ತಂದೆ-ಸಹೋದರ ಡಿಕೆಶಿ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸುತ್ತಿರುವ ಸಿಡಿ ಪ್ರಕರಣ ಶನಿವಾರ ಸಾಕಷ್ಟು ತಿರುವು ಕಂಡಿದ್ದು, ಈಗ ಸಿಡಿ ಯುವತಿಯು ೫ನೇ ವಿಡಿಯೋ ಬಿಡುಗಡೆ ಮಾಡಿರುವುದು ಮತ್ತೊಂದು ಟ್ವಿಸ್ಟ್‌ಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ರಮೇಶ್ ಜಾರಕಿಹೊಳಿ ಹಾಗೂ ಸಿಡಿಯಲ್ಲಿ ಇದ್ದಾಳೆ ಎನ್ನಲಾಗುತ್ತಿರುವ ಯುವತಿಯ ಪೋಷಕರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಸಿಡಿ ಯುವತಿಯ ಮತ್ತೊಂದು … Continued

ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರು

ಪಂಜಾಬ್‌ನಲ್ಲಿ ಕೃಷಿ ವಿರೋಧಿ ಕಾನೂನುಹೋರಾಟಗಾರರು ಅಬೊಹಾರ್ ಶಾಸಕ ಅರುಣ್ ನಾರಂಗ್‌ ಅವರ ಮೇಲೆ ಹಲ್ಲೆ ನಡೆಸಿ, ನಂತರ ಬಟ್ಟೆಗಳನ್ನು ಹರಿದು ಹಾಕಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ, ಪೊಲೀಸರು ಶಾಸಕರನ್ನು ಸುರಕ್ಷಿತವಾಗಿ ಕರೆದೊಯ್ಯುವ ಮೊದಲು ನಾರಂಗ್ ಅವರು ಬಹುತೇಕ ಬೆತ್ತಲೆ ಸ್ಥಿತಿಯಲ್ಲಿದ್ದರು. ಪಂಜಾಬ್‌ನ ಮಾಲೌಟ್ ಪಟ್ಟಣದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. … Continued

ಕರ್ನಾಟಕದಲ್ಲಿ 2800 ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..!!

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2886 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 9,83,930ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,492ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1179 … Continued

ಡಿಕೆಶಿ ರಾಜಕಾರಣಕ್ಕೆ ನಾಲಾಯಕ್‌, ಆತನ ವಿರುದ್ಧ ದೂರು ದಾಖಲಿಸ್ತೇನೆ, ಅವನಂಥ ನೀಚ ರಾಜಕಾರಣಿ ನೋಡ್ಲಿಲ್ಲ ಎಂದು ಗುಡುಗಿದ ರಮೇಶ ಜಾರಕಿಹೊಳಿ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು ಹೇಳಿದ್ದಾರೆ. ಆ ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್ ಎಂದು ಅವನು ಗಂಡಸಲ್ಲ ಎಂದು ರಮೇಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಿರಪರಾಧಿ … Continued

ನಮ್ಮ ಅಕ್ಕನನ್ನು ಒತ್ತೆಯಾಳಾಗಿಟ್ಟುಕೊಂಡು ಡಿ.ಕೆ. ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ; ಸಿಡಿ ಯುವತಿ ಸಹೋದರನ ನೇರ ಆರೋಪ

ಬೆಂಗಳೂರು; ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಕುಟುಂಬದವರು, ನನ್ನ ಅಕ್ಕನ ಜೊತೆ ಮೊಬೈಲ್ ನಲ್ಲಿ ಚರ್ಚೆ ಮಾಡಿದ ಆಡಿಯೋ ವೈರಲ್ ಆಗಿದೆ. ನಮ್ಮ ಕುಟುಂಬಕ್ಕೆ ಏನೇ ತೊಂದರೆಯಾದರೂ ಡಿ.ಕೆ. … Continued

ಏರ್‌ ಇಂಡಿಯಾ ಶೇ.100 ಖಾಸಗೀಕರಣ: ನಿರ್ಧಾರ ಪ್ರಕಟಿಸಿದ ಸರ್ಕಾರ

ನವ ದೆಹಲಿ: ಏರ್ ಇಂಡಿಯಾದಲ್ಲಿ ಶೇ.100 ಹೂಡಿಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಪ್ರಕಟಿಸಿದ್ದಾರೆ. ಏರ್ ಇಂಡಿಯಾದಲ್ಲಿ ಶೇ. 100 ಹೂಡಿಕೆ ಮಾಡಲು ಅಂದರೆ ಖಾಸಗೀಕರಣದ ಮಾಡಲು ನಾವು ನಿರ್ಧರಿಸಿದ್ದೇವೆ. ಏರ್​ ಇಂಡಿಯಾ ವಿಮಾನಯಾನ ಸಂಸ್ಥೆಗೆ ಹೂಡಿಕೆ ಮಾಡುವುದು ಮತ್ತು ಮಾಡದಿರುವುದು ಈ ಎರಡೇ ಆಯ್ಕೆಗಳಿರುವುದರಿಂದ ಮುಚ್ಚುವುದರ ಬದಲಿಗೆ ಹೂಡಿಕೆ … Continued

ಎಸ್‌ಐಟಿ ಮುಂದೆ ಸಿಡಿ ಯುವತಿ ತಂದೆ-ತಾಯಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಕ್ಷಣಕ್ಷಣಕ್ಕೂ ತಿರುವು ಪಡೆದುಲಕೊಳ್ಳುತ್ತಿದೆ. ಶನಿವಾರ ಬೆಳಿಗ್ಗೆ ಸಿಡಿಯಲ್ಲಿದ್ದ ಯುವತಿಯ ಹೇಳಿಕೆಯುಳ್ಳ ವಿಡಿಯೋ ಬಿಡಗಡೆಯಾಗಿ ಅದರಲ್ಲಿ ತಮ್ಮ ಕುಟುಂಬಕ್ಕೆ ರಕ್ಷಣೆ ಕೋರಿದ ಬೆನ್ನಲ್ಲೇ ಯುವತಿಯ ಪೋಷಕರು ವಿಶೇಷ ತನಿಖಾ ದಳದ ಮುಂದೆ ಶನಿವಾರ ಹಾಜರಾಗಿದ್ದು, ಪ್ರಕರಣ ಮತ್ತೊಂದು ಟ್ವಿಸ್ಟ್‌ ಪಡೆದಿದೆ. ಅಜ್ಞಾತ ಸ್ಥಳದಲ್ಲಿರುವ ಯುವತಿ ಶನಿವಾರ … Continued

ಭಾರತದಲ್ಲಿ ಒಂದೇ ದಿನಕ್ಕೆ 62 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ದಾಖಲು..ಮಹಾರಾಷ್ಟ್ರದಲ್ಲೇ ಶೇ.60ಕ್ಕಿಂತ ಹೆಚ್ಚು..!!

ನವ ದೆಹಲಿ: ಕಳೆದ 24 ತಾಸಿನಲ್ಲಿ ಭಾರತದಲ್ಲಿ ಒಟ್ಟು 62,258 ಹೊಸ ಕೊರೊನಾ ಸೋಂಕುಗಳು ಪತ್ತೆಯಾಗಿದ್ದು, ಇದು ಕಳೆದ ಅಕ್ಟೋಬರ್‌ 16ರ ಈಚೆಗೆ ಕಂಡುಬಂದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ. ಈ ಪೈಕಿ 36,902 ಪ್ರರಣಗಳು ಅಂದರೆ ಶೇ62ರಷ್ಟು ಪ್ರಕರಣಗಳು ಮಹಾರಾಷ್ಟ್ರದಲ್ಲೇ ದಾಖಲಾಗಿವೆ. ಒಟ್ಟು 291 ಸಾವುಗಳು ವರದಿಯಾಗಿದ್ದು, ದರಲ್ಲಿ ಮಹಾರಾಷ್ಟ್ರದಲ್ಲಿ 117 ಮತ್ತು ಪಂಜಾಬ್‌ನಲ್ಲಿ … Continued

ತಕ್ಷಣವೇ ಜಾರಕಿಹೊಳಿ ಬಂಧಿಸಿ, ಇಲ್ಲದಿದ್ರೆ ಹೈಕೋರ್ಟಿಗೆ ಹೋಗ್ತೀವಿ..

  ಬೆಂಗಳೂರು: ಸಿಡಿ ಯುವತಿ ಹೇಳಿಕೆ ಆಧರಿಸಿ ನಾನು ದೂರು ನೀಡಿದ್ದೇನೆ.  ರಮೇಶ್ ಜಾರಕಿಹೊಳಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬಂಧಿಸಬೇಕು. ಬಂಧಿಸದಿದ್ದರೆ, ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಮೂಲಕ ಜಾರಕಿಹೊಳಿ ಹೆದರಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸಾಕ್ಷ್ಯ ನಾಶ ಮಾಡುವ … Continued

ಸಿಡಿ ಹಗರಣಕ್ಕೆ ಮತ್ತೆ ಟ್ವಿಸ್ಟ್: ಯುವತಿಯಿಂದ ಮತ್ತೊಂದು ವಿಡಿಯೋ ಬಿಡುಗಡೆ..

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ನಮ್ಮ ಆಟ ಶುರು, ಇಂದು (ಶನಿವಾರ) ಸಂಜೆ ೪ರಿಂದ ೬ ಗಂಟೆಯೊಳಗೆ ಹೊಸ ಬಾಂಬ್‌ ಹಾಕುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೇ ಈಗ ಸಿಡಿ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಬೆಳಿಗ್ಗೆ ಬಿಡುಗಡೆಯಾಗಿದೆ. ದಿನಕ್ಕೊಂದು ತಿರುವುದು ಪಡೆದುಕೊಳ್ಳುತ್ತಿರುವ ಈ ಸಿಡಿ ಪ್ರಕರಣ ಈಗ ನಾಲ್ಕನೇ … Continued