ತನಗೆ ಚಿಕಿತ್ಸೆ ನೀಡಿದ ವೈದ್ಯನ 12 ವರ್ಷಗಳ ನಂತರ ಗುರುತಿಸಿ ಕೃತಜ್ಞತೆ ಸಲ್ಲಿಸಿದ ಕಾಡಾನೆ…!

ತನಗೆ ಆರೈಕೆ ಮಾಡಿದ್ದ ವೈದ್ಯರೊಬ್ಬರನ್ನು 12 ವರ್ಷಗಳ ಬಳಿಕ ಗುರುತು ಹಿಡಿದ ಥಾಯ್ಲೆಂಡ್‌ನ ಕಾಡಾನೆಯೊಂದರ ಕ್ಯಾಮೆರಾದಲ್ಲಿ ಸೆರೆ ಹಿಡಿದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರ ಪ್ರಶಂಸೆಗೆ ಪಾತ್ರವಾಗುತ್ತಿದೆ. ಥಾಯ್ಲೆಂಡಿನ ಪಶುವೈದ್ಯ ಡಾ. ಪಟ್ಟರಪಾಲ್ ಮನೀಯನ್‌ ಅವರನ್ನು ೧೨ ವರ್ಷಗಳ ಬಳಿಕ 31 ವರ್ಷದ ಈ ಆನೆ ಗುರುತು ಹಿಡಿದಿದೆ. ತನ್ನ ಸೊಂಡಿಲಿನಿಂದ … Continued

ವರ್ಷದೊಳಗೆ ಎಲ್ಲ ಹೆದ್ದಾರಿ ಟೋಲ್‌ಗೇಟುಗಳಿಗೆ ಮುಕ್ತಿ…!

ನವ ದೆಹಲಿ: ಭಾರತದಲ್ಲಿ ಟೋಲ್ ಗೇಟುಗಳ ವ್ಯವಸ್ಥೆ ಸ್ಥಗಿತಗೊಳ್ಳಲಿವೆ ಮತ್ತು ಒಂದು ವರ್ಷದೊಳಗೆ ಸಂಪೂರ್ಣ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹವನ್ನು ಜಾರಿಗೆ ತರಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಲೋಕಸಭೆಗೆ ತಿಳಿಸಿದ್ದಾರೆ. 93% ವಾಹನಗಳು ಫಾಸ್ಟ್ಯಾಗ್ ಬಳಸಿ ಟೋಲ್ ಪಾವತಿಸುತ್ತವೆ, ಆದರೆ ಉಳಿದ ಶೇಕಡಾ 7 ರಷ್ಟು ಜನರು … Continued

ಭಾರತದಲ್ಲಿ ಒಂದೇ ದಿನದಲ್ಲಿ 36 ಸಾವಿರದ ಸಮೀಪ ಬಂದ ಕೊರೊನಾ ಪ್ರಕರಣ..ಮತ್ತೆ ಬಾರಿಸಿದೆ ಎಚ್ಚರಿಕೆ ಗಂಟೆ..!!

ನವ ದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಕಳೆದ 24 ತಾಸಿನಲ್ಲಿ ಭಾರತದಲ್ಲಿ 35,871 ದೈನಂದಿನ ಕೊರೊನಾ ಪ್ರಕರಣಗಳು ದಾಖಲಾಗಿವೆ..!! ಇದು ಈ ವರ್ಷದ ಅತಿ ಗರಿಷ್ಠ ದೈನಂದಿನ ಪ್ರಕರಣವಾಗಿದೆ. ಪ್ರ ಒಂದೇ 172 ಜನರು ಇದರಿಂದ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ. ಬುಧವಾರ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ … Continued

ಎರಡನೇ ಅಲೆಯೋ.. ಏರಿಳಿತವೋ..?: ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣದಿಂದ ಹೆಚ್ಚಿದ ಆತಂಕ

ಮುಂಬೈ: ಕಳೆದ ಕೆಲವು ದಿನಗಳಲ್ಲಿ ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಕೊವಿಡ್‌-19 ಪ್ರಕರಣಗಳ ಉಲ್ಬಣವು “ಮೊದಲ ಅಲೆಯ ಏರಿಳಿತ” ಅಲ್ಲ, ಆದರೆ “ಭಯಾನಕ ಎರಡನೇ ತರಂಗ” ಎಂದು ಆರೋಗ್ಯದ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ನ್ಯೂಸ್ ಚಾನೆಲ್ ಎನ್‌ಡಿಟಿವಿಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕೆಇಎಂ ಆಸ್ಪತ್ರೆಯ ಡೀನ್ ಹೇಮಂತ್ ದೇಶಮುಖ್, ಪ್ರಕರಣದ ಸಂಖ್ಯೆಗಳು … Continued

ಕೊವಿಡ್‌ ಲಸಿಕೆ ವ್ಯರ್ಥ ಮಾಡಿದ ರಾಜ್ಯಗಳಿಗೆ ಪ್ರಧಾನಿ ಮೋದಿ ತರಾಟೆ

ನವದೆಹಲಿ: ಕೊರೋನಾ ಲಸಿಕೆ ವ್ಯರ್ಥಮಾಡುತ್ತಿರುವ ರಾಜ್ಯಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ಕೆಲವು ರಾಜ್ಯಗಳಲ್ಲಿ ಕೋವಿಡ್ -19 ಲಸಿಕೆ ಮಿತಿಮೀರಿ ವ್ಯರ್ಥವಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಕೊರೋನಾ ಪಾಸಿಟಿವ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿದ … Continued

ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ: 23 ಸಾವಿರ ದಾಟಿದ ದೈನಂದಿನ ಪ್ರಕರಣಗಳ ಸಂಖ್ಯೆ…!!

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಕಳೆದ 24 ತಾಸಿನಲ್ಲಿ 23,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ..! ಬುಧವಾರ 23,179 ಪ್ರಕರಗಳು ದಾಖಲಾಗಿವೆ ಹಾಗೂ ಒಟ್ಟು 84 ಜನರು ಮೃಪಟ್ಟಿದ್ದಾರೆ. ಇದು ಈ ವರ್ಷದ ಅತಿ ಹೆಚ್ಚು ಸಂಖ್ಯೆಯ ದೈನಂದಿನ ಪ್ರಕರಣಗಳಾಗಿವೆ. ಮಂಗಳವಾರ, ರಾಜ್ಯವು 17,864 ಪ್ರಕರಣಗಳು ದಾಖಲಾಗಿದ್ದವು. , ರಾಜ್ಯದ ಒಟ್ಟು ಕೋವಿಡ್ -19 ಪ್ರಕರಣಗಳು ಈಗ … Continued

ಸಾಮಾಜಿಕ ಜಾಲತಾಣ “ಕೂʼನಲ್ಲಿನ ಚೀನಾದ ಪಾಲು ಖರೀದಿಗೆ ಮುಂದಾದ ಕ್ರಿಕೆಟಿಗ ಜಾವಗಲ್‌ ಶ್ರೀನಾಥ

ಬೆಂಗಳೂರು: ಸಾಮಾಜಿಕ ಜಾಲತಾಣ “ಕೂʼ ನ ಮೂಲಸಂಸ್ಥೆ ಬಾಂಬಿನೆಟ್‌ ಟೆಕ್ನಾಲಜೀಸ್‌ನಲ್ಲಿ ಚೀನಾದ ಹೂಡಿಕೆದಾರ ಶುನ್‌ವೇ ಕ್ಯಾಪಿಟಲ್‌ ಪಾಲನ್ನು ಭಾರತದ ಟೆಕ್‌ ಸಿಇಒಗಳು ಹಾಗೂ ಹಿರಿಯ ಕ್ರಿಕೆಟಿಗ ಜಾವಗಲ್‌ ಶ್ರೀನಾಥ ಖರೀದಿಸಲು ಉತ್ಸುಕರಾಗಿದ್ದಾರೆ. ಕಳೆದ ತಿಂಗಳು ಭಾರತ ಸರ್ಕಾರ ಮತ್ತು ಟ್ವಿಟರ್ ನಡುವಿನ ಭಿನ್ನಾಭಿಪ್ರಾಯದ ಮಧ್ಯೆ ಬೆಳಕಿಗೆ ಬಂದ ನಂತರ ಕೂದಲ್ಲಿನ ಚೀನಾದ ಹೂಡಿಕೆ ವಿರುದ್ಧ ಧ್ವನಿ … Continued

ರಾತ್ರಿ ೧೦ರಿಂದ ಬೆಳಗ್ಗೆ ೬ಗಂಟೆ ವರೆಗೆ ದರ್ಗಾ, ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿದ ವಕ್ಫ್‌ ಮಂಡಳಿ

ಬೆಂಗಳೂರು: ರಾಜ್ಯದ ಎಲ್ಲ ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ ೧೦ ಗಂಟೆಯಿಂದ ಬೆಳಗಿನ ೬ ಗಂಟೆ ವರೆಗೆ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿ ಕರ್ನಾಟಕ ವಕ್ಫ್‌ ಮಂಡಳಿ ಸುತ್ತೋಲೆ ಹೊರಡಿಸಿದೆ. ದ್ವನಿವರ್ಧಕಗಳನ್ನು “ಅಜಾನ್‌ʼ ಹಾಗೂ ಪ್ರಮುಖ ಪ್ರಕಟನೆಗಳಿಗಾಗಿ ಮಾತ್ರ ಬಳಕೆ ಮಾಡಬೇಕು ಎಂದು ತಿಳಿಸಿದೆ. ಧ್ವನಿವರ್ಧಕಗಳಿಂದಾಗುವ ಶಬ್ದದ ಮಟ್ಟ ಮಾನವನ ಆರೋಗ್ಯ ಹಾಗೂ ಜನರ ಸ್ವಾಸ್ಥ್ಯದ … Continued

ಕೊರೊನಾ ಎರಡನೇ ಅಲೆ ಕಾಲಘಟ್ಟದಲ್ಲಿ ನಾವು,ತಡೆಯದಿದ್ದರೆ ಮಹಾಸ್ಫೋಟವಾಗಲಿದೆ: ಪ್ರಧಾನಿ ಎಚ್ಚರಿಕೆ

ನವ ದೆಹಲಿ: ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಕೊರೊನಾ ಎರಡನೇ ಅಲೆಗಳ ಬಗ್ಗೆ (ಕೋವಿಡ್-19 ರ) ಸೂಚನೆ ನೀಡಿದ್ದು, ಭಾರತದಲ್ಲಿ ಮಹಾರಾಷ್ಟ್ರ, ಪಂಜಾಬ್ ನಂತಹ ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಏರಿಕೆ ಕಾಣುತ್ತಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ … Continued

ಮತ್ತೆ ವಿಶ್ವದ ನಂ.1 ಶ್ರೀಮಂತನ ಪಟ್ಟ ಅಲಂಕರಿಸಿದ ಎಲೋನ್​ ಮಸ್ಕ್‌

ಸ್ಯಾನ್ ​​ ಫ್ರಾನ್ಸಿಸ್ಕೋ : ರಾತ್ರೋ ರಾತ್ರಿ ತಮ್ಮ ಕಂಪನಿ ಶೇರುಗಳ ಮೌಲು ಹೆಚ್ಚಾದ ಕಾರಣ ಮತ್ತೆ ಎಲೋನ್​ ಮಸ್ಕ್‌ ವಿಶ್ವದ ನಂ.1 ಶ್ರೀಮಂತನಾಗಿದ್ದಾನೆ. 2020ರ ಕ್ಯಾಲೆಂಡರ್ ವರ್ಷದಲ್ಲಿ ವೇಗವಾಗಿ ಸಂಪತ್ತು ವೃದ್ಧಿಸಿಕೊಳ್ಳುವ ಮೂಲಕ ಬಹು ದಿನಗಳಿಂದ ಜಗತ್ತಿನ ನಂಬರ್ 1 ಸಿರಿವಂತ ಸ್ಥಾನದಲ್ಲಿದ್ದ ಅಮೆಜಾನ್ ಸಂಸ್ಥಾಪಕ ಜೆಫ್​ ಬೆಜೋಸ್ ಅವರನ್ನುಕೆಲವು ವಾರಗಳ ಹಿಂದೆ ಎಲೋನ್​ … Continued