ಗದಗ : 33 ದಿನಗಳ ಬಳಿಕ ಶಿವಯೋಗ ಸಮಾಧಿಯಿಂದ ಹೊರಬಂದು ದರ್ಶನ ನೀಡಿದ ಸ್ವಾಮೀಜಿ

ಗದಗ : ಜಿಲ್ಲೆಯ ಅಂತೂರ-ಬೆಂತೂರ ಗ್ರಾಮದ ಬೂದೀಶ್ವರ ಮಠದ ಪೀಠಾಧಿಪತಿ ರಾಚೋಟೇಶ್ವರ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಕೈಗೊಂಡಿದ್ದ 33 ದಿನಗಳ ಶಿವಯೋಗ ಸಮಾಧಿ ಹಾಗೂ ಮೌನಾನುಷ್ಠಾನ ಭಾನುವಾರ ಮುಕ್ತಾಯವಾಯಿತು. ಭಾನುವಾರ ಬೆಳಿಗ್ಗೆ ಕಲ್ಲಿನಿಂದ ನಿರ್ಮಿಸಿದ್ದ ಗರ್ಭಗುಡಿಯಿಂದ ಹೊರಬಂದ ರಾಚೋಟೇಶ್ವರ ಶ್ರೀಗಳು ಸಾವಿರಾರು ಭಕ್ತರಿಗೆ ದರ್ಶನ ನೀಡಿದರು. ಜೂನ್ 3ರಂದು ಮುಂಜಾನೆ ಗರ್ಭಗುಡಿಯನ್ನು ಪ್ರವೇಶಿಸಿದ್ದ ರಾಚೋಟೇಶ್ವರ ಶ್ರೀಗಳು, … Continued

ಗದಗ : ಜಾತ್ರೆಯಲ್ಲಿ ಅವಘಡ ; ಬ್ರೇಕ್ ಡ್ಯಾನ್ಸ್ ತೊಟ್ಟಿಲು ಮುರಿದುಬಿದ್ದು ಹಲವರಿಗೆ ಗಾಯ

ಗದಗ : ನಗರದ ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿನ  ಬ್ರೇಕ್ ಡ್ಯಾನ್ಸ್  ತೊಟ್ಟಿಲು ಕಟ್ ಆಗಿ ಕೆಳಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಭಾನುವಾರ ರಾತ್ರಿ 9ರ ಸುಮಾರಿಗೆ ನಡೆದಿದೆ ಎನ್ನಲಾಗಿದ್ದು, ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೈ ತೊಟ್ಟಿಲಿನಲ್ಲಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಸದ್ದು ಕೇಳಿದೆ. … Continued

ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿಯ ಬಿಜೆಪಿ ಶಾಸಕ

ಗದಗ: ಕಾಮಗಾರಿ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, … Continued

ಗದಗ : ನೆಫಿಲಾ ಜಾತಿಯ ದೈತ್ಯ ಜೇಡ ಪತ್ತೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ ಅರಣ್ಯದಲ್ಲಿ, ನೆಫಿಲಾ ಜಾತಿಗೆ ಸೇರಿದ ‘ಜೈಂಟ್ ವುಡ್ ಸ್ಪೈಡರ್’ ಎಂಬ ದೈತ್ಯ ಜೇಡ ಪತ್ತೆಯಾಗಿದೆ. ಈ ಜೇಡಗಳು ತಮ್ಮ ಬೃಹತ್ ಗಾತ್ರ ಮತ್ತು ಹಳದಿ ಬಣ್ಣದ ಬಲವಾದ ಬಲೆಗಳಿಗೆ ಹೆಸರುವಾಸಿಯಾಗಿದ್ದು, ಜೀವವೈವಿಧ್ಯ ಸಂಶೋಧಕರು ಇದನ್ನು ಪತ್ತೆಹಚ್ಚಿದ್ದಾರೆ. ಅರೆನಿಡೇ ವರ್ಗದ ನೆಫಿಲಾ ಜಾತಿಗೆ ಸೇರಿದ ಈ ದೈತ್ಯ ಜೇಡ ಗದಗ … Continued

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನ ಕಾಲಿಗೆ ಗುಂಡೇಟು

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರನನ್ನು ಕರೆತರುವಾಗ ಈ ಘಟನೆ ನಡೆದಿದೆ. ಎಂದು ಹೇಳಲಾಗಿದ್ದು, … Continued

ಜನ್ಮದಿನದಂದು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲು

ಗದಗ: ಜನ್ಮದಿನದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮದಲಗಟ್ಟಿ ಬಳಿ ನಡೆದಿದೆ ಎಂದು ವರದಿಯಾಗಿದೆ. ನೀರಪಾಲಾದವರನ್ನು ಗದಗ ಜಿಲ್ಲೆಯ ಶಿರಹಟ್ಟಿಯ ಶರಣಪ್ಪ ಬಡಿಗೇರ (34), ಮಹೇಶ … Continued

ಗದಗ | ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಗದಗ: ಹೈಸ್ಕೂಲ್‌ ಮಕ್ಕಳು ಚಲಾಯಿಸುತ್ತಿದ್ದ ಕಾರು ಡಿವೈಡರ್‌ಗೆ ಗುದ್ದಿ (Accident) ಛಿದ್ರಛಿದ್ರವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ಹಾಗೂ ಗಾಯಾಳುಗಳು ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ … Continued

ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ…!

ಗದಗ : ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದು ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38) ಎಂಬಾತ ತನ್ನ ಮಕ್ಕಳಾದ ವೇದಾಂತ (3), ಪವನ … Continued

ನರಗುಂದ | ಕೊಣ್ಣೂರು ಬಳಿ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು

ಗದಗ: ಸಾರಿಗೆ ಬಸ್‌ ಹಾಗೂ ಕಾರು ನಡುವೆ ಭೀಕರ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 4 ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued