ಸಚಿವ ಡಿ.ಸುಧಾಕರ ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ (D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಡಿ. ಸುಧಾಕರ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ ಬೆಂಗಳೂರಿನ ಕಿಮ್ಸ್ … Continued

ತಮಿಳುನಾಡು : ವಿಜಯ ನೇತೃತ್ವದ ಟಿವಿಕೆಗೆ ವಿಸಿಕೆ ಬೆಂಬಲ ; ಸರ್ಕಾರ ರಚನೆಗೆ ಹಾದಿ ಸುಗಮ

ಚೆನ್ನೈ : ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರ ‘ಸಂಖ್ಯಾಬಲದ ಆತಂಕ’ ಕೊನೆಗೂ ಮುಗಿದಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚನೆ ಹಾದಿ ಸುಗಮವಾಗಿದೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 118 ಆಗಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಮೈತ್ರಿಕೂಟವು ಈ ಮೊದಲು 116 ಸದಸ್ಯರ ಬಲ ಹೊಂದಿತ್ತು. ಈಗ ವಿಸಿಕೆ (VCK) … Continued

ಮಮತಾ ಬ್ಯಾನರ್ಜಿ ಸೋಲಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಆಯ್ಕೆ

ಕೋಲ್ಕತ್ತಾ : ಮಮತಾ ಬ್ಯಾನರ್ಜಿಗೆ ಅವರ ಕ್ಷೇತ್ರದಲ್ಲೇ ಸೋಲುಣಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಚುನಾಯಿತ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಔಪಚಾರಿಕವಾಗಿ ಘೋಷಿಸಿದರು. ಇತ್ತೀಚೆಗೆ … Continued

ರಾಜೀನಾಮೆ ಕೊಡಲ್ಲ ಎಂದು ಹಠ ಹಿಡಿದ ಮಮತಾಗೆ ಶಾಕ್‌ ; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು … Continued

ಮಮತಾ ಬ್ಯಾನರ್ಜಿಗೆ ಸೋಲುಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ

ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತೆ ರಕ್ತಪಾತ ಮುಂದುವರಿದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಮಮತಾ ಬ್ಯಾನರ್ಜಿ ಅವರನ್ನು ಅವರ ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋಲಿಸಿರುವ ಬಿಜೆಪಿಯ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯಲ್ಲಿ ದುಷ್ಕರ್ಮಿಗಳು … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆಗೆ ಟಿಎಂಸಿ ಧೂಳೀಪಟ ; ತಮಿಳುನಾಡಲ್ಲಿ ʼವಿಜಯʼ ಕ್ರಾಂತಿ, ಕೇರಳದಲ್ಲಿ ʼಕೈʼಗೆ ಜೈ, ಅಸ್ಸಾಂನಲ್ಲಿ ಬಿಜೆಪಿಗೆ ಮತ್ತೆ ಮಣೆ

 ನವದೆಹಲಿ:  ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಕೆಲವೆಡೆ ದಶಕಗಳ ಕಾಲ ಆಳ್ವಿಕೆ ನಡೆಸಿದ ನಾಯಕರನ್ನು ಮತದಾರರು ತಿರಸ್ಕರಿಸಿದ್ದು, ಹೊಸ ನಾಯಕತ್ವಕ್ಕೆ ಮನ್ನಣೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ … Continued

ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಭಾರೀ ಮುಖಭಂಗ ; ಸುವೇಂದು ಅಧಿಕಾರಿ ವಿರುದ್ಧ ದೊಡ್ಡ ಅಂತರದಲ್ಲಿ ಸೋಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಮಮತಾ ಬ್ಯಾನರ್ಜಿ ಅವರು ಅತ್ಯಂತ ದೊಡ್ಡರಾಜಕೀಯ ಸೋಲನ್ನು ಅನುಭವಿಸಿದ್ದಾರೆ. ಹೈಪ್ರೊಫೈಲ್ ಕ್ಷೇತ್ರವೆಂದೇ ಗುರುತಿಸಲ್ಪಟ್ಟಿದ್ದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸುಮಾರು 15,105 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿದ್ದ ಭವಾನಿಪುರದಲ್ಲಿ … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಯೋಗೇಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿ ಶಾಸಕತ್ವ ರದ್ದು

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿಸಿ ಕರ್ನಾಟಕ ವಿಧಾನಸಭೆ ಶನಿವಾರ (ಮೇ 2) ಅಧಿಕೃತ ಅಧಿಸೂಚನೆ ಹೊರಡಿಸಿದೆ. ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನಾಂಕವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ವಿನಯ ಕುಲಕರ್ಣಿ … Continued

ವಿಶ್ವದ ಅತ್ಯುತ್ತಮ ಪ್ಯಾನ್‌ಕೇಕ್ ಪಟ್ಟಿಯಲ್ಲಿ ಭಾರತದ ದೋಸೆಗಳದ್ದೇ ದರ್ಬಾರ್ : ಮಸಾಲ ದೋಸೆಗೆ 6ನೇ ಸ್ಥಾನ : ಟಾಪ್ 100ರಲ್ಲಿ ಭಾರತದ 11 ತಿನಿಸುಗಳು…!

ನವದೆಹಲಿ: ಭಾರತೀಯ ಆಹಾರ ಪದ್ಧತಿಯಲ್ಲಿ ಅತ್ಯಂತ ಪ್ರಿಯವಾದ ಮಸಾಲೆ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಪ್ರಸಿದ್ಧ ಆಹಾರ ವಿಮರ್ಶಾ ಸಂಸ್ಥೆ ‘ಟೇಸ್ಟ್ ಅಟ್ಲಾಸ್’ (TasteAtlas) ಬಿಡುಗಡೆ ಮಾಡಿರುವ ವಿಶ್ವದ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಭಾರತದ ಮಸಾಲೆ ದೋಸೆ ವಿಶ್ವದಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ. ಟಾಪ್ 100 ಪಟ್ಟಿಯಲ್ಲಿ 10 ಭಾರತೀಯ ತಿನಿಸುಗಳು! … Continued