ಭಾರತ ಬಂದ್‌: ಹಲವೆಡೆ ರೈಲು ಸಂಚಾರ, ಸಾರಿಗೆ ವ್ಯತ್ಯಯ

ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ನಾಲ್ಕು ತಿಂಗಳ ಆಂದೋಲನದ ಹಿನ್ನೆಲೆಯಲ್ಲಿ ಇಂದು ಭಾರತ್ ಬಂದ್ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದಲೇ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ದೆಹಲಿಯಿಂದ ಚಂಡೀಗಡ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಬೆಳಿಗ್ಗೆ ರದ್ದುಪಡಿಸಲಾಗಿದೆ. ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ … Continued

ಭಾರತದಲ್ಲಿ 159 ದಿನಗಳ ನಂತರ ಅತಿ ಹೆಚ್ಚು ದೈನಂದಿನ ಕೊರೊನಾ ಉಲ್ಬಣ…!!

ನವ ದೆಹಲಿ : ದೇಶದಲ್ಲಿ ಕೊರೋನಾ ಉಲ್ಬಣ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 59,118 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 257 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅಕ್ಟೋಬರ್ 17ರ ನಂತರ 159 ದಿನಗಳಲ್ಲಿ ದೈನಂದನ ಅತಿ ಹೆಚ್ಚು ಪ್ರಕರಣ ದಾಖಲಾಗಿರುವುದಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 32,987 … Continued

ಮುಂಬೈ: ಕೊವಿಡ್‌ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ಏರಿದ ಸಾವಿನ ಸಂಖ್ಯೆ, 9 ಜನರ ಮರಣ

ಮುಂಬೈ: ಮುಂಬಯಿಯ ಭಂಡಪ್ ಪ್ರದೇಶದ ಖಾಸಗಿ ಕೊವಿಡ್‌ -19 ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಅನಾಹುತದಲ್ಲಿ  ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 9 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಉಪ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಮ್ ಅವರ ಪ್ರಕಾರ, ಸುಮಾರು 22 ಅಗ್ನಿಶಾಮಕ ದಳಗಳು ಆಸ್ಪತ್ರೆಗೆ ತಲುಪಿ ಬೆಂಕಿ ನಂದಿಸುತ್ತಿವೆ. ಮಾಲ್‌ನ ಮೂರನೇ ಮಹಡಿಯಲ್ಲಿರುವ ಆಸ್ಪತ್ರೆಗೆ … Continued

ಮಹಾರಾಷ್ಟ್ರ: ಬುಧವಾರದ ದಾಖಲೆಯನ್ನೂ ಮೀರಿ ದಾಖಲೆ ಮಾಡಿದ ದೈನಂದಿನ ಕೊರೊನಾ ಪ್ರಕರಣ..!

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ (ಮಾರ್ಚ್ 25) 35,952 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಇದು ರಾಜ್ಯದ ಅತಿ ಹೆಚ್ಚು ಏಕದಿನದ ಉಲ್ಬಣವಾಗಿದೆ. ಈ ಹಿಂದಿನ ಏಕೈಕ ಏಕದಿನ ಉಲ್ಬಣವು 31,855 ಪ್ರಕರಣಗಳಾಗಿದ್ದು, ಮಾರ್ಚ್ 24 ರ ಬುಧವಾರ ದಾಖಲಾಗಿತ್ತು. ದಿನದಲ್ಲಿ 111 ಕೊರೊನಾ ಸಾವುಗಳು ದಾಖಲಾಗಿದ್ದು, ಸಾವಿನ … Continued

ಕೊರೊನಾ 2ನೇ ಅಲೆ ಭೀತಿ: ಹಬ್ಬಗಳ ಸಾರ್ವಜನಿಕ ಆಚರಣೆ-ಕಾರ್ಯಕ್ರಮಗಳಿಗೆ ಸರ್ಕಾರ ನಿಷೇಧ

ಕರ್ನಾಟಕದಲ್ಲಿ ಕೊವಿಡ್‌ -19 ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ, ಮುಂಬರುವ ಹಬ್ಬಗಳಾದ ಹೋಳಿ, ಯುಗಾದಿ, ಶಾಬ್-ಎ-ಬರಾತ್ ಮತ್ತು ಶುಭ ಶುಕ್ರವಾರದಂದು ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ರಾಜ್ಯ ಸರ್ಕಾರ ನಿಷೇಧಿಸಿದೆ. ಸಾರ್ವಜನಿಕ ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿನ ಸಭೆ-ಸಮಾರಂಭಗಳು ಇವುಗಳಲ್ಲಿ ಸೇರಿವೆ. ತನ್ನ ಆದೇಶದಲ್ಲಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು … Continued

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ದಿ. ಸುರೇಶ ಅಂಗಡಿ ಪತ್ನಿ ಬಿಜೆಪಿ ಅಭ್ಯರ್ಥಿ

ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಮತ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯು ದಿವಂಗತ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ … Continued

ಕೊವಿಡ್‌ ಎರಡನೇ ಅಲೆ ಅವಧಿ 100 ದಿನಗಳ ವರೆಗೆ, ಏಪ್ರಿಲ್‌ನಲ್ಲಿ ಹೆಚ್ಚು ಉಲ್ಬಣ : ಎಸ್‌ಬಿಐ ಅಧ್ಯಯನ ವರದಿ

ಫೆಬ್ರವರಿಯಿಂದ ದೈನಂದಿನ ಹೊಸ ಕೊವಿಡ್‌-19 ಪ್ರಕರಣಗಳಲ್ಲಿ ಭಾರತವು ತೀವ್ರತೆ ಎದುರಿಸುತ್ತಿದೆ, ಇದು ಎರಡನೇ ಅಲೆಯನ್ನುಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಂಶೋಧನಾ ವರದಿ ತಿಳಿಸಿದೆ. ಸಂಶೋಧನಾ ವರದಿಯ ಪ್ರಕಾರ, ಎರಡನೇ ಅಲೆಯು 100 ದಿನಗಳ ವರೆಗೆ ಇರುತ್ತದೆ. ಸ್ಥಳೀಯ ಲಾಕ್‌ಡೌನ್‌ಗಳು “ನಿಷ್ಪರಿಣಾಮಕಾರಿಯಾಗಿದೆ” ಮತ್ತು ಕೊವಿಡ್‌ ವಿರುದ್ಧದ ಯುದ್ಧವನ್ನು ಗೆಲ್ಲುವ ಏಕೈಕ ಮಾರ್ಗವೆಂದರೆ … Continued

೩ ಕ್ಷೇತ್ರಗಳಿಗೆ ಉಪಚುನಾವಣೆ: ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ

ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಕಾಂಗ್ರೆಸ್‌ ಸಜ್ಜಾಗಿದೆ.ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈಗ ನಾಮಪತ್ರ ಸಲ್ಲಿಸುವ ದಿನಾಂಕಗಳನ್ನೂ ನಿಗದಿ ಮಾಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಮಾರ್ಚ್.29ರಂದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉಪಸ್ಥಿತರಿರುವರು ಎಂದು ಹೇಳಲಾಗಿದೆ. ರಾಯಚೂರು … Continued

ಕರ್ನಾಟಕದಲ್ಲಿ ಎರಡೂವರೆ ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು…! ಬೆಂಗಳೂರಲ್ಲಿ ಎಚ್ಚರಿಕೆ ಗಂಟೆ…!!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ (ಗುರುವಾರ) 2,523 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,78,478ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸಾವಿನ ಸಂಖ್ಯೆ 12,471ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿಯೇ … Continued

ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಲ್ಲಿ ಸೋಂಕಿತರ ಕೈಗೆ ಮತ್ತೆ ಸೀಲ್‌…!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಸೀಲ್ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ‌ ಹೆಚ್ಚುತ್ತಿರುವ ಕೋವಿಡ್ ಹರಡುವಿಕೆಯನ್ನ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನಾ ಸಭೆ ನಡೆಸಿದ ಬಳಿಕ ಮಾತನಾಡಿದಅವರು, ’20 … Continued