ಕೇರಳ ವಿಧಾನಸಭಾ ಚುನಾವಣೆ ೨೦೨೧: ‘ಮೆಟ್ರೊಮ್ಯಾನ್‌ ಶ್ರೀಧರನ್‌ಗಾಗಿ ಬಿಜೆಪಿಯಿಂದ 75 ವರ್ಷದ ವಯೋಮಿತಿ ನಿಯಮ ಸಡಿಲ?

೭೫ ವರ್ಷಕ್ಕಿಂತ ಮೇಲ್ಪಟ್ಟವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ  ಅಲಿಖಿತ ನಿಯಮವನ್ನು ಕಳೆದ ಕೆಲ ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದ ಬಿಜೆಪಿ ಈಗ ನಿಯಮ ಸಡಿಲಿಸಿದಂತೆ ಕಂಡುಬರುತ್ತಿದೆ. ೨೦೧೪ರಲ್ಲಿ ಕೇಂದ್ರದಲ್ಲಿ ಹೊಸದಾಗಿ ಚುನಾಯಿತರಾದ ಮೋದಿ ನೇತೃತ್ವದ ಸರ್ಕಾರವು 75 ವರ್ಷಕ್ಕಿಂತ ಮೇಲ್ಪಟ್ಟ ಬಿಜೆಪಿ ನಾಯಕರಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಲ್ಲಿ ಯಾವುದೇ ಆಡಳಿತಾತ್ಮಕ ಹುದ್ದೆಗಳನ್ನು ನೀಡುವುದಿಲ್ಲ ಎಂದು … Continued

ಪಾಕಿಸ್ತಾನ ಪ್ರಧಾನಿ ವಿಮಾನಕ್ಕೆ ತನ್ನ ವಾಯು ಪ್ರದೇಶ ಬಳಸಲು ಅವಕಾಶ ನೀಡಿದ ಭಾರತ

  ಶ್ರೀಲಂಕಾಕ್ಕೆ ಭೇಟಿ ನೀಡಲಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ವಿಮಾನಕ್ಕೆ ಭಾರತೀಯ ವಾಯುಪ್ರದೇಶವನ್ನು ಬಳಸಲು ಭಾರತ ಅನುಮತಿ ನೀಡಿದೆ. ಮಂಗಳವಾರ (ಫೆ.೨೩ರಂದು) ಇಮ್ರಾನ್‌ ಖಾನ್ ಶ್ರೀಲಂಕಾಕ್ಕೆ ತಮ್ಮ ಮೊದಲ ಭೇಟಿ ನೀಡಲಿದ್ದಾರೆ. ಭಾರತದೊಂದಿಗೆ ಮುಖಾಮುಖಿಯಾಗುವುದನ್ನು ತಪ್ಪಿಸಲು.ಶ್ರೀಲಂಕಾವು ಸಂಸತ್ತಿನಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರ ನಿಗದಿತ ಭಾಷಣವನ್ನು ರದ್ದುಗೊಳಿಸಿತ್ತು, ಕಾಶ್ಮೀರದಲ್ಲಿ ನಡೆದ ಮಾನವ … Continued

ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್‌ ಸ್ಫೋಟ: ಆರು ಜನರ ಸಾವು

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮರೆಯುವ ಮುನ್ನವೇ ಮತ್ತೆ ರಾಜ್ಯದಲ್ಲಿ ಅದೇ ಮಾದರಿಯ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಆರು ಜನ ಮೃತಪಟ್ಟಿರುವ  ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿ … Continued

ಕೋವಿಡ್‌ ೨ನೇ ಅಲೆ ಭೀತಿ; ಮದುವೆ ಸಮಾರಂಭಗಳಿಗೆ ಮಾರ್ಷಲ್‌ಗಳ ನಿಯೋಜನೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ  ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕಟ್ಟುನಿಟ್ಟಾಗಿ  ಪಾಲಿಸಲು ಮಾರ್ಷಲ್ ನಿಯೋಜಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸೋಮವಾರ ಕರ್ನಾಟಕದ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ … Continued

ವಸತಿ ಸಮುಚ್ಚಯಗಳಿಗೆ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕಡ್ಡಾಯ

ಬೆಂಗಳೂರು:ವಸತಿ ಸಮುಚ್ಚಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳ ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನರೆನ್ಸ್ ವತಿಯಿಂದ ಏರ್ಪಡಿಸಿದ್ದ ಭವಿಷ್ಯದತ್ತ ಸುಸ್ಥಿರ ಸಾರಿಗೆ ವರ್ಚುಯಲ್ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾರ್ಜಿಂಗ್ ವ್ಯವಸ್ಥೆಯ ಬಗ್ಗೆ ಅಗತ್ಯ ಕ್ರಮ … Continued

ಯತ್ನಾಳ್‌ ಕಾಂಗ್ರೆಸ್‌ ʼಬಿʼ ಟೀಮ್‌ನಂತೆ ಕೆಲಸ ಮಾಡುತ್ತಿದ್ದಾರೆ: ಸಚಿವ ನಿರಾಣಿ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್‌ “ಬಿʼ ಟೀಮ್‌ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಮುರಗೇಶ ನಿರಾಣಿ ಆರೋಪಿಸಿದರು. ಪಂಚಮಸಾಲಿ ಸಮುದಾಯದ ಶಾಸಕರು ಹಾಗೂ ಸಚಿವರು ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರ ಮೇಲೆ ನಿರಂತರ ವಾಗ್ದಾಳಿ ನಡೆಸುತ್ತ ಬಂದಿದ್ದಾರೆ. ಯತ್ನಾಳ ನಮ್ಮ … Continued

ಬಿಎಸ್‌ವೈ ದೂರಿನ ಹಿನ್ನೆಲೆ ಯತ್ನಾಳಗೆ ದೆಹಲಿ ಬುಲಾವ್‌: ಎಲ್ಲರ ಚಿತ್ತ ಬಿಜೆಪಿ ಹೈಕಮಾಂಡ್‌ನತ್ತ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ತಿರುಗಿಬಿದ್ದಿರುವ ವಿಜಯಪುರ ನಗರ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದ ತುರ್ತು ಬುಲಾವ್‌ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಭಾನುವಾರ ರಾತ್ರಿ ದಿಢೀರ್‌ ತೆರಳಿದ್ದಾರೆ. ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಾಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡಬೇಕು … Continued

ಪುದುಚೇರಿ: ಬಹುಮತ ಸೋತ ನಾರಾಯಣಸಾಮಿ, ಕಾಂಗ್ರೆಸ್‌ ಸರ್ಕಾರ ಪತನ

ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಿದೆ. ಮುಖ್ಯಮಂತ್ರಿ ವಿ. ನಾರಾಯಣಸಾಮಿ ಅವರು ಸೋಮವಾರ ಸದನದಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮಂಡಿಸಿದ ವಿಶ್ವಾಸದ ನಿರ್ಣಯಕ್ಕೆ ಸೋಲಾಯಿತು. ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ನಾರಾಯಣಸಾಮಿ, ತಮ್ಮ ಸರ್ಕಾರ ಮತ್ತು ಪುದುಚೇರಿಯ ಜನರು ಎದುರಿಸುತ್ತಿರುವ ಅಡೆತಡೆಗಳನ್ನು ಪಟ್ಟಿ ಮಾಡಿದರು, ಆಡಳಿತದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಮತ್ತು … Continued

ವರವರ ರಾವ್‌ಗೆ ೬ ತಿಂಗಳ ಮಧ್ಯಂತರ ಜಾಮೀನು ನೀಡಿದ ಮುಂಬೈ ಹೈಕೋರ್ಟ್‌

ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 81 ವರ್ಷದ ವರವರ ರಾವ್ ಅವರಿಗೆ ಮುಂಬೈ ಹೈಕೋರ್ಟ್ ಸೋಮವಾರ ಆರು ತಿಂಗಳ ಮಧ್ಯಂತರ ಜಾಮೀನು ನೀಡಿದೆ. ಆಗಸ್ಟ್ 2018ರಿಂದ ವಿಚಾರಣೆಗೆ ಕಾಯುತ್ತಿರುವ ರಾವ್, ಆರು ತಿಂಗಳ ಜಾಮೀನು ಅವಧಿಯ ನಂತರ ಶರಣಾಗಬೇಕು ಅಥವಾ ವಿಸ್ತರಣೆಗೆ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ. ರಾವ್ ಅವರು ಮುಂಬೈಯಲ್ಲಿಯೇ ಇರಬೇಕು … Continued

ರೈತ ಪ್ರತಿಭಟನಾ ಸ್ಥಳದಲ್ಲಿ ರೈತರ ವ್ಯಥೆ ಹೇಳುತ್ತಿರುವ ಕಲಾವಿದನ ಮಣ್ಣಿನ ಅಚ್ಚು

ರೈತರ ಪ್ರತಿಭಟನೆಯಲ್ಲಿ ಸೇರಲು ರೂರ್ಕೆಲಾದ ಸಾಂಪ್ರದಾಯಿಕ ವಿಗ್ರಹ ತಯಾರಕರೊಬ್ಬರು ದೆಹಲಿಗೆ 1,400 ಕಿಮೀ ಸೈಕಲ್‌ ಓಡಿಸಿದ್ದಾರೆ. ಹೊಸ ಕೃಷಿ ಕಾನೂನುಗಳು ರೈತರ ಶೋಷಣೆಗೆ ಹೇಗೆ ಕಾರಣವಾಗುತ್ತವೆ ಎಂಬುದನ್ನು ಚಿತ್ರಿಸಲು ಗಾಜಿಪುರ ಗಡಿಯಲ್ಲಿ ಮಣ್ಣಿನ ಮಾದರಿಗಳನ್ನು ತಯಾರಿಸುತ್ತಿದ್ದಾರೆ.ಮೂರು ಮಣ್ಣಿನ ಮಾದರಿಗಳನ್ನು ಚಿತ್ರಿಸಲಾಗುತ್ತಿದೆ ಎಂದು 32 ವರ್ಷದ ಮುಕ್ತಿಕಾಂತ ಬಿಸ್ವಾಲ್ ದೂರವಾಣಿಯಲ್ಲಿ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. ದಿ ಟೆಲಿಗ್ರಾಫ್‌ … Continued