾವು: ಮಿಥಿ ನದಿ ಸೇತುವೆಗೆ ಸಚಿನ್ ವಾಝೆ ಕರೆತಂದ ಎನ್ಐಎ, ಕಂಪ್ಯೂಟರ್ ಸಿಪಿಯು, ವಾಹನ ಸಂಖ್ಯೆ ಪ್ಲೇಟ್ ಪತ್ತೆ

ಮುಂಬೈ; ಮನ್ಸುಖ್ ಹಿರೆನ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆಯನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಮಿಥಿ ನದಿಯ ಸೇತುವೆಗೆ ಭಾನುವಾರ ಕರೆದೊಯ್ದರು. ಈ ಸಂದರ್ಭದಲ್ಲಿ ಈಜುಪಟುಗಳು ಕಂಪ್ಯೂಟರ್ ಸಿಪಿಯು, ವಾಹನದ ನಂಬರ್ ಪ್ಲೇಟ್ ಮತ್ತು ಇತರ ವಸ್ತುಗಳನ್ನು ನದಿಯಿಂದ ವಶಪಡಿಸಿಕೊಂಡಿದ್ದಾರೆ ಎಂದು … Continued

ಅದಾನಿ ನಿವಾಸದಲ್ಲಿ ಅಮಿತ್‌ ಶಾ-ಪವಾರ್‌ ಭೇಟಿ ವದಂತಿ:ಎಲ್ಲವನ್ನೂ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ ಎಂದ ಶಾ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ತಿಕ್ಕಾಟದ ಮಧ್ಯೆ ಬಿಜೆಪಿಯ ಹಿರಿಯ ನಾಯಕತ್ವವು ಶರದ್ ಪವಾರ್ ಅವರ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಇದರ ಮಧ್ಯೆಯೇ ಶನಿವಾರ ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅಹಮದಾಬಾದಿನಲ್ಲಿ ಗೌತಮ ಅದಾನಿ ಮನೆಯಲ್ಲಿ ಭೇಟಿಯಾದರು ಎಂದು ಹಲವು ಮಾಧ್ಯಮಗಳಲ್ಲಿ … Continued

ಡಿಕೆಶಿ, ಬೆಂಬಲಿಗರ ಕಾರಿನ ಮೇಲೆ ರಮೇಶ ಜಾರಕಿಹೊಳಿ ಬೆಂಬಲಿಗರ ಕಲ್ಲು ತೂರಾಟ, ಗನ್‌ಮ್ಯಾನ್‌ ಎಳೆದಾಡಿದರು

ಬೆಳಗಾವಿ: ಬೆಳಗಾವಿ ಸಾಂಬ್ರಾ ಏರ್ಪೋರ್ಟ್ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನಗಳ ಮೇಲೆ ಹಾಗೂ ಎಸ್ಕಾರ್ಟ್‌ ವಾಹನದ ಮೇಲೆ  ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಡಿ.ಕೆ. ಶಿವಕುಮಾರ ಬೆಂಗಲಿಗರ ಕಾರಿನ ಗಾಜುಗಳು ಪುಡಿಯಾಗಿದೆ. ಅಲ್ಲದೆ ಡಿ.ಕೆ.ಶಿವಕುಮಾರ ಅವರ ಗನ್‌ಮ್ಯಾನ್‌ ಅವರನ್ನು  ಎಳೆದಾಡಿದ್ದಾರೆ. ನಂತರ ಗನ್‌ಮ್ಯಾನ್‌ ಬೇರೆ … Continued

ಕರ್ನಾಟಕದಲ್ಲಿ ೧ರಿಂದ ೯ನೇ ತರಗತಿ ವರೆಗೆ ಪರೀಕ್ಷೆಯಿಲ್ಲದೆ ತೇರ್ಗಡೆ, ನಾಳೆ ನಿರ್ಧಾರ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ 1 ರಿಂದ ೯ನೇ ತರಗತಿ ವರೆಗಿನ  ಪರೀಕ್ಷೆ ರದ್ದುಗೊಳಿಸಿ ಹಾಗೆಯೇ ತೇರ್ಗಡೆ ಮಾಡುವ ಚಿಂತನೆ ನಡೆಸಿದೆಯೇ?  ಈ ಬಗ್ಗೆ ಮಾ.೨೯ರಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಖಾತೆ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಡಾ.ಸುಧಾಕರ … Continued

ಪ್ರತಿಭಟನಾ ನಿರತ ರೈತರ ಬೇಡಿಕೆ ಈಡೇರಿಸದಿದ್ರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತ: ಟಿಕಾಯತ್‌ ಎಚ್ಚರಿಕೆ

ನವ ದೆಹಲಿ: ಪ್ರತಿಭಟನಾ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತಗೊಳಿಸುವುದಾಗಿ ಸಂಯುಕ್ತ ರೈತ ಒಕ್ಕೂಟದ ನಾಯಕ ರಾಕೇಶ ಟಿಕಾಯತ್‌ ಎಚ್ಚರಿಸಿದ್ದಾರೆ. ರಾಜಸ್ಥಾನದ ಭಾರತ್ಪುರದಲ್ಲಿ ಮಾಧ್ಯಮ ಸಂವಾದಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಾಧ್ಯಮ ಸಂವಾದವೊಂದರಲ್ಲಿ ಮಾತನಾಡಿದ ಅವರು,ಕಾರ್ಪೋರೇಟ್‌ ಸಂಸ್ಥೆಗಳೇ ದೇಶವನ್ನು ಆಳುತ್ತಿವೆ. ಕೇಂದ್ರದಲ್ಲಿ ಯಾವುದೇ ಸರ್ಕಾರವಿಲ್ಲ. … Continued

2ನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕೊರೊನಾ…!!

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಆರಂಭವಾಗಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ ಅವರೇ ಹೇಳಿದ್ದು, ಸರ್ಕಾರ ಸೋಂಕು ಹರಡುವಿಕೆ ತಡೆಯಲು ಹಲವು ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕದಲ್ಲಿ ಶನಿವಾರ 2,886 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,252. ಬೆಂಗಳೂರು ನಗರದಲ್ಲಿ 1820 ಹೊಸ ಪ್ರಕರಣ ದಾಖಲಾಗಿದೆ. ಆದರೆ ಎರಡನೇ ಅಲೆಯಲ್ಲಿ ಮಕ್ಕಳಲ್ಲಿ ಕೊರೊನಾ … Continued

ಭಾರತದಲ್ಲಿ 63 ಸಾವಿರದ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..!

ನವ ದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ದಿನೇ ದಿನೇ ಹೆಚ್ಚುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,714 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ತಾಸಿನಲ್ಲಿ 312 ಜನರು ಮಹಾಮಾರಿಗೆ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,61,552ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,86,310 … Continued