ಪರಿಸರ ಸ್ನೇಹಿ ಸೌರ ಟೆಂಟ್‌, ಲಡಾಕ್‌ನಲ್ಲಿ ಸೈನಿಕರಿಗೆ ಹೆಚ್ಚು ಉಪಯುಕ್ತ

ಬಾಲಿವುಡ್‌ ಸುಪರ್‌ಹಿಟ್‌ ಸಿನೆಮಾ  3 ಈಡಿಯಟ್ಸ್‌  ಫುನ್ಸುಖ್ ವಾಂಗ್ಡು, ನಿಜ ಜೀವನದ ಅನ್ವೇಷಕ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ಪರಿಸರ ಸ್ನೇಹಿ ಸೌರ ಬಿಸಿ ಟೆಂಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಲಡಾಖ್ ಪ್ರದೇಶದ ಸಿಯಾಚಿನ್ ಮತ್ತು ಗಾಲ್ವಾನ್ ಕಣಿವೆಯಂತಹ ಅತ್ಯಂತ ಶೀತ ಸ್ಥಳಗಳಲ್ಲಿ ಸೇನಾ ಸಿಬ್ಬಂದಿ ಬಳಸಬಹುದಾಗಿದೆ. ತನ್ನ ಹೆಸರಿಗೆ ಪರಿಸರ ಸ್ನೇಹಿ … Continued

ತಮಿಳುನಾಡು ವಿಧಾನಸಭೆ ಚುನಾವಣೆ: ಎಐಎಡಿಎಂಕೆ-ಪಿಎಂಕೆ ಮಧ್ಯೆ ಸೀಟುಗಳ ಹೊಂದಾಣಿಕೆ

ತಮಿಳುನಾಡಿನ ಮುಂಬರುವ ವಿಧಾನಸಭಾ ಚುನಾವಣೆಗೆ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ)ಯು ಎಐಎಡಿಎಂಕೆ ವಿಧಾಸಬೆ ಸೀಟು ಹಂಚಿಕೆ ನಿಗದಿ ಮಾಡಿಕೊಂಡಿದೆ. ಪಿಎಂಕೆಗೆ ಒಟ್ಟಾರೆಯಾಗಿ 23 ಸ್ಥಾನಗಳನ್ನು ನೀಡಲಾಗಿದೆ. ಜಂಟಿ ಸಂಯೋಜಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಸಮ್ಮುಖದಲ್ಲಿ ಎಐಎಡಿಎಂಕೆ ಸಂಯೋಜಕ ಒ ಪನ್ನೀರಸೆಲ್ವಂ ಈ ಘೋಷಣೆ ಮಾಡಿದ್ದಾರೆ. ಪ್ರಕಟಣೆ ಮಾಡಿದಾಗ ಪಿಎಂಕೆ ಅಅನ್ಬುಮಣಿ ರಾಮದಾಸ್ ಸಹ ಹಾಜರಿದ್ದರು. … Continued

ಅಸ್ಸಾಂ:ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ ಕಾಂಗ್ರೆಸ್‌ ತೆಕ್ಕೆಗೆ..!

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿಕೂಟವಾಗಿದ್ದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಕೇಸರಿ ಪಕ್ಷದೊಂದಿಗಿನ ಸಂಬಂಧವನ್ನು ಮುರಿದಿದೆ. ಪಕ್ಷವು ಈಗ ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ಸೇರಲಿದೆ ಎಂದು ಬಿಪಿಎಫ್ ಅಧ್ಯಕ್ಷ ಹಗ್ರಾಮ ಮೊಹಿಲರಿ ಶನಿವಾರ ಪ್ರಕಟಿಸಿದ್ದಾರೆ. ಶಾಂತಿ, ಏಕತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬೊಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) … Continued

ಮಾ.೨೦ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಇದೀಗ ದಕ್ಷಿಣ ಭಾರತದ ಕಡೆ ವಿಸ್ತರಿಸಲು ರೈತರು ಮುಂದಾಗಿದ್ದಾರೆ. ಮಾರ್ಚ್ 20 ರಂದು ಮೊದಲ ಮಹಾ ಪಂಚಾಯತ್ ಶಿವಮೊಗ್ಗದಲ್ಲಿ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‍ಗೆ 20 ಸಾವಿರ ರೈತರು ಸೇರುವ ನಿರೀಕ್ಷೆಯಿದೆ. ಮಹಾಪಂಚಾಯತ್‍ನಲ್ಲಿ ಭಾಗವಹಿಸುವಂತೆ ಕರ್ನಾಟಕದ … Continued

ಕೊವಿಡ್‌ ಲಸಿಕೆ: ಖಾಸಗಿ ಆಸ್ಪತ್ರೆಗಳಲ್ಲಿ ೨೫೦ ರೂ.ದರ ನಿಗದಿ

ನವ ದೆಹಲಿ: ದೇಶದಲ್ಲಿ ಮಾರ್ಚ್ 1 ರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಲಸಿಕೆ ಹಾಕುವ ಎರಡನೇ ಹಂತದ ಅಭಿಯಾನ ನಡೆಯಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ ಗೆ 250 ರೂಪಾಯಿ ನಿಗದಿಪಡಿಸಿ ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ. ದೇಶದ 10,000 ಸರ್ಕಾರಿ ಆಸ್ಪತ್ರೆಗಳು ಹಾಗೂ 20,000 … Continued

ವಿಜಯಾನಂದ ಕಾಶಪ್ಪನವರಷ್ಟು ದೊಡ್ಡ ನಾಯಕ ನಾನಲ್ಲ:ನಿರಾಣಿ ವ್ಯಂಗ್ಯ

ಕೊಪ್ಪಳ: ಪಂಚಮಸಾಲಿ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ.  ಮಾಜಿ ಶಾಸಕ ವಿಜಯ ಕಾಶಪ್ಪನವರಷ್ಟು ದೊಡ್ಡ  ನಾಯಕ ನಾನಲ್ಲ. ಅವರು ರಾಷ್ಟ್ರೀಯ ಅಧ್ಯಕ್ಷರು. ಅವರೇ ನಾಯಕತ್ವ ತೆಗೆದುಕೊಂಡು ಹೋರಾಟ ಮಾಡಲಿ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು. ಶನಿವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು … Continued

ಪಕೋಡಾ ಮಾರುತ್ತಿರುವ ಚಿನ್ನ ವಿಜೇತ ಬಿಲ್ಲುಗಾರ್ತಿ ಮಮತಾ ಟುಡ್ಡು..!

ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕ ಜಯಿಸಿರುವ ಬಿಲ್ಲುಗಾರ್ತಿ ಮಮತಾ ಟುಡ್ಡು ತೀವ್ರ ಬಡತನದ ಕಾರಣದಿಂದಾಗಿ ಧನಬಾದ್‌ ದಾಮೋದರಪುರ ಗ್ರಾಮದಲ್ಲಿ ಪಕೋಡಾ ಮಾರಾಟ ಮಾಡುತ್ತಿದ್ದಾಳೆ. 2010 ಮತ್ತು 2014 ರಲ್ಲಿ ಜೂನಿಯರ್ ಮತ್ತು ಸಬ್ ಜೂನಿಯರ್ ಮಟ್ಟದಲ್ಲಿ ಚಿನ್ನದ ಪದಕ ಗೆದ್ದ ರಾಷ್ಟ್ರಮಟ್ಟದ ಬಿಲ್ಲುಗಾರ್ತಿ ೨೩ರ ಹರೆಯದ ಮಮತಾ, ಪಕೋಡಾ, ಶೇಂಗಾ ಮಾರಾಟ ಮಾರುತ್ತಿದ್ದಾಳೆ. ನಿವೃತ್ತ ಬಿಸಿಸಿಎಲ್ … Continued

ಕಾಂಗ್ರೆಸ್‌ನಿಂದ ಅಮಾನತು ಮಾಡಿದರೂ ಡೋಂಟ್‌ ಕೇರ್:‌ ಶಾಸಕ ತನ್ವೀರ್‌ ಸೇಠ್‌

ಮೈಸೂರು: ಕಾಂಗ್ರೆಸ್‌ ಪಕ್ಷದಿಂದ ನನ್ನನ್ನು ಅಮಾನತು ಮಾಡಿದರೂ ನಾನು ಹೆದರುವುದಿಲ್ಲ, ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ ಸೇಠ್‌ ಪಕ್ಷದ ಮುಖಂಡರ ವಿರುದ್ಧ ಆಕ್ರೋಷ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಬೆಂಬಲಿಗರು  ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಮರುದಿನ ಸೇಠ್‌ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ನಾನು ಕೂಡ 5 ಬಾರಿ ಗೆದ್ದಿದ್ದೇನೆ . ಒಬ್ಬರ … Continued

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ  ಸಿಎಎ ಪ್ರಮುಖ ವಿಷಯ

ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರ ಮೂರು ಹಂತಗಳಲ್ಲಿ ಅಸ್ಸಾಂ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇ ೨ರಂದು  ಫಲಿತಾಂಶಗಳನ್ನು ಮೇ 2 ರಂದು ಪ್ರಕಟಿಸಲಾಗುತ್ತದೆ. ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್‌ ಹಾಗೂ ಅದರ ಹೊಸ ಮೈತ್ರಿಕೂಟದ ನಡುವೆ ನೇರಸ್ಪರ್ಧೆ ನಡೆಯಲಿದೆ. ಪ್ರಾದೇಶಿಕ ಪಕ್ಷಗಳು ಕೆಲವು ಕಡೆಗಳಲ್ಲಿ ಪ್ರಬಲವಾಗಿದ್ದು ಅಲ್ಲಿ ತ್ರಿಕೋನ … Continued

ಜೈಲಿನಿಂದ ಹೊರಬಂದು ಮತ್ತೆ ರೈತ ಹೋರಾಟಕ್ಕೆ ಸಜ್ಜಾದ ನೋದೀಪ್‌ ಕೌರ್‌

ಹಿಂಸಾತ್ಮಕ ಪ್ರತಿಭಟನೆಗೆ ಕಾರಣರೆಂಬ ಆರೋಪಕ್ಕೆ ೪೫ ದಿನಗಳ ಕಾರಾಗೃಹವಾಸ ಪೂರ್ಣಗೊಳಿಸಿ ಬಿಡುಗಡೆಗೊಂಡಿರುವ ಸಾಮಾಜಿಕ ಕಾರ್ಯಕರ್ತೆ ನೋದೀಪ್‌ ಕೌರ್‌ (೨೩) ರೈತರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕರ್ನಾಲ್‌ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ನೋದೀಪ್‌, ತಾನು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ರೈತರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ನಾನು ಜೈಲಿನಿಂದ ಹೊರಬಂದಿದ್ದೇನೆ, … Continued