ಕರ್ನಾಟಕದಲ್ಲಿ ಶುಕ್ರವಾರ 27 ಸಾವಿರದ ಹತ್ತಿರವೇ ಬಂದ ದೈನಂದಿನ ಕೊರೊನಾ ಸೋಂಕು.. 190 ಸಾವು..

ಬೆಂಗಳೂರು : ರಾಜ್ಯದಲ್ಲಿ 24 ಗಂಟೆಯಲ್ಲಿ 26,962 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 190 ಜನ ಈ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1274959 ಕ್ಕೆ ಏರಿಕೆಯಾಗಿದೆ. ಹಾಗೂ ಸಕ್ರಿಯ ಪ್ರಕರಣಗಳು … Continued

ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌ ಎವರೆಸ್ಟ್ ತಲುಪಿದ ಕೊರೊನಾ ವೈರಸ್‌..!!

ಕೊರೊನಾ ವೈರಸ್ ವಿಶ್ವದ ಅತಿ ಎತ್ತರದ ಪರ್ವತವನ್ನೂ ವಶಪಡಿಸಿಕೊಂಡಿದೆ.,,! ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಕೋವಿಡ್ -19 ಪರೀಕ್ಷೆಗೆ ಒಳಗಾದ ನಾರ್ವೇಜಿಯನ್ ಪರ್ವತಾರೋಹಿ ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಮೂಲಕ ಕಠ್ಮಂಡುವಿಗೆ ಒಯ್ದು ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.,,!! ಎರ್ಲೆಂಡ್ ನೆಸ್ ಅವರು ಅಸೋಸಿಯೇಟೆಡ್ ಪ್ರೆಸ್‌ಗೆ ಕಳುಹಿಸಿದ ಶುಕ್ರವಾರ ಸಂದೇಶವೊಂದರಲ್ಲಿ ಏಪ್ರಿಲ್ 15 … Continued

ಆಮ್ಲಜನಕದ ಟ್ಯಾಂಕರ್‌ ಕ್ಷಿಪ್ರ ಸಾಗಾಟಕ್ಕೆ ರೈಲ್ವೆ, ವಾಯುಪಡೆ ವಿಮಾನ ನಿಯೋಜನೆ: ಪ್ರಧಾನಿ ಮೋದಿ

ನವ ದೆಹಲಿ: ಕೋವಿಡ್ -19 ಹೋರಾಟದಲ್ಲಿ ಹಲವಾರು ರಾಜ್ಯಗಳು ವೈದ್ಯಕೀಯ ಆಮ್ಲಜನಕದ ಕೊರತೆ ಎದುರಿಸುತ್ತಿದ್ದು, ಆಕ್ಸಿಜನ್ ಟ್ಯಾಂಕರ್‌ಗಳ ಸಾರಿಗೆ ಸಮಯವನ್ನು ಕಡಿಮೆ ಮಾಡಲು ರೈಲ್ವೆ ಮತ್ತು ವಾಯುಪಡೆಯ ವಿಮಾನಗಳನ್ನು ನಿಯೋಜಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಶುಕ್ರವಾರ ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉನ್ನತಮಟ್ಟದ ಸಭೆ … Continued

ಎಲ್ಲ ರಾಜ್ಯಗಳಿಗೂ ಹೆಚ್ಚುವರಿ ಆಮ್ಲಜನಕ-ರೆಮ್ಡಿಸಿವಿರ್‌ ಪೂರೈಕೆ: ಪ್ರಧಾನಿ ಮೋದಿ

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ಡಿಸಿವಿರ್‌ ವ್ಯಾಕ್ಸಿನ್‌ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಶುಕ್ರವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, … Continued

ಇಂದು ರಾತ್ರಿ 9ರಿಂದ ವೀಕೆಂಡ್‌ ಕರ್ಫ್ಯೂ ಯಾರ್ಯಾರಿಗೆ- ಯಾವುದಕ್ಕೆ ಅವಕಾಶ.. ಯಾವುದಕ್ಕೆ ಇಲ್ಲ..

ಬೆಂಗಳೂರು: ರಾಜ್ಯದಲ್ಲಿ ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರುವ ಪ್ರಯತ್ನದಲ್ಲಿ ಕರ್ನಾಟಕ ಸರ್ಕಾರ ಈ ವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿ ಇಡೀ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಿದೆ. ಅದರೊಂದಿಗೆ, ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ರಾಜ್ಯ ಸರ್ಕಾರವು ವಾರಾಂತ್ಯದ ಕರ್ಫ್ಯೂ ಸಹ ವಿಧಿಸಿದೆ. ಕರ್ನಾಟಕದಾದ್ಯಂತ, ಹೊಸ ಲಾಕ್‌ಡೌನ್ ಮಾರ್ಗಸೂಚಿಗಳು ಏಪ್ರಿಲ್ 21 ರಂದು ರಾತ್ರಿ … Continued

ಭಾರತದಲ್ಲಿ 3.30 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು..!, ಸಾವುಗಳಲ್ಲಿಯೂ ಹೆಚ್ಚಳ..

ನವ ದೆಹಲಿ: ಭಾರತವು ಶುಕ್ರವಾರ ಸತತ ಎರಡನೇ ದಿನಕ್ಕೆ 3 ಲಕ್ಷಕ್ಕಿಂತ ಹೆಚ್ಚು ದೈನಂದಿನ ಕೊರೊನಾ ವೈರಸ್ ಸೋಂಕು (ಕೋವಿಡ್ -19) ಪ್ರಕರಣಗಳನ್ನು ವರದಿ ಮಾಡಿದೆ, ಕಳೆದ 24 ಗಂಟೆಗಳಲ್ಲಿ 3,32,730 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿದೆ. ಭಾರತವು ಗುರುವಾರ 3,14,835 ಹೊಸ ಪ್ರಕರಣಗಳನ್ನು ದಾಖಲಿಸಿತ್ತು. ಇದರೊಂದಿಗೆ, ವಿಶ್ವದ … Continued

ಉಸಿರಾಟದ ಸಮಸ್ಯೆ ಎದುರಾದ ಕೊರೊನಾ ಸೋಂಕಿತರಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಮಹತ್ವದ ಸಲಹೆ

ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರು ಉಸಿರಾಟದ ಸಮಸ್ಯೆ ಅನುಭವಿಸಿದರೆ ಮಾಡಬೇಕಾದ ಪ್ರೋನಿಂಗ್​ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ. ಆಮ್ಲಜನಕ ಮಟ್ಟ ಸುಧಾರಿಸಿಕೊಳ್ಳಲು ಮಾಡಬೇಕಾದ ಪ್ರೋನಿಂಗ್​ ಬಗ್ಗೆ ವಿಸ್ತೃತ ವರದಿಯನ್ನ ತಯಾರಿಸಲಾಗಿದೆ. ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರೋದ್ರ ಹಿನ್ನೆಲೆ ಆಸ್ಪತ್ರೆಗಳ ಅಭಾವ ಕಂಡುಬರುತ್ತಿದೆ. ಹೀಗಾಗಿ ವೈದ್ಯರು ಆದಷ್ಟು ಮನೆಯಲ್ಲೇ ಚಿಕಿತ್ಸೆ ಪಡಯಿರಿ … Continued

ಮಹಾರಾಷ್ಟ್ರ ವಿರಾರ್‌ ಆಸ್ಪತ್ರೆಯಲ್ಲಿ ಬೆಂಕಿ ಅವಘಡ:14 ಕೊರೊನಾ ರೋಗಿಗಳು ಸಾವು

ಮುಂಬೈ: ಪಾಲ್ಘರ್ ಜಿಲ್ಲೆಯ ವಾಸೈ ವಿರಾರ್ ಪುರಸಭೆಯ ಮಿತಿಯಲ್ಲಿರುವ ವಿರಾರ್‌ನ ಕೋವಿಡ್‌ -19 ಕೇಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕನಿಷ್ಠ 14 ಕೊರೊನಾ ವೈರಸ್ ರೋಗಿಗಳು ಮೃತಪಟ್ಟಿದ್ದಾರೆ. ಈ ಘಟನೆ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಕೋವಿಡ್‌-19 ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ನಂತರ ರೋಗಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 25 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ..123 ಸಾವು..!

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 25,795 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 123 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 68 … Continued