ಕೇಂದ್ರದ ಮಹತ್ವದ ನಿರ್ಧಾರ: ಏಪ್ರಿಲ್‌ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ

ನವ ದೆಹಲಿ: ಏಪ್ರಿಲ್ 1 ರಿಂದ COVID-19 ಲಸಿಕೆಯನ್ನು 45 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ತೆಗೆದುಕೊಳ್ಳಬಹುದು ಎಂದು ಕೇಂದ್ರ ಮಂಗಳವಾರ (ಮಾ.೨೩) ಪ್ರಕಟಿಸಿದೆ. ಪತ್ರಿಕಾಗೋಷ್ಠಿಯಲ್ಲಿಈ ವಿಷಯ ತಿಳಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 45 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ಕೂಡಲೇ ನೋಂದಾಯಿಸಿ ಲಸಿಕೆ ಪಡೆಯಬೇಕು ಎಂದು ತಿಳಿಸಿದರು. ದೇಶದಲ್ಲಿ ಕೊವಿಡ್‌ ಲಸಿಕೆ ಪ್ರಮಾಣಕ್ಕೆ ಕೊರತೆಯಿಲ್ಲ ಎಂದು ಭರವಸೆ ನೀಡಿದರು. … Continued

ಉದ್ಧವ್‌ ರಾಜೀನಾಮೆ ಕೇಳಿದ್ದಕ್ಕೆ ಸಂಸತ್ತಿನ ಮೊಗಸಾಲೆಯಲ್ಲಿ ನನಗೆ ಶಿವಸೇನೆ ಸಂಸದ ಸಾವಂತ್‌ ಬೆದರಿಕೆ :ಸಂಸದೆಯಿಂದ ಸ್ಪೀಕರ್​ಗೆ ದೂರು

ನವ ದೆಹಲಿ: ಅಮರಾವತಿಯ ಸ್ವತಂತ್ರ ಸಂಸದೆ ನವನೀತ್​ ಕೌರ್​ ರಾಣಾ ಅವರು ಶಿವಸೇನೆಯ ಸಂಸದನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾನು ಕೆಳಮನೆಯಲ್ಲಿ ಮಹಾರಾಷ್ಟ್ರ ಸರ್ಕಾರ ವಿರುದ್ಧ ಮಾತನಾಡಿದ್ದಕ್ಕಾಗಿ ಶಿವಸೇನೆಯ ಸಂಸದ ಅರವಿಂದ್ ಸಾವಂತ್ ನನಗೆ ಲೋಕಸಭೆಯ ಮೊಗಸಾಲೆಯಲ್ಲಿ ಬೆದರಿಕೆ ಹಾಕಿದ್ದಾರೆ. ಅದಾದ ಬಳಿಕ ಶಿವಸೇನೆ ಪಕ್ಷದ ಲೆಟರ್​ಹೆಡ್​ ಇರುವ ಪತ್ರದ ಮೂಲಕ ಮತ್ತು ಫೋನ್​ … Continued

ಮದ್ಯ ಸೇವಿಸಿ ಮೃತಪಟ್ಟರೆ ವಿಮಾ ಪರಿಹಾರ ಸಿಗುವುದಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವ ದೆಹಲಿ: ವಿಪರೀತ ಮದ್ಯಪಾನದಿಂದಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ವಿಮಾ ಪರಿಹಾರ ಪಡೆಯಲು ಅರ್ಹತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎಂ. ಶಾಂತನಗೌಡರ್ ಮತ್ತು ವಿನೀತ್ ಸರನ್ ಅವರಿದ್ದ ನ್ಯಾಯಪೀಠವು ರಾಜ್ಯ ಗ್ರಾಹಕ ವೇದಿಕೆ ಮತ್ತು ರಾಷ್ಟ್ರೀಯ ಗ್ರಾಹಕ ವೇದಿಕೆಯ ಏಕಕಾಲದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಿಮಾಚಲ ಪ್ರದೇಶದ ಕುಟುಂಬವೊಂದರ … Continued

ಸುಪ್ರೀಂ  ಕೋರ್ಟ್‌ ಮಹತ್ವದ ತೀರ್ಪು: ಲೋನ್ ಮೊರಾಟೋರಿಯಂ ಅವಧಿ ವಿಸ್ತರಿಸಲು ‌ನಕಾರ

ನವ ದೆಹಲಿ: ಕೊವಿಡ್‌-೧೯ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಸಾಲ ನಿಷೇಧ ಮತ್ತು ಇತರ ಪರಿಹಾರಗಳನ್ನು ವಿಸ್ತರಿಸುವಂತೆ ಕೋರಿ ರಿಯಲ್ ಎಸ್ಟೇಟ್ ಮತ್ತು ವಿದ್ಯುತ್ ಕ್ಷೇತ್ರಗಳು ಸೇರಿದಂತೆ ವಿವಿಧ ವ್ಯಾಪಾರ ಸಂಘಗಳು ಸಲ್ಲಿಸಿದ ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಲೋನ್ ಮೊರಾಟೋರಿಯಂ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಸರ್ಕಾರದ ಸಾಲ ಮನ್ನಾ … Continued

ಭಾರತದಲ್ಲಿ 40,715 ದೈನಂದಿನ ಕೊರೊನಾ ಪ್ರಕರಣ

ನವ ದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 40,715 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಕಳೆದ ಎರಡು ದಿನಗಳಲ್ಲಿ ದಾಖಲಾದ ದೈನಂದಿನ ಸೋಂಕುಗಳಿಗಿಂತ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 199 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮಂಗಳವಾರ ತಿಳಿಸಿದ್ದಾರೆ. ಸೋಂಕಿನ ಸಂಖ್ಯೆ 11.68 ದಶಲಕ್ಷಕ್ಕೆ ಏರಿಕೆಯಾಗಿದ್ದು, … Continued

ಸಿಎಂ ಬಿಎಸ್‌ವೈ ಭೇಟಿ ಮಾಡಿದ ಹಲವು ಶಾಸಕರು: ಯತ್ನಾಳ ಮೇಲೆ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ ಸುಮಾರು ೩೦ ಶಾಸಕರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಈ ಶಾಸಕರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇಂತಹ … Continued

ಬಂಗಬಂಧು ಶೇಕ್ ಮುಜೀಬುರ್‌ ಗಾಂಧಿ ಪ್ರಶಸ್ತಿಗೆ ಆಯ್ಕೆ

ನವ ದೆಹಲಿ: ಬಂಗಬಂಧು ಬಾಂಗ್ಲಾದೇಶದ ಶೇಕ್ ಮುಜೀಬುರ್‌ 2020ರ ಸಾಲಿನ ಗಾಂಧಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ. ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ದೂರದೃಷ್ಟಿ ಹಾಗೂ ಗಲ್ಫ್ ಪ್ರದೇಶದಲ್ಲಿ ಶಾಂತಿ ಹಾಗೂ ಅಹಿಂಸೆ ಉತ್ತೇಜಿಸುವ ಪ್ರಯತ್ನವನ್ನು ಗುರುತಿಸಿ 2019ರ ಪ್ರತಿಷ್ಠಿತ ಗಾಂಧಿ ಪ್ರಶಸ್ತಿಯನ್ನು ಓಮನ್ ನ ದಿವಂಗತ ಸುಲ್ತಾನ್ ಖಬೂಸ್ ಬಿನ್ ಸಯೀದ್ … Continued

ಕರ್ನಾಟಕದಲ್ಲಿ ನಿರಂತರ ಏರಿಕೆಗೆ ಬ್ರೇಕ್‌…ಸ್ವಲ್ಪ ಕುಸಿತಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ದಿನದಿಂದ ದಿನಕ್ಕೆ ಏರುತ್ತಿದ್ದ ಕೊರೊನಾ ದೈನಂದಿನ ಸೋಂಕು ಸೋಮವಾರ ಸ್ವಲ್ಪ ಕಡಿಮೆಯಾಗಿದೆ. ಆದರೆ ಸಾವಿ ಸಂಖ್ಯೆ ಕೆಲ ತಿಂಗಳ ನಂತರ ಮತ್ತೆ ಎರಡಂಕಿ ತಲುಪಿದೆ. ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ 1445 ಜನರಿಗೆ ಸೊಂಕು ದೃಢ ಪಟ್ಟಿದೆ. 10 ಸೋಂಕಿತರು ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿನಾಲ್ವರು ಮೃತಪಟ್ಟಿದ್ದಾರೆ ದಕ್ಷಿಣ ಕನ್ನಡ ,ಧಾರವಾಡ, ಕಲಬುರಗಿ ಮೈಸೂರು, … Continued

ಕೇಂದ್ರದಿಂದ ಮಹತ್ವದ ಸೂಚನೆ: ಕೊವಿಶೀಲ್ಡ್‌ 2ನೇ ಡೋಸ್‌ ಅವಧಿ 6-8 ವಾರಗಳಿಗೆ ವಿಸ್ತರಿಸಿ ಎಂದು ರಾಜ್ಯಗಳಿಗೆ ಪತ್ರ

  ನವ ದೆಹಲಿ: ಕೊವಿಶೀಲ್ಡ್‌ ಲಸಿಕೆಯ ಮೊದಲ ಡೋಸ್‌ ಪಡೆದ ಬಳಿಕ ಎರಡನೇ ಡೋಸ್‌ ಪಡೆಯಲು ಇರುವ ಅವಧಿಯನ್ನು ಈಗಿನ 28 ದಿನಗಳ ಬದಲಾಗಿ 6-8 ವಾರಗಳಿಗೆ ಹೆಚ್ಚಿಸಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. D.O Letter to CSs & copy to Health Secys of State … Continued

ಕೊರೊನಾ ಹೆಚ್ಚಳ: ಕರ್ನಾಟಕದಲ್ಲಿ ಲಾಕ್‌ಡೌನ್‌ ಸದ್ಯಕ್ಕಿಲ್ಲ , ಆದರೆ ಕಠಿಣ ನಿಯಮ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸೋಮವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್​ಡೌನ್​, ಸೆಮಿಲಾಕ್​ಡೌನ್​, … Continued