ಭಾರತದಲ್ಲಿ ಸೋಮವಾರವೂ 68 ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..!

ನವ ದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ (ಸೋಮವಾರ) 68,020 ಜನರಲ್ಲಿ ಸೋಂಕು ಪತ್ತೆಯಾಗಿದೆ. 291 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ. ಹಾಗೂ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,61,843ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 5,21,808 ಕೊರೊನಾ ಸಕ್ರಿಯ ಪ್ರಕರಣಗಳಿದ್ದು 1,13,55,993 ಸೋಂಕಿತರು ಗುಣಮುಖರಾಗಿದ್ದಾರೆ. … Continued

ಆಘಾತಕಾರಿ ಘಟನೆ: ಅತ್ಯಾಚಾರ ಆರೋಪಿ ಜೊತೆ ಅತ್ಯಾಚಾರ ಸಂತ್ರಸ್ತೆಯನ್ನೂ ಹಗ್ಗಗಳಿಂದ ಕಟ್ಟಿ ಮೆರವಣಿಗೆ..!

ಅಲಿರಾಜ್‌ಪುರ: ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಅಲಿರಾಜ್‌ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯೊಬ್ಬಳ ಮೇಲೆ 21 ವರ್ಷದ ಯುವಕ ಭಾನುವಾರ ಅತ್ಯಾಚಾರ ಎಸಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆರೋಪಿ ಮತ್ತು ಅತ್ಯಾಚಾರ ಸಂತ್ರಸ್ತೆ ಇಬ್ಬರನ್ನೂ ಹಗ್ಗಗಳಿಂದ ಕಟ್ಟಿ, ಥಳಿಸಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಆಘಾತಕಾರಿ ಘಟನೆ ವರದಿಯಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಈ … Continued

ಎರಡನೇ ಕೋವಿಡ್ ಅಲೆ ತೀವ್ರ: ಕಂಪೆನಿಗಳಿಗೆ ಕಾರ್ಮಿಕರ ಕೊರತೆ ಚಿಂತೆ ಹೆಚ್ಚಳ

ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಮಧ್ಯದಲ್ಲಿ ಭಾರತವಿದೆ. ಕಳೆದ ಕೆಲವು ವಾರಗಳಿಂದ ಕೋವಿಡ್ -೧೯ ಸೋಂಕುಗಳು ಹೆಚ್ಚಾಗುತ್ತಿವೆ. ಕೊರೊನಾ ವೈರಸ್ ಹೆಚ್ಚಳ ಕಾರ್ಮಿಕರ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಹಾಗೂ ಪುನಃ ಅದನ್ನು ಪರಿಶೋಧಿಸುತ್ತದೆ. ಕಳೆದ ವಾರದಲ್ಲಿ ದಿನಕ್ಕೆ ೪೫ ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ದೇಶ ೬೮ ಸಾವಿರದ ವರೆಗೆ … Continued

ಅಬ್ಬಬ್ಬಾ…ಮಹಾರಾಷ್ಟ್ರದಲ್ಲಿ 40 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..!!

ಮಹಾರಾಷ್ಟ್ರದಲ್ಲಿ ಭಾನುವಾರ (ಮಾರ್ಚ್ 28) 40,414 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಇದು ರಾಜ್ಯದ ಅತಿ ಹೆಚ್ಚು ಏಕದಿನ ಉಲ್ಬಣವಾಗಿದೆ. ಹಿಂದಿನ ಏಕೈಕ ಏಕದಿನ ಉಲ್ಬಣವು 36,902 ಪ್ರಕರಣಗಳು, ಇದು ಮಾರ್ಚ್ 26 ಶುಕ್ರವಾರ ದಾಖಲಾಗಿದೆ. ಅಲ್ಲದೆ, ದಿನದಲ್ಲಿ 108 ಕೊವಿಡ್‌-19 ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ … Continued

ಬಾಂಗ್ಲಾ ಹಿಂಸಾಚಾರಕ್ಕೆ ೧೧ ಸಾವು: ಇಸ್ಲಾಮಿಸ್ಟ್‌ ಮೂಲಭೂತವಾದಿಗಳಿಂದ ಹಿಂದೂ ದೇವಾಲಯಗಳ ಮೇಲೆ ದಾಳಿ

ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಭೇಟಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಾಂಗ್ಲಾದೇಶದ ಮೂಲಭೂತವಾದಿ ಇಸ್ಲಾಮಿಸ್ಟ್‌ ಸಂಘಟನೆ ಹೆಫಜತ್-ಎ-ಇಸ್ಲಾಮಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.ಉಸ್ತಾದ್ ಅಲಾವುದ್ದೀನ್ ಖಾನ್ ಮ್ಯೂಸಿಕ್ ಅಕಾಡೆಮಿಗೆ ಬೆಂಕಿ ಹಚ್ಚಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿರೋಧಿಸಿ ಬಾಂಗ್ಲಾದೇಶದಲ್ಲಿ … Continued

ಕರ್ನಾಟಕದಲ್ಲಿ 3 ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು..!ಇದು ಐದು ತಿಂಗಳಲ್ಲೇ ಗರಿಷ್ಠ ದೈನಂದಿನ ಪ್ರಕರಣ..!!

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ (ಭಾನುವಾರ) 3,082 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ತಿಳಿಸಿದೆ. ಇದು ಐದು ತಿಂಗಳ ನಂತರ ದಾಖಲಾದ ದೈನಂದಿನ ಗರಿಷ್ಠ ಪ್ರಕರಣಗಳಾಗಿವೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ತಲುಪಿದೆ. 12 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,87,012 … Continued

ಹಿರೆನ್‌ ಸಾವು: ಮಿಥಿ ನದಿ ಸೇತುವೆಗೆ ಸಚಿನ್ ವಾಝೆ ಕರೆತಂದ ಎನ್ಐಎ, ಕಂಪ್ಯೂಟರ್ ಸಿಪಿಯು, ವಾಹನ ಸಂಖ್ಯೆ ಪ್ಲೇಟ್ ಪತ್ತೆ

ಮುಂಬೈ; ಮನ್ಸುಖ್ ಹಿರೆನ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆಯನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಮಿಥಿ ನದಿಯ ಸೇತುವೆಗೆ ಭಾನುವಾರ ಕರೆದೊಯ್ದರು. ಈ ಸಂದರ್ಭದಲ್ಲಿ ಈಜುಪಟುಗಳು ಕಂಪ್ಯೂಟರ್ ಸಿಪಿಯು, ವಾಹನದ ನಂಬರ್ ಪ್ಲೇಟ್ ಮತ್ತು ಇತರ ವಸ್ತುಗಳನ್ನು ನದಿಯಿಂದ ವಶಪಡಿಸಿಕೊಂಡಿದ್ದಾರೆ ಎಂದು … Continued

ಅದಾನಿ ನಿವಾಸದಲ್ಲಿ ಅಮಿತ್‌ ಶಾ-ಪವಾರ್‌ ಭೇಟಿ ವದಂತಿ:ಎಲ್ಲವನ್ನೂ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ ಎಂದ ಶಾ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ತಿಕ್ಕಾಟದ ಮಧ್ಯೆ ಬಿಜೆಪಿಯ ಹಿರಿಯ ನಾಯಕತ್ವವು ಶರದ್ ಪವಾರ್ ಅವರ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಇದರ ಮಧ್ಯೆಯೇ ಶನಿವಾರ ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅಹಮದಾಬಾದಿನಲ್ಲಿ ಗೌತಮ ಅದಾನಿ ಮನೆಯಲ್ಲಿ ಭೇಟಿಯಾದರು ಎಂದು ಹಲವು ಮಾಧ್ಯಮಗಳಲ್ಲಿ … Continued

ಡಿಕೆಶಿ, ಬೆಂಬಲಿಗರ ಕಾರಿನ ಮೇಲೆ ರಮೇಶ ಜಾರಕಿಹೊಳಿ ಬೆಂಬಲಿಗರ ಕಲ್ಲು ತೂರಾಟ, ಗನ್‌ಮ್ಯಾನ್‌ ಎಳೆದಾಡಿದರು

ಬೆಳಗಾವಿ: ಬೆಳಗಾವಿ ಸಾಂಬ್ರಾ ಏರ್ಪೋರ್ಟ್ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನಗಳ ಮೇಲೆ ಹಾಗೂ ಎಸ್ಕಾರ್ಟ್‌ ವಾಹನದ ಮೇಲೆ  ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಡಿ.ಕೆ. ಶಿವಕುಮಾರ ಬೆಂಗಲಿಗರ ಕಾರಿನ ಗಾಜುಗಳು ಪುಡಿಯಾಗಿದೆ. ಅಲ್ಲದೆ ಡಿ.ಕೆ.ಶಿವಕುಮಾರ ಅವರ ಗನ್‌ಮ್ಯಾನ್‌ ಅವರನ್ನು  ಎಳೆದಾಡಿದ್ದಾರೆ. ನಂತರ ಗನ್‌ಮ್ಯಾನ್‌ ಬೇರೆ … Continued

ಕರ್ನಾಟಕದಲ್ಲಿ ೧ರಿಂದ ೯ನೇ ತರಗತಿ ವರೆಗೆ ಪರೀಕ್ಷೆಯಿಲ್ಲದೆ ತೇರ್ಗಡೆ, ನಾಳೆ ನಿರ್ಧಾರ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ 1 ರಿಂದ ೯ನೇ ತರಗತಿ ವರೆಗಿನ  ಪರೀಕ್ಷೆ ರದ್ದುಗೊಳಿಸಿ ಹಾಗೆಯೇ ತೇರ್ಗಡೆ ಮಾಡುವ ಚಿಂತನೆ ನಡೆಸಿದೆಯೇ?  ಈ ಬಗ್ಗೆ ಮಾ.೨೯ರಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಖಾತೆ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಡಾ.ಸುಧಾಕರ … Continued