ಭಾರತದಲ್ಲಿ ಒಂದೇ ದಿನಕ್ಕೆ 62 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ದಾಖಲು..ಮಹಾರಾಷ್ಟ್ರದಲ್ಲೇ ಶೇ.60ಕ್ಕಿಂತ ಹೆಚ್ಚು..!!

ನವ ದೆಹಲಿ: ಕಳೆದ 24 ತಾಸಿನಲ್ಲಿ ಭಾರತದಲ್ಲಿ ಒಟ್ಟು 62,258 ಹೊಸ ಕೊರೊನಾ ಸೋಂಕುಗಳು ಪತ್ತೆಯಾಗಿದ್ದು, ಇದು ಕಳೆದ ಅಕ್ಟೋಬರ್‌ 16ರ ಈಚೆಗೆ ಕಂಡುಬಂದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ. ಈ ಪೈಕಿ 36,902 ಪ್ರರಣಗಳು ಅಂದರೆ ಶೇ62ರಷ್ಟು ಪ್ರಕರಣಗಳು ಮಹಾರಾಷ್ಟ್ರದಲ್ಲೇ ದಾಖಲಾಗಿವೆ. ಒಟ್ಟು 291 ಸಾವುಗಳು ವರದಿಯಾಗಿದ್ದು, ದರಲ್ಲಿ ಮಹಾರಾಷ್ಟ್ರದಲ್ಲಿ 117 ಮತ್ತು ಪಂಜಾಬ್‌ನಲ್ಲಿ … Continued

ತಕ್ಷಣವೇ ಜಾರಕಿಹೊಳಿ ಬಂಧಿಸಿ, ಇಲ್ಲದಿದ್ರೆ ಹೈಕೋರ್ಟಿಗೆ ಹೋಗ್ತೀವಿ..

  ಬೆಂಗಳೂರು: ಸಿಡಿ ಯುವತಿ ಹೇಳಿಕೆ ಆಧರಿಸಿ ನಾನು ದೂರು ನೀಡಿದ್ದೇನೆ.  ರಮೇಶ್ ಜಾರಕಿಹೊಳಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬಂಧಿಸಬೇಕು. ಬಂಧಿಸದಿದ್ದರೆ, ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಮೂಲಕ ಜಾರಕಿಹೊಳಿ ಹೆದರಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸಾಕ್ಷ್ಯ ನಾಶ ಮಾಡುವ … Continued

ಸಿಡಿ ಹಗರಣಕ್ಕೆ ಮತ್ತೆ ಟ್ವಿಸ್ಟ್: ಯುವತಿಯಿಂದ ಮತ್ತೊಂದು ವಿಡಿಯೋ ಬಿಡುಗಡೆ..

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ನಮ್ಮ ಆಟ ಶುರು, ಇಂದು (ಶನಿವಾರ) ಸಂಜೆ ೪ರಿಂದ ೬ ಗಂಟೆಯೊಳಗೆ ಹೊಸ ಬಾಂಬ್‌ ಹಾಕುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೇ ಈಗ ಸಿಡಿ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಬೆಳಿಗ್ಗೆ ಬಿಡುಗಡೆಯಾಗಿದೆ. ದಿನಕ್ಕೊಂದು ತಿರುವುದು ಪಡೆದುಕೊಳ್ಳುತ್ತಿರುವ ಈ ಸಿಡಿ ಪ್ರಕರಣ ಈಗ ನಾಲ್ಕನೇ … Continued

ಅಂಬಾನಿ ಮನೆ ಬಳಿ ಬಾಂಬ್ ಬೆದರಿಕೆ ಪ್ರಕರಣ: ವಾಝೆ ಬೆದರಿಕೆ ಪತ್ರ ಇಡಲು ಎಸ್ಯುವಿ ಬಳಿ ಬಂದಿದ್ದು ಸಿಸಿಟಿವಿಯಲ್ಲಿ ಸೆರೆ ?

ಮುಂಬೈ: ಫೆಬ್ರವರಿ 25 ರಂದು ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಯವರ ನಿವಾಸವಾದ ಆಂಟಿಲಿಯಾ ಬಳಿ ಜೆಲೆಟಿನ್ ಸ್ಟಿಕ್ಸ್ ತುಂಬಿದ ಎಸ್‌ಯುವಿ ಪತ್ತೆಯಾದ ಕೆಲವು ದಿನಗಳ ನಂತರ, ಈ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳು ಈ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿ ಸಚಿನ್‌ ವಾಝೆ ಪಾಲ್ಗೊಂಡಿರುವುದನ್ನು ಮತ್ತಷ್ಟು ದೃಢಪಡಿಸಿದೆ ಎಂದು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ. ಈ ಕುರಿತು ವರದಿ ಮಾಡಿರುವ ಫ್ರೀ ಪ್ರೆಸ್‌ … Continued

ಮಹಾರಾಷ್ಟ್ರದಲ್ಲಿ ಶುಕ್ರವಾರ 36,902 ಕೊರೊನಾ ಪ್ರಕರಣಗಳು, ಈವರೆಗಿನ ಗರಿಷ್ಠ

ಮುಂಬೈ : ಮಹಾರಾಷ್ಟ್ರದಲ್ಲಿ ಶುಕ್ರವಾರ 36,902 ಕೊರೊನಾ ಪ್ರಕರಣಗಳು ದಾಖಲಾಗಿದೆ. 112 ಹೊಸ ಸಾವುಗಳು ಸಂಭವಿಸಿವೆ. ರಾಜ್ಯದಲ್ಲಿ ಸೋಂಕು ತಗುಲಿದವರ ಸಂಖ್ಯೆ 26,37,735ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 53,907ಕ್ಕೆ ಏರಿಕೆಯಾಗಿದೆ. 17,019 ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 2,82,451 ಆಗಿದೆ. ಮಹಾರಾಷ್ಟ್ರದ ಕೋವಿಡ್-19 ಪ್ರಕರಣಗಳ ಚೇತರಿಕೆ ಪ್ರಮಾಣ ವು ಶೇ.87.2 ರಷ್ಟಿದ್ದರೆ, … Continued

ಬಾಂಗ್ಲಾದೇಶದ ವಿಮೋಚನೆಗಾಗಿ ಪ್ರತಿಭಟಿಸಿದಾಗ ನಾನೂ ಜೈಲಿಗೆ ಹೋಗಿದ್ದೆ: ಪ್ರಧಾನಿ ಮೋದಿ

ಢಾಕಾ: ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ 50 ನೇ ವರ್ಷದ ಸ್ವಾತಂತ್ರ್ಯಕ್ಕಾಗಿ ನೆರೆಯ ದೇಶವಾದ ಬಾಂಗ್ಲಾದೇಶವನ್ನು ಶುಕ್ರವಾರ ಅಭಿನಂದಿಸಿದ್ದಾರೆ ಮತ್ತು ಬಾಂಗ್ಲಾದೇಶದ ವಿಮೋಚನೆಗಾಗಿ ಪ್ರತಿಭಟಿಸುವಾಗ ತಾವೂ ಕೂಡ ಜೈಲಿಗೆ ಹೋಗಿದ್ದೆ ಎಂದು ಹೇಳಿದ್ದಾರೆ. ನಾನು ಕೆಲವು ಸ್ನೇಹಿತರ ಜೊತೆ ಬಾಂಗ್ಲಾದೇಶದ ಹೋರಾಟದ ಸಮಯದಲ್ಲಿ ಪ್ರತಿಭಟನೆ ನಡೆಸಿದಾಗ ನನಗೆ ಸುಮಾರು 20-22 ವರ್ಷ … Continued

ಸಿಡಿ ಪ್ರಕರಣ:ನಾಳೆ ಸಂಜೆ 4ರಿಂದ6 ಗಂಟೆಯೊಳಗೆ ಹೊಸ ಬಾಂಬ್‌ ಸ್ಫೋಟ ಮಾಡ್ತೇನೆ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ಸಿಡಿ ಸಂತ್ರಸ್ತ ಯುವತಿ ವಕೀಲರ ಮೂಲಕ ಶುಕ್ರವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ, ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ ಅವರು, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಸ್ಫೋಟವಾಗಲಿದೆ. ನಾಳೆಯವರೆಗೆ ಕಾಯಿರಿ, ಇದು ಬರೀ ಟ್ರಯಲ್. ನಾಳೆ ಸಂಜೆ 4ರಿಂದ 6 ಗಂಟೆಯೊಳಗೆ ಬಾಂಬ್ ಸ್ಫೋಟವಾಗುತ್ತದೆ. ದೊಡ್ಡ … Continued

ಯುವತಿಯದ್ದು ಎನ್ನಲಾದ ಆಡಿಯೋ ವೈರಲ್‌.. ಡಿಕೆಶಿ ಹೆಸರು ಪ್ರಸ್ತಾಪ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಶುಕ್ರವಾರ ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋದಲ್ಲಿ ಯುವತಿಯು ಸಹೋದರ ಮತ್ತು ತಾಯಿ ಜೊತೆ ದೂರವಾಣಿಯಲ್ಲಿ … Continued

ಚಿನ್ನದ ಕಳ್ಳಸಾಗಣೆ, ಇತರ ಪ್ರಕರಣಗಳ ತನಿಖೆ: ಕೇಂದ್ರ ತನಿಖಾ ಸಂಸ್ಥೆಗಳ ಬಗ್ಗೆ ತನಿಖೆ ನಡೆಸಲು ಕೇರಳ ಸರ್ಕಾರ ನಿರ್ಧಾರ…!

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ರಾಜಕೀಯ ಮಹತ್ವ‌ ಪಡೆಯುವ ಅಭೂತಪೂರ್ವ ಕ್ರಮದಲ್ಲಿ ಕೇರಳ ಸಚಿವ ಸಂಪುಟವು ಚಿನ್ನದ ಕಳ್ಳಸಾಗಣೆ ಮತ್ತು ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ವಿಚಾರಣೆ ನಡೆಸಲು ಶುಕ್ರವಾರ ನಿರ್ಧರಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ. ವಿ. ಮೋಹನನ್ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲು ಸಭೆ ನಿರ್ಧರಿಸಿತು. … Continued

ಕರ್ನಾಟಕದಲ್ಲಿ ಶುಕ್ರವಾರವೂ ಎರಡೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ 2,566 ಕೋರೊನಾ ಸೋಂಕು ವರದಿಯಾಗಿವೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು … Continued