ಪಂಚಮಸಾಲಿ ೨ಎಗೆ ಸೇರ್ಪಡೆ: ಮಾ.೨೨ರಂದು ಸಾಕ್ಷ್ಯಾಧಾರ ಸಲ್ಲಿಸಲು ಕೂಡಲಸಂಗಮ ಶ್ರೀ -ವಚನಾನಂದ ಶ್ರೀಗಳಿಗೆ ಆಯೋಗದಿಂದ ಪತ್ರ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ೨ಎಗೆ ಸೇರ್ಪಡೆ ಮಾಡುವ ಕುರಿತು ಶ್ರೀ ಜಯ ಬಸವ ಮೃತ್ಯುಂಜಯ ಸ್ವಾಮಿಗಳು ಹಾಗೂ   ವಚನಾನಂದ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ. ಮಾಚ್೯ ೨೨ ರಂದು ( ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಶ್ರೀಗಳು ಹಾಗೂ … Continued

ಮಹಾರಾಷ್ಟ್ರ: 16 ಸಾವಿರದ ಸಮೀಪಕ್ಕೆ ಬಂದ ಪ್ರತಿದಿನದ ಕೊರೊನಾ ಪ್ರಕರಣ…!

ಮುಂಬೈ: ಮಹಾರಾಷ್ಟ್ರದಲ್ಲಿ ಶುಕ್ರವಾರ (ಮಾರ್ಚ್ 12) 15,817 ಹೊಸ ಕೊವಿಡ್‌-19 ಪ್ರಕರಣಗಳು ವರದಿಯಾಗಿವೆ. ಈ ವರ್ಷ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದಲ್ಲಿ 15 ಸಾವಿರ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ಈ ವರ್ಷದ ಹಿಂದಿನ ಏಕದಿನದ ಗರಿಷ್ಠ ಏರಿಕೆ ಮಾರ್ಚ್ 11 ರ ಗುರುವಾರ 14,317 ಆಗಿತ್ತು. ದಿನದಲ್ಲಿ 56 ಕೊವಿಡ್‌-19 ಸಾವುಗಳು ದಾಖಲಾಗಿದ್ದು, … Continued

ಬಳ್ಳಾರಿಗೂ ಬಂತು ಆಫ್ರಿಕಾ ರೂಪಾಂತರಿ ಕೊರೊನಾ..!

ಬಳ್ಳಾರಿ : ದುಬೈನಿಂದ ಬಳ್ಳಾರಿಗೆ ಬಂದ ಇಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಒಬ್ಬರಿಗೆ  ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವಿಷಯವನ್ನು ಜಿಲ್ಲಾಧಿಕಾರಿ ಪವನಕುಮಾರ ಜೈನ್‌ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ ಪವನ್‌ಕುಮಾರ್ ಜೈನ್, ದುಬೈನಿಂದ ಈ ಇಬ್ಬರು ವ್ಯಕ್ತಿಗಳು ಬೆಂಗಳೂರಿಗೆ ಬಂದ ವೇಳೆ ಅವರಲ್ಲಿ ಸೋಂಕು ಪತ್ತೆಯಾಗಿರಲಿಲ್ಲ. ಕೆಲ … Continued

ರಮೇಶ ಜಾರಕಿಹೊಳಿಗೆ ನಾನು ಧೈರ್ಯ ಹೇಳಿದ್ದು ನಿಜ:ರೇವಣ್ಣ

ಹಾಸನ: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ ಬಿಡೋಣ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನಮಗೆ ಮೊದಲು ಮನುಷ್ಯತ್ವ ಬೇಕು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಷ್ಟಪಟ್ಟು ಮೇಲೆ ಬಂದವರು. ಅವರಿಗೆ ನಾನು ಧೈರ್ಯ … Continued

ಸಿಡಿ ಹಗರಣದ ತನಿಖೆ ಶುರು: ಮೊದಲ ದಿನವೇ ಐವರ ವಿಚಾರಣೆ..!

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಕುರಿತಂತೆ ತನಿಖೆ ಶುಕ್ರವಾರದಿಂದ (ಮಾ.೧೨ರಿಂದ) ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ ಎಸ್‌ಐಟಿ ಮೊದಲ ದಿನವೇ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸೌಮೇಂದ್ರ ಮುಖರ್ಜಿಯವರ ನೇತೃತ್ವದ ತಂಡ, ಮೊದಲ ದಿನವೇ ತನಿಖೆ ಚುರುಕುಗೊಳಿಸಿದ್ದು, ಐವರನ್ನು ವಶಕ್ಕೆ ಪಡೆದು, ಪ್ರತ್ಯೇಕ ಸ್ಥಳಗಳಲ್ಲಿ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ. ರಾಜ್ಯ … Continued

ಬೆಳಗಾವಿಯಲ್ಲಿ ಮರಾಠಿ ನಾಮಫಲಕಕ್ಕೆ ಮಸಿ ಬಳಿದ ಕರವೇ

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ನಾಮಫಲಕಗಳಿಗೆ ಕಪ್ಪು ಮಸಿ ಹಚ್ಚಿರುವುದಕ್ಕೆ ಪ್ರತಿಯಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿ ಶಿವಸೇನೆ ವಾಹನದ ಮೇಲಿನ ಶಿವಸೇನೆ ಫಲಕ್ಕಕ್ಕೆ ಕಪ್ಪು ಮಸಿ ಬಳಿದು ಫಲಕವ ಧ್ವಂಸ ಮಾಡಿದ ಘಟನೆ ಶುಕ್ರವಾರ ನಡೆದಿದೆ. ರಾಮಲಿಂಗ ಖಿಂಡ ಗಲ್ಲಿಯ ಎಂಇಎಸ್ ಕಚೇರಿಗೆ ನುಗ್ಗಲು ಕರವೇ ಕಾರ್ಯಕರ್ತರು ಯತ್ನಿಸಿದಾಗ ಪೋಲೀಸರು … Continued

ಖಾಸಗೀಕರಣ-ವಿಲೀನಕ್ಕೆ ವಿರೋಧ: ಮಾರ್ಚ್ 15ರಿಂದ ಎರಡು ದಿನಗಳ ಬ್ಯಾಂಕ್‌ ಮುಷ್ಕರ,

ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳ ಖಾಸಗೀಕರಣಗೊಳಿಸುವ ತೀರ್ಮಾನ ವಿರೋಧಿಸಿ ಮಾರ್ಚ್ 15 ಹಾಗೂ 16ರಂದು ಹಲವಾರು ಬ್ಯಾಂಕ್ ಒಕ್ಕೂಟಗಳು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದು ಬ್ಯಾಂಕ್‌ ವ್ಯವಹಾರಗಳು ವ್ಯತ್ಯಯಗೊಳ್ಳುವ ಸಾದ್ಯತೆಯಿದೆ. ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಈ ಮುಷ್ಕರಕ್ಕೆ ಕರೆ ನೀಡಿದೆ. ಇತ್ತೀಚಿಗೆ ನಡೆದ ಸರ್ಕಾರ ಹಾಗೂ … Continued

ಶಿವರಾತ್ರಿಯಂದು ಶ್ರೀಶೈಲ ಜಗದ್ಗುರುಗಳಿಂದ ಲಿಂಗ ದೀಕ್ಷೆ ಪಡೆದ ಮೊಹಮ್ಮದ್ ಮಸ್ತಾನ್

ಶ್ರೀಶೈಲ: ಶಿವ ಸಂಸ್ಕೃತಿಗೆ ಮಾರು ಹೋಗಿ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರಿಂದ ಮೊಹಮ್ಮದ್‌ ಮಸ್ತಾನ್ ಎಂಬ ಇಸ್ಲಾಂ ಯುವಕ ಲಿಂಗ ದೀಕ್ಷೆ ಪಡೆದು ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಮಾಡಿದ್ದಾನೆ. ಮೂಲತಃ ವಿಜಯವಾಡ ನಿವಾಸಿಯಾದ ಮೊಹಮ್ಮದ, ಮುಂಬೈ ಮಹಾನಗರದಲ್ಲಿ ಹರ್ಬಲ್ ಉದ್ಯಮ ಮಾಡುತ್ತಿರುವ ಇಸ್ಲಾಂ ಧರ್ಮೀಯ. ಇವರಿಗೆ ಮೊದಲಿನಿಂದಲೂ ಶಿವ ಸಂಸ್ಕೃತಿಯ … Continued

ಶಾಸಕಿಯರಿಂದ ತಾವು ಕುಳಿತಿದ್ದ ಟ್ರ್ಯಾಕ್ಟರ್ ಎಳೆಸಿದ ಕಾಂಗ್ರೆಸ್‌ ನಾಯಕ ಹೂಡಾ…!

ಕಾಂಗ್ರೆಸ್ ನಾಯಕರೊಬ್ಬರ ಅತರೇಕದ ವರ್ತನೆ ಈಗ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದೆ. ಹರಿಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ತಮ್ಮ ಅನುಚಿತ ವರ್ತನೆ ಮೂಲಕ ಸುದ್ದಿಯಲ್ಲಿದ್ದಾರೆ. ಭೂಪಿಂದರ್ ಸಿಂಗ್ ಹೂಡಾ ಅವರು ತಾವು ಕುಳಿತಿದ್ದ ಟ್ರ್ಯಾಕ್ಟರ್ ಎಳೆಯಲು ಮಹಿಳಾ ಶಾಸಕಿಯರನ್ನು ಬಳಸಿಕೊಂಡಿದ್ದಾರೆ ಎನ್ನುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರವ್ಯಾಪಿ ಚರ್ಚೆಗೂ ಕಾರಣವಾಗಿದೆ. ಈ ವಿದ್ಯಮಾನವನ್ನು … Continued

ಏ.೧ರಿಂದ ಕೇಂದ್ರದಿಂದ ಹೊಸ ವೇತನ ಸಂಹಿತೆ ಕಾಯ್ದೆ ಜಾರಿಗೆ: ವೇತನ, ಪಿಎಫ್, ಗ್ರಾಚ್ಯುಟಿಯಲ್ಲಿ ಬದಲಾವಣೆ 

ನವ ದೆಹಲಿ : ಕೇಂದ್ರ ಸರ್ಕಾರ ಹೊಸ ವೇತನ ಸಂಹಿತೆ ಮಸೂದೆ 2021 ಅಥವಾ ಹೊಸ ಕಾರ್ಮಿಕ ಕಾನೂನು 2021ರ ಏಪ್ರಿಲ್ 1ರಿಂದ ಜಾರಿಗೆ ತರಲು ಮುಂದಾಗಿದೆ. ಇದು ಜಾರಿಯಾದರೆ ಕೇಂದ್ರ ಸರ್ಕಾರಿ ನೌಕರರ ವೇತನ, ಭವಿಷ್ಯ ನಿಧಿ ಮತ್ತು ಗ್ರಾಚ್ಯುಟಿ ಮೇಲೆ ಪರಿಣಾಮ ಬೀರಲಿದೆ. ಹೊಸ ವೇತನ ಸಂಹಿತೆ ಮಸೂದೆ 2021 ನ್ನು ಜಾರಿಗೆ … Continued