ಪ್ರತಿಭಟನಾ ನಿರತ ರೈತರ ಬೇಡಿಕೆ ಈಡೇರಿಸದಿದ್ರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತ: ಟಿಕಾಯತ್‌ ಎಚ್ಚರಿಕೆ

ನವ ದೆಹಲಿ: ಪ್ರತಿಭಟನಾ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತಗೊಳಿಸುವುದಾಗಿ ಸಂಯುಕ್ತ ರೈತ ಒಕ್ಕೂಟದ ನಾಯಕ ರಾಕೇಶ ಟಿಕಾಯತ್‌ ಎಚ್ಚರಿಸಿದ್ದಾರೆ. ರಾಜಸ್ಥಾನದ ಭಾರತ್ಪುರದಲ್ಲಿ ಮಾಧ್ಯಮ ಸಂವಾದಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಾಧ್ಯಮ ಸಂವಾದವೊಂದರಲ್ಲಿ ಮಾತನಾಡಿದ ಅವರು,ಕಾರ್ಪೋರೇಟ್‌ ಸಂಸ್ಥೆಗಳೇ ದೇಶವನ್ನು ಆಳುತ್ತಿವೆ. ಕೇಂದ್ರದಲ್ಲಿ ಯಾವುದೇ ಸರ್ಕಾರವಿಲ್ಲ. … Continued

2ನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕೊರೊನಾ…!!

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಆರಂಭವಾಗಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ ಅವರೇ ಹೇಳಿದ್ದು, ಸರ್ಕಾರ ಸೋಂಕು ಹರಡುವಿಕೆ ತಡೆಯಲು ಹಲವು ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕದಲ್ಲಿ ಶನಿವಾರ 2,886 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,252. ಬೆಂಗಳೂರು ನಗರದಲ್ಲಿ 1820 ಹೊಸ ಪ್ರಕರಣ ದಾಖಲಾಗಿದೆ. ಆದರೆ ಎರಡನೇ ಅಲೆಯಲ್ಲಿ ಮಕ್ಕಳಲ್ಲಿ ಕೊರೊನಾ … Continued

ಭಾರತದಲ್ಲಿ 63 ಸಾವಿರದ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..!

ನವ ದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ದಿನೇ ದಿನೇ ಹೆಚ್ಚುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,714 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ತಾಸಿನಲ್ಲಿ 312 ಜನರು ಮಹಾಮಾರಿಗೆ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,61,552ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,86,310 … Continued

ತಂದೆ-ಸಹೋದರ ಡಿಕೆಶಿ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸುತ್ತಿರುವ ಸಿಡಿ ಪ್ರಕರಣ ಶನಿವಾರ ಸಾಕಷ್ಟು ತಿರುವು ಕಂಡಿದ್ದು, ಈಗ ಸಿಡಿ ಯುವತಿಯು ೫ನೇ ವಿಡಿಯೋ ಬಿಡುಗಡೆ ಮಾಡಿರುವುದು ಮತ್ತೊಂದು ಟ್ವಿಸ್ಟ್‌ಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ರಮೇಶ್ ಜಾರಕಿಹೊಳಿ ಹಾಗೂ ಸಿಡಿಯಲ್ಲಿ ಇದ್ದಾಳೆ ಎನ್ನಲಾಗುತ್ತಿರುವ ಯುವತಿಯ ಪೋಷಕರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಸಿಡಿ ಯುವತಿಯ ಮತ್ತೊಂದು … Continued

ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರು

ಪಂಜಾಬ್‌ನಲ್ಲಿ ಕೃಷಿ ವಿರೋಧಿ ಕಾನೂನುಹೋರಾಟಗಾರರು ಅಬೊಹಾರ್ ಶಾಸಕ ಅರುಣ್ ನಾರಂಗ್‌ ಅವರ ಮೇಲೆ ಹಲ್ಲೆ ನಡೆಸಿ, ನಂತರ ಬಟ್ಟೆಗಳನ್ನು ಹರಿದು ಹಾಕಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ, ಪೊಲೀಸರು ಶಾಸಕರನ್ನು ಸುರಕ್ಷಿತವಾಗಿ ಕರೆದೊಯ್ಯುವ ಮೊದಲು ನಾರಂಗ್ ಅವರು ಬಹುತೇಕ ಬೆತ್ತಲೆ ಸ್ಥಿತಿಯಲ್ಲಿದ್ದರು. ಪಂಜಾಬ್‌ನ ಮಾಲೌಟ್ ಪಟ್ಟಣದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. … Continued

ಕರ್ನಾಟಕದಲ್ಲಿ 2800 ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..!!

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2886 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 9,83,930ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,492ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1179 … Continued

ಡಿಕೆಶಿ ರಾಜಕಾರಣಕ್ಕೆ ನಾಲಾಯಕ್‌, ಆತನ ವಿರುದ್ಧ ದೂರು ದಾಖಲಿಸ್ತೇನೆ, ಅವನಂಥ ನೀಚ ರಾಜಕಾರಣಿ ನೋಡ್ಲಿಲ್ಲ ಎಂದು ಗುಡುಗಿದ ರಮೇಶ ಜಾರಕಿಹೊಳಿ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು ಹೇಳಿದ್ದಾರೆ. ಆ ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್ ಎಂದು ಅವನು ಗಂಡಸಲ್ಲ ಎಂದು ರಮೇಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಿರಪರಾಧಿ … Continued

ನಮ್ಮ ಅಕ್ಕನನ್ನು ಒತ್ತೆಯಾಳಾಗಿಟ್ಟುಕೊಂಡು ಡಿ.ಕೆ. ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ; ಸಿಡಿ ಯುವತಿ ಸಹೋದರನ ನೇರ ಆರೋಪ

ಬೆಂಗಳೂರು; ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಕುಟುಂಬದವರು, ನನ್ನ ಅಕ್ಕನ ಜೊತೆ ಮೊಬೈಲ್ ನಲ್ಲಿ ಚರ್ಚೆ ಮಾಡಿದ ಆಡಿಯೋ ವೈರಲ್ ಆಗಿದೆ. ನಮ್ಮ ಕುಟುಂಬಕ್ಕೆ ಏನೇ ತೊಂದರೆಯಾದರೂ ಡಿ.ಕೆ. … Continued

ಏರ್‌ ಇಂಡಿಯಾ ಶೇ.100 ಖಾಸಗೀಕರಣ: ನಿರ್ಧಾರ ಪ್ರಕಟಿಸಿದ ಸರ್ಕಾರ

ನವ ದೆಹಲಿ: ಏರ್ ಇಂಡಿಯಾದಲ್ಲಿ ಶೇ.100 ಹೂಡಿಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಪ್ರಕಟಿಸಿದ್ದಾರೆ. ಏರ್ ಇಂಡಿಯಾದಲ್ಲಿ ಶೇ. 100 ಹೂಡಿಕೆ ಮಾಡಲು ಅಂದರೆ ಖಾಸಗೀಕರಣದ ಮಾಡಲು ನಾವು ನಿರ್ಧರಿಸಿದ್ದೇವೆ. ಏರ್​ ಇಂಡಿಯಾ ವಿಮಾನಯಾನ ಸಂಸ್ಥೆಗೆ ಹೂಡಿಕೆ ಮಾಡುವುದು ಮತ್ತು ಮಾಡದಿರುವುದು ಈ ಎರಡೇ ಆಯ್ಕೆಗಳಿರುವುದರಿಂದ ಮುಚ್ಚುವುದರ ಬದಲಿಗೆ ಹೂಡಿಕೆ … Continued

ಎಸ್‌ಐಟಿ ಮುಂದೆ ಸಿಡಿ ಯುವತಿ ತಂದೆ-ತಾಯಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಕ್ಷಣಕ್ಷಣಕ್ಕೂ ತಿರುವು ಪಡೆದುಲಕೊಳ್ಳುತ್ತಿದೆ. ಶನಿವಾರ ಬೆಳಿಗ್ಗೆ ಸಿಡಿಯಲ್ಲಿದ್ದ ಯುವತಿಯ ಹೇಳಿಕೆಯುಳ್ಳ ವಿಡಿಯೋ ಬಿಡಗಡೆಯಾಗಿ ಅದರಲ್ಲಿ ತಮ್ಮ ಕುಟುಂಬಕ್ಕೆ ರಕ್ಷಣೆ ಕೋರಿದ ಬೆನ್ನಲ್ಲೇ ಯುವತಿಯ ಪೋಷಕರು ವಿಶೇಷ ತನಿಖಾ ದಳದ ಮುಂದೆ ಶನಿವಾರ ಹಾಜರಾಗಿದ್ದು, ಪ್ರಕರಣ ಮತ್ತೊಂದು ಟ್ವಿಸ್ಟ್‌ ಪಡೆದಿದೆ. ಅಜ್ಞಾತ ಸ್ಥಳದಲ್ಲಿರುವ ಯುವತಿ ಶನಿವಾರ … Continued