500ಕ್ಕೂ ಹೆಚ್ಚು ಖಾತೆ ತಡೆಹಿಡಿದ ಟ್ವಟ್ಟರ್‌

ನವ ದೆಹಲಿ: ಸರ್ಕಾರ ನೀಡಿದ ನೋಟಿಸ್‌ನಲ್ಲಿ ಗುರುತಿಸಲಾದ ಕೆಲವು ಖಾತೆಗಳನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟ್ಟರ್‌ ಬುಧವಾರ ತಿಳಿಸಿದೆ. ಆದಾಗ್ಯೂ, ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳ ಖಾತೆಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ; ತಡೆಹಿಡಿಯಲಾದ ಖಾತೆಗಳು ಭಾರತದ ಹೊರಗೆ ಲಭ್ಯವಿದೆ. ಟ್ವಿಟರ್ ನಿಯಮಗಳ ಸ್ಪಷ್ಟ ಉಲ್ಲಂಘನೆಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಆದೇಶಗಳಂತೆ … Continued

ಟ್ವಿಟ್ಟರ್‌ ಬದಲಾಗಿ ದೇಶೀಯ ಕೂ ಬಳಸಲಾರಂಭಿಸಿದ ಸಚಿವರು, ಅಧಿಕಾರಿಗಳು

ನವ ದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿಷಯ ಮತ್ತು ಖಾತೆಗಳನ್ನು ನಿರ್ಬಂಧಿಸುವುದರ ಕುರಿತು ಸರ್ಕಾರ ಮತ್ತು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಕೇಂದ್ರ ಸಚಿವರು ಮತ್ತು ಸರ್ಕಾರಿ ಇಲಾಖೆಗಳು ಟ್ವಿಟರ್‌ಗೆ ಮೇಡ್-ಇನ್-ಇಂಡಿಯಾ ಪರ್ಯಾಯವಾದ ಕೂನಲ್ಲಿ ಖಾತೆಗಳನ್ನು ತೆರೆಯಲು ಆರಂಭಿಸಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಟ್ವಿಟ್ಟರ್ ನಲ್ಲಿ, “ನಾನು ಈಗ … Continued

೪೦ ಲಕ್ಷ ಟ್ರ್ಯಾಕ್ಟರ್‌ಗಳೊಂದಿಗೆ ಮತಪ್ರದರ್ಶನ:ಟಿಕಾಯಿತ್

ರಾಷ್ಟ್ರದ ರಾಜಧಾನಿಯ ಗಡಿಯಲ್ಲಿ ಕೇಂದ್ರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರಿಯುತ್ತದೆ ಮತ್ತು ಉಳಿದ ಭಾಗಗಳಿಗೆ ಹರಡಲಿದೆ. ರೈತರು ಈಗ ಇನ್ನೂ ದೊಡ್ಡದಾದ ಟ್ರಾಕ್ಟರ್ ರ್ಯಾಲಿಯನ್ನು ಕೈಗೊಳ್ಳಲಿದ್ದಾರೆ ಎಂದು ರಾಕೇಶ ಟಿಕಾಯಿತ್‌ ಹೇಳಿದರು. ಹರಿಯಾಣದ ಪೆಹೋವಾದಲ್ಲಿ ‘ಕಿಸಾನ್ ಮಹಾಪಂಚಾಯತ್’ ಉದ್ದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅವರು, ಈಗ, … Continued

ಪ್ರಧಾನಿಯವರೇ ನಾವು ಆಂದೋಳನ ಜೀವಿಯಾಗಲು ಹೆಮ್ಮೆ ಪಡುತ್ತೇವೆ, ಯಾಕೆಂದರೆ ಇದು ನಮಗೆ ಸ್ವಾತಂತ್ರ್ಯ ತಂದುಕೊಟ್ಟಿದೆ 

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯಸಭೆಯಲ್ಲಿ ಭಾಷಣ ಮಾತನಾಡಿದ ಸಂರ್ಭದಲ್ಲಿ ಬಳಸಿದ “ಆಂದೋಳನ ಜೀವಿʼ ಎಂಬ ಪದ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ಸಂದರ್ಭದಲ್ಲಿ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರಸ್ತಾಪಿಸುವ ಸಂರ್ಭದಲ್ಲಿ ಈಗ ʼಆಂದೋಳನ ಜೀವಿʼಗಳು ನಾಯಿಕೊಡೆಗಳಂತೆ ತಲೆಎತ್ತುತ್ತಿದ್ದಾರೆ ಹಾಗೂ ಎಲ್ಲಿ ಯಾವುದೇ … Continued

ಮೋದಿ-ಬಿಡೆನ್‌ ಮಾತುಕತೆ: ಇಂಡೋ ಪೆಸಿಫಿಕ್‌ ಪ್ರದೇಶದ ಸುರಕ್ಷತೆಗೆ ಒತ್ತು

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20ರಂದು ಅಧಿಕಾರ ವಹಿಸಿಕೊಂಡ ನಂತರ ಇದು ಇಬ್ಬರು ನಾಯಕರ ನಡುವಿನ ಮೊದಲ ಸಂಭಾಷಣೆಯಾಗಿದೆ. ನಾವು ಪ್ರಾದೇಶಿಕ ಸಮಸ್ಯೆಗಳು ಮತ್ತು ನಮ್ಮ ಹಂಚಿಕೆಯ ಆದ್ಯತೆಗಳನ್ನು ಚರ್ಚಿಸಿದ್ದೇವೆ. ಹವಾಮಾನ ಬದಲಾವಣೆಯ ವಿರುದ್ಧ ನಮ್ಮ ಸಹಕಾರವನ್ನು ಹೆಚ್ಚಿಸಲು ನಾವು … Continued

ಕೆಂಪುಕೋಟೆ ಹಿಂಸಾಚಾರ: ಕೊನೆಗೂ ದೀಪ್‌‌ಸಿಧು ಸೆರೆ, ೭ ದಿನ ಪೊಲೀಸ್‌ ಕಸ್ಟಡಿಗೆ

ನವ ದೆಹಲಿ: ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ಎಂದು ಹೆಸರಿಸಲಾಗಿರುವ ಪಂಜಾಬಿ ನಟ-ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಅವರನ್ನು ದೆಹಲಿ ಪೊಲೀಸ್ ವಿಶೇಷ ಕೋಶವು ಮಂಗಳವಾರ ಬೆಳಿಗ್ಗೆ ಬಂಧಿಸಿದೆ. ಅವರನ್ನು  ದೆಹಲಿ ಮೆಟ್ರೊಪಅಲಿಟಿನ್‌ ನ್ಯಯಾಲಯಕ್ಕೆ ಹಾಜರುಪಡಿಸಲಾಗಿದ್ದ ಅವರನ್ನು ಕೋರ್ಟ್‌  ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಕೆಂಪು ಕೋಟೆಯಲ್ಲಿ … Continued

ಪರಿಷತ್ತಿನಲ್ಲೂ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ತಿನಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಕಾಯ್ದೆ ಮಂಡನೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಗದ್ದಲ ಮಾಡಿದರೂ ಕೊನೆಗೆ ಧ್ವನಿ ಮತಕ್ಕೆ ಹಾಕಿದಾಗ ಅಂಗೀಕಾರ ದೊರೆಯಿತು. ಮಸೂದೆ ಮಂಡಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಕಾಯ್ದೆಗೆ ಸದನ ಒಪ್ಪಿಗೆ ನೀಡುವಂತೆ ಮನವಿ … Continued

ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಿ: ಪ್ರಧಾನಿಗೆ ಟಿಕಾಯಿತ್‌ ಆಗ್ರಹ

ನವ ದೆಹಲಿ: ಹೊಸ ವಿವಾದಾತ್ಮಕ ಕೃಷಿ-ಮಾರುಕಟ್ಟೆ ಕಾನೂನುಗಳನ್ನು ರದ್ದುಪಡಿಸುವುದರ ಜೊತೆಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೆ ತರಬೇಕು ಎಂಬ ರೈತರ ಬೇಡಿಕೆಯನ್ನುರಾಕೇಶ ಟಿಕಾಯಿತ್‌ ಪುನರುಚ್ಚರಿಸಿದ್ದಾರೆ ಸೋಮವಾರ ರಾಜ್ಯಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮುಂದುವರಿಯಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ  ಘೋಷಣೆಗೆ ಪ್ರತಿಕ್ರಿಯಿಸಿದ ರೈತ ಮುಖಂಡ ರಾಕೇಶ್ ಟಿಕಾಯಿತ್‌ ಎಂಎಸ್‌ಪಿ ಕಾನೂನಿಗೆ ಒತ್ತಾಯಿಸಿದರು … Continued

ಸಿಖ್ಖರ ದೂಷಣೆ ನಿಲ್ಲಿಸಿ: ಪ್ರಧಾನಿ ಮೋದಿ

ನವ ದೆಹಲಿ: ಸಿಖ್ಖರ ಬಗ್ಗೆ ದೂಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಹಿಂಪಡೆದು ನೀತನ ಕೃಷಿ ಕಾನೂನು ಜಾರಿಯಗಲು ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸೋಮವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕೃಷಿ ಕಾನೂನ ಜಾರಿ ವಿಚಾರದಲ್ಲಿ ನಡೆಯುತ್ತಿರುವ ರಾಜಕಾರಣದ … Continued

ಈಗ ಸತ್ಯಾಗ್ರಹದ ರೂಪ ಪಡೆಯುತ್ತಿರುವ ರೈತ ಆಂದೋಳನ

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ನಂತರ, ಕೆಲ ದುಷ್ಟಶಕ್ತಿಗಳು ಸೇರಿಕೊಂಡು ಮಾಡಿದ ಹಿಂಸೆ ಪ್ರಾಮಾಣಿಕವಾದ ಅಹಿಂಸಾತ್ಮಕ ಪ್ರತಿಭಟನೆ ದುರ್ಬಲಗೊಳಿಸುವುದನ್ನು ತಡೆಯುವುದು ಎಷ್ಟು ಕಷ್ಟ ಎಂಬ ಬಗ್ಗೆ ಸಾಕಷ್ಟು ಅಭಿಪ್ರಾಯಗಳಿವೆ. ಆದರೆ ಫೆ.೧ರಿಂದ ಮತ್ತೆ ಅಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ ದೆಹಲಿಯ ಹೊರವಲಯದ ಸಿಂಘು ಗಡಿಗೆ ಸೀಮಿತವಾಗಿದ್ದ ಈ ಅಹಿಂಸಾತ್ಮಕ ಪ್ರತಿಭಟನೆ, ಸತ್ಯಾಗ್ರಹದ ರೂಪದಲ್ಲಿ ಈಗ … Continued