ಪುಸ್ತಕ ಎಂಬುದು ಪ್ರತಿಯೊಬ್ಬ ಓದುಗನಲ್ಲೂ ಹೊಸ ಅರ್ಥವನ್ನು ಸೃಷ್ಟಿಸುವ ಜೀವಂತ ದ್ರವ್ಯ

ಸಿದ್ದಾಪುರ : ಪುಸ್ತಕ ಎಂಬುದು ಕೇವಲ ಅಚ್ಚಾದ ವಸ್ತುವಲ್ಲ; ಅದು ಪ್ರತಿಯೊಬ್ಬ ಓದುಗನಲ್ಲೂ ಹೊಸ ಅರ್ಥವನ್ನು ಸೃಷ್ಟಿಸುವ ಜೀವಂತ ದ್ರವ್ಯ ಎಂದು ಸಿದ್ದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಅಭಿಪ್ರಾಯಪಟ್ಟರು. ಪೌರ್ಣಿಮಾ ಸಾಹಿತ್ಯ ವೇದಿಕೆ ಹಾಗೂ ಪ್ರಯೋಗ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಲಯನ್ಸ್‌ ಬಾಲಭವನದಲ್ಲಿ ಆಯೋಜಿಸಲಾದ ಪತ್ರಕರ್ತ, … Continued

ಶಿರಸಿ : ಮೇ 8ರಂದು ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಘವೇಂದ್ರ ಮಠದಲ್ಲಿ ಮೇ 7 ಹಾಗೂ 8ರಂದು ಎರಡು ದಿನಗಳ ಕಾಲ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೇ 7ರಂದು ಗುರುವಾರ ರಾಘವೇಂದ್ರ ಮಠದ ಶ್ರೀ ಗುರುರಾಯರ ಸನ್ನಿಧಿಯಲ್ಲಿ ನೂತನ ನಾಗಪ್ರತಿಷ್ಠೆಯ ಅಂಗವಾಗಿ  ಧಾರ್ಮಿಕ ವಿಧಿವಿಧಾನಗಳು ಹಾಗೂ ಮೇ 8ರಂದು ಶುಕ್ರವಾರ ನಾಗಪ್ರತಿಷ್ಠೆ,  ಹೊಸದಾಗಿ ನಿರ್ಮಿಸಲಾದ ಬಾವಿಯಲ್ಲಿ … Continued

ಕುಮಟಾ : ಏಪ್ರಿಲ್‌ 26ರಂದು ಸಾಧನಾ ಸೌರಭ ಕಾರ್ಯಕ್ರಮ

ಕುಮಟಾ: ಸೌರಭ ಸಂಸ್ಥೆ ವತಿಯಿಂದ ʼಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ ಮತ್ತು ರಾಷ್ಟ್ರೀಯ ಸೌರಭ ಸಮ್ಮಾನ ಪ್ರಶಸ್ತಿ ಪ್ರದಾನ ಸಮಾರಂಭʼ (Sadhana Sourabha)ವನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾಭವನದಲ್ಲಿ ಏಪ್ರಿಲ್‌ 26ರಂದು ಭಾನುವಾರ ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿನವಿಡೀ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್‌ 26ರಂದು ಬೆಳಿಗ್ಗೆ 9:55ಕ್ಕೆ ವೇದಿಕೆ ಕಾರ್ಯಕ್ರಮವನ್ನು ಖ್ಯಾತ … Continued

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಡಿದಾಡಿಕೊಂಡ ಬಿಜೆಪಿ ನಾಯಕರು….! ವೀಡಿಯೊ ವೈರಲ್‌

ಲಕ್ನೋ : ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಮೊರಾದಾಬಾದ್‍ನ ಛಜಲತ್ ಬ್ಲಾಕ್‍ನಲ್ಲಿ ಗುರುವಾರ (ಮಾರ್ಚ್‌ 27) ನಡೆದಿದೆ. ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮತ್ತು ಬ್ಲಾಕ್ ಅಧ್ಯಕ್ಷರ ನಡುವೆ ಮುಖ್ಯ ಅತಿಥಿಗಳ ಕುರ್ಚಿಗಾಗಿ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿ … Continued