ಪ್ರಧಾನಿಯವರೇ ನಾವು ಆಂದೋಳನ ಜೀವಿಯಾಗಲು ಹೆಮ್ಮೆ ಪಡುತ್ತೇವೆ, ಯಾಕೆಂದರೆ ಇದು ನಮಗೆ ಸ್ವಾತಂತ್ರ್ಯ ತಂದುಕೊಟ್ಟಿದೆ 

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯಸಭೆಯಲ್ಲಿ ಭಾಷಣ ಮಾತನಾಡಿದ ಸಂರ್ಭದಲ್ಲಿ ಬಳಸಿದ “ಆಂದೋಳನ ಜೀವಿʼ ಎಂಬ ಪದ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ಸಂದರ್ಭದಲ್ಲಿ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರಸ್ತಾಪಿಸುವ ಸಂರ್ಭದಲ್ಲಿ ಈಗ ʼಆಂದೋಳನ ಜೀವಿʼಗಳು ನಾಯಿಕೊಡೆಗಳಂತೆ ತಲೆಎತ್ತುತ್ತಿದ್ದಾರೆ ಹಾಗೂ ಎಲ್ಲಿ ಯಾವುದೇ … Continued

ಮೋದಿ-ಬಿಡೆನ್‌ ಮಾತುಕತೆ: ಇಂಡೋ ಪೆಸಿಫಿಕ್‌ ಪ್ರದೇಶದ ಸುರಕ್ಷತೆಗೆ ಒತ್ತು

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20ರಂದು ಅಧಿಕಾರ ವಹಿಸಿಕೊಂಡ ನಂತರ ಇದು ಇಬ್ಬರು ನಾಯಕರ ನಡುವಿನ ಮೊದಲ ಸಂಭಾಷಣೆಯಾಗಿದೆ. ನಾವು ಪ್ರಾದೇಶಿಕ ಸಮಸ್ಯೆಗಳು ಮತ್ತು ನಮ್ಮ ಹಂಚಿಕೆಯ ಆದ್ಯತೆಗಳನ್ನು ಚರ್ಚಿಸಿದ್ದೇವೆ. ಹವಾಮಾನ ಬದಲಾವಣೆಯ ವಿರುದ್ಧ ನಮ್ಮ ಸಹಕಾರವನ್ನು ಹೆಚ್ಚಿಸಲು ನಾವು … Continued

ಕೆಂಪುಕೋಟೆ ಹಿಂಸಾಚಾರ: ಕೊನೆಗೂ ದೀಪ್‌‌ಸಿಧು ಸೆರೆ, ೭ ದಿನ ಪೊಲೀಸ್‌ ಕಸ್ಟಡಿಗೆ

ನವ ದೆಹಲಿ: ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ಎಂದು ಹೆಸರಿಸಲಾಗಿರುವ ಪಂಜಾಬಿ ನಟ-ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಅವರನ್ನು ದೆಹಲಿ ಪೊಲೀಸ್ ವಿಶೇಷ ಕೋಶವು ಮಂಗಳವಾರ ಬೆಳಿಗ್ಗೆ ಬಂಧಿಸಿದೆ. ಅವರನ್ನು  ದೆಹಲಿ ಮೆಟ್ರೊಪಅಲಿಟಿನ್‌ ನ್ಯಯಾಲಯಕ್ಕೆ ಹಾಜರುಪಡಿಸಲಾಗಿದ್ದ ಅವರನ್ನು ಕೋರ್ಟ್‌  ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಕೆಂಪು ಕೋಟೆಯಲ್ಲಿ … Continued

ಪರಿಷತ್ತಿನಲ್ಲೂ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ತಿನಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಕಾಯ್ದೆ ಮಂಡನೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಗದ್ದಲ ಮಾಡಿದರೂ ಕೊನೆಗೆ ಧ್ವನಿ ಮತಕ್ಕೆ ಹಾಕಿದಾಗ ಅಂಗೀಕಾರ ದೊರೆಯಿತು. ಮಸೂದೆ ಮಂಡಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಕಾಯ್ದೆಗೆ ಸದನ ಒಪ್ಪಿಗೆ ನೀಡುವಂತೆ ಮನವಿ … Continued

ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಿ: ಪ್ರಧಾನಿಗೆ ಟಿಕಾಯಿತ್‌ ಆಗ್ರಹ

ನವ ದೆಹಲಿ: ಹೊಸ ವಿವಾದಾತ್ಮಕ ಕೃಷಿ-ಮಾರುಕಟ್ಟೆ ಕಾನೂನುಗಳನ್ನು ರದ್ದುಪಡಿಸುವುದರ ಜೊತೆಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೆ ತರಬೇಕು ಎಂಬ ರೈತರ ಬೇಡಿಕೆಯನ್ನುರಾಕೇಶ ಟಿಕಾಯಿತ್‌ ಪುನರುಚ್ಚರಿಸಿದ್ದಾರೆ ಸೋಮವಾರ ರಾಜ್ಯಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮುಂದುವರಿಯಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ  ಘೋಷಣೆಗೆ ಪ್ರತಿಕ್ರಿಯಿಸಿದ ರೈತ ಮುಖಂಡ ರಾಕೇಶ್ ಟಿಕಾಯಿತ್‌ ಎಂಎಸ್‌ಪಿ ಕಾನೂನಿಗೆ ಒತ್ತಾಯಿಸಿದರು … Continued

ಸಿಖ್ಖರ ದೂಷಣೆ ನಿಲ್ಲಿಸಿ: ಪ್ರಧಾನಿ ಮೋದಿ

ನವ ದೆಹಲಿ: ಸಿಖ್ಖರ ಬಗ್ಗೆ ದೂಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಹಿಂಪಡೆದು ನೀತನ ಕೃಷಿ ಕಾನೂನು ಜಾರಿಯಗಲು ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸೋಮವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕೃಷಿ ಕಾನೂನ ಜಾರಿ ವಿಚಾರದಲ್ಲಿ ನಡೆಯುತ್ತಿರುವ ರಾಜಕಾರಣದ … Continued

ಈಗ ಸತ್ಯಾಗ್ರಹದ ರೂಪ ಪಡೆಯುತ್ತಿರುವ ರೈತ ಆಂದೋಳನ

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ನಂತರ, ಕೆಲ ದುಷ್ಟಶಕ್ತಿಗಳು ಸೇರಿಕೊಂಡು ಮಾಡಿದ ಹಿಂಸೆ ಪ್ರಾಮಾಣಿಕವಾದ ಅಹಿಂಸಾತ್ಮಕ ಪ್ರತಿಭಟನೆ ದುರ್ಬಲಗೊಳಿಸುವುದನ್ನು ತಡೆಯುವುದು ಎಷ್ಟು ಕಷ್ಟ ಎಂಬ ಬಗ್ಗೆ ಸಾಕಷ್ಟು ಅಭಿಪ್ರಾಯಗಳಿವೆ. ಆದರೆ ಫೆ.೧ರಿಂದ ಮತ್ತೆ ಅಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ ದೆಹಲಿಯ ಹೊರವಲಯದ ಸಿಂಘು ಗಡಿಗೆ ಸೀಮಿತವಾಗಿದ್ದ ಈ ಅಹಿಂಸಾತ್ಮಕ ಪ್ರತಿಭಟನೆ, ಸತ್ಯಾಗ್ರಹದ ರೂಪದಲ್ಲಿ ಈಗ … Continued

ಕನಿಷ್ಠ ಬೆಂಬಲ ಬೆಲೆ ಇತ್ತು, ಇದೆ, ಮುಂದೆಯೂ ಇರಲಿದೆ: ರೈತರಿಗೆ ಪ್ರಧಾನಿ ಅಭಯ

ಕೃಷಿ ಕಾನೂನುಗಳನ್ನು ಹಸಿರು ಕ್ರಾಂತಿಯೊಂದಿಗೆ ಹೋಲಿಸಿದ ಪ್ರಧಾನಿ   ನವ ದೆಹಲಿ; ಕೃಷಿ ಉತ್ಪನ್ನಕ್ಕೆ ಕನಿಷ್ಠ ಬೆಂಬಲ ಬೆಲೆ ಇತ್ತು, ಇದೆ, ಮುಂದೆಯೂ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಪುನಃ ಆಶ್ವಾಸನೆ ನೀಡಿದರು. ರಾಷ್ಟ್ರಪತಿ ಭಾಷಣಕ್ಕೆ ಅಭಿನಂದನಾ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದ ಅವರು, ನಾವು ಈ ಸಮಯವನ್ನು ಕಳೆದುಕೊಳ್ಳಬಾರದು, ಪ್ರಗತಿ ಹೊಂದಬೇಕು, … Continued

ರೈತರ ಪ್ರತಿಭಟನೆ: 1,178 ಖಾತೆ ತೆಗೆಯಲು ಟ್ವಿಟರ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವ ದೆಹಲಿ: ರೈತರ ಪ್ರತಿಭಟನೆಯ ಸುತ್ತಲಿನ ‘ಟೂಲ್‌ಕಿಟ್’ ವಿವಾದದ ಮಧ್ಯೆ, ರೈತರ ಆಂದೋಲನದ ಬಗ್ಗೆ ತಪ್ಪು ಮಾಹಿತಿ ಮತ್ತು ಪ್ರಚೋದನಕಾರಿ ವಿಷಯ ಹರಡುವ 1,178 “ಪಾಕಿಸ್ತಾನಿ-ಖಲಿಸ್ತಾನಿ ಖಾತೆಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್‌ಗೆ ನಿರ್ದೇಶನ ನೀಡಿದೆ” ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಟ್ವಿಟರ್ ಇನ್ನೂ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಿಲ್ಲ. ರೈತ ಸಂಘಗಳ … Continued

ಉತ್ತರಾಖಂಡದಲ್ಲಿ ಹಿಮಪದರ ಕುಸಿತ: ೨೬ ಸಾವು, 15 ಜನರ ರಕ್ಷಣೆ

ಉತ್ತರಾಖಂಡ: ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟಗೊಂಡ ನಂತರ ಉತ್ತರಾಖಂಡದ ತಪೋವನ್ ಜಲ-ವಿದ್ಯುತ್ ಶಕ್ತಿ ಅಣೆಕಟ್ಟು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ ಎಂದು ಭಾರತೀಯ ವಾಯುಪಡೆಯ ಆರಂಭಿಕ ವರದಿಯಲ್ಲಿ ತೋರಿಸಲಾಗಿದೆ. ಧೌಲಿ ಗಂಗಾ ಮತ್ತು ರಿಷಿ ಗಂಗಾ ನದಿಗಳ ಸಂಗಮದಲ್ಲಿರುವ ಅಣೆಕಟ್ಟು ಸಂಪೂರ್ಣವಾಗಿ ನಾಶವಾಗಿದೆ ಎಂದು ಸಮೀಕ್ಷೆಯ ಚಿತ್ರಗಳು ತೋರಿಸಿದೆ. ಮಲಾರಿ ಕಣಿವೆಯ ಪ್ರವೇಶದ್ವಾರದಲ್ಲಿ ಮತ್ತು ತಪೋವನ್ ಬಳಿಯಿರುವ … Continued