ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

ಗದಗ: ಜಿಲ್ಲೆಯ ರೋಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಾರೀ ಅವಘಡ ಸಂಭವಿಸಿದ್ದು, ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ರೋಣ ಪಟ್ಟಣದ ರಾಜ ಬೀದಿಯಲ್ಲಿ ರಥೋತ್ಸವ ಸಾಗುತ್ತಿದ್ದ ವೇಳೆ ನೂಕು ನುಗ್ಗಲು ಉಂಟಾಗಿ ಏಕಾ ಏಕಿ ಚಕ್ರದಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಯದೇ … Continued

ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗ : ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಲಗಿದ್ದಾಗಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ನಗರಸಭೆ  ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ … Continued

ತೋಂಟದ ಸಿದ್ಧಲಿಂಗ ಶ್ರೀಗಳ ಜಯಂತಿಯನ್ನು ಭಾವೈಕ್ಯತಾ ದಿನವಾಗಿ ಆಚರಿಸಲು ಫಕೀರ ದಿಂಗಾಲೇಶ್ವರ ಶ್ರೀಗಳ ವಿರೋಧ

 ಗದಗ: ಗದಗ ಜಿಲ್ಲೆಯ ಎರಡು ಪ್ರಮುಖ ಮಠಗಳಾದ ಗದಗ ತೋಂಟದಾರ್ಯ ಮಠ ಹಾಗೂ ಶಿರಹಟ್ಟಿ ಫಕೀರೇಶ್ವರ ಮಠದ ನಡುವೆ ಭಾವೈಕ್ಯತಾ ದಿನದ ವಿಚಾರದಲ್ಲಿ ಸಂಘರ್ಷ ಉಂಟಾಗಿದ್ದು, ಗದಗ-ಡಂಬಳ ತೋಂಟದಾರ್ಯ ಮಠದ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ‌ ಅವರ 75ನೇ ಜಯಂತಿ‌ ದಿನವನ್ನು ಭಾವೈಕ್ಯತಾ ದಿನ ಎಂದು ಆಚರಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಫಕೀರ ದಿಂಗಾಲೇಶ್ವರ … Continued

ನಟ ಯಶ್ ಜನ್ಮದಿನಕ್ಕೆ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವು

ಗದಗ: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಸೂರಣಗಿ ಗ್ರಾಮದ ಹನುಮಂತ ಹರಿಜನ(21), ಮುರಳಿ ನಡವಿನಮನಿ(20), … Continued

ಎಲೆ-ಅಡಿಕೆ ತಿನ್ನಿಸಿ 9 ತಿಂಗಳ ಶಿಶು ಕೊಲೆ ಮಾಡಿದಳೇ ಅಜ್ಜಿ..? ; ಆರೋಪಿಸಿ ಮೃತ ಶಿಶುವಿನ ತಾಯಿಯಿಂದ ದೂರು ದಾಖಲು

ಗದಗ: ವೃದ್ಧೆಯೊಬ್ಬರು ತನ್ನ ಒಂಬತ್ತು ತಿಂಗಳ ಮೊಮ್ಮಗನನ್ನು ಕೊಂದಿದ್ದಾರೆ ಎಂಬ ಆರೋಪಿಸಿ ಗದಗ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ತಾಯಿ ತನ್ನ ಅತ್ತೆಯ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನವೆಂಬರ್ 22ರಂದು ಘಟನೆ ನಡೆದಿದೆ ಎನ್ನಲಾಗಿದೆ. ಮಗುವಿನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ, ಪ್ರಕರಣ … Continued

ಬಸ್ – ಟಾಟಾ ಸುಮೋ ಡಿಕ್ಕಿ: ಸ್ಥಳದಲ್ಲೇ ಐವರು ಸಾವು, ನಾಲ್ವರಿಗೆ ಗಂಭೀರ ಗಾಯ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಾಟಾ ಸುಮೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟದ ಸಮೀಪ ನಿಡಗುಂದಿಕೊಪ್ಪ ಕ್ರಾಸ್ ಬಳಿ‌ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಲಬುರಗಿಯ ಆಳಂದ ತಾಲೂಕಿನ … Continued

ಟಿಕೆಟ್ ವಂಚನೆ ಆರೋಪ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ದೂರು ದಾಖಲು

ಗದಗ: ಉದ್ಯಮಿ ಗೋಪಾಲ ಬಾಬು ಪೂಜಾರಿಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಎಸಗಿದ ಆರೋಪದಲ್ಲಿ ಬಂಧಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ವಿರುದ್ಧ ಈಗ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂಜಯ ಚವಡಾಳ ಅವರು ಅಭಿನವ ಸ್ವಾಮೀಜಿ … Continued

ಮದುವೆಯಾಗಲು ಹೆಣ್ಣು ಹುಡುಕಿಕೊಡಿ ಎಂದು ಪಿಡಿಒಗೆ ಪತ್ರ ಬರೆದ ಯುವಕ…!

ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎನ್ನುವುದು ಯುವಕರ ಗೋಳಾಗಿದೆ. ಕಾರು, ಬೈಕು, ಜಮೀನು ಇದೆ. ಲಕ್ಷ ಲಕ್ಷ ಸಂಪಾನೆ ಇದ್ದರೂ ಹುಡುಗಿ ಸಿಗುತ್ತಿಲ್ಲ. ಈಗ ಇಲ್ಲೊಬ್ಬ ವ್ಯಕ್ತಿ ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿದ್ದರೂ ಆತನಿಗೆ ಹುಡುಗಿ ಸಿಕ್ಕಿಲ್ಲವಂತೆ. ಹೀಗಾಗಿ ಆತ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ಹುಡುಗಿ ಹುಡುಕಿ ಕೊಡಿ ಎಂದು ಪತ್ರ … Continued

ಕರ್ನಾಟಕದ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗದಲ್ಲಿ ಜಿಯೋ 5ಜಿ ಸೇವೆಗೆ ಚಾಲನೆ

ಬೆಂಗಳೂರು: ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ, ಗದಗ-ಬೆಟಗೇರಿ (ಕರ್ನಾಟಕ), ಕಾಕಿನಾಡ, ಕರ್ನೂಲ್ (ಆಂಧ್ರಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ ಸೇರಿದಂತೆ 16 ನಗರಗಳಲ್ಲಿ ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 17ರ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದರಲ್ಲಿ ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ (ತೆಲಂಗಾಣ), ಮತ್ತು ಬರೇಲಿ (ಉತ್ತರ … Continued

ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಕುಸಿದು ಬಿದ್ದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

ಬೆಂಗಳೂರು: ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು, ಶುಕ್ರವಾರ ಖಾಸಗಿ ರೆಸಾರ್ಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನೇತೃತ್ವದಲ್ಲಿ ನಡೆದ ಟಿಕೆಟ್​ ಆಕಾಂಕ್ಷಿಗಳ ಸಭೆಯಲ್ಲಿ ಶ್ರೀಶೈಲಪ್ಪ ಅವರು ಭಾಗಿಯಾಗಿದ್ದರು. ಸಭೆಯ ನಡುವೆಯೇ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Continued