ತಾಜ್‌ ಮಹಲ್‌ನಲ್ಲಿ ಗಂಗಾಜಲ ಸುರಿದ ಇಬ್ಬರ ಬಂಧನ

ಆಗ್ರಾ:  ಘಟನೆಯೊಂದರಲ್ಲಿ  ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್‌ನಲ್ಲಿ ಗಂಗಾಜಲ ಪ್ರೋಕ್ಷಣೆ ಮಾಡಿದ್ದಕ್ಕಾಗಿ ಪೊಲೀಸರು ಶನಿವಾರ ಇಬ್ಬರನ್ನು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಸಮಾಧಿಯಲ್ಲಿ ಪವಿತ್ರ ಗಂಗಾಜಲವನ್ನು ಸಿಂಪಡಿಸಿದ ಆರೋಪದ ಮೇಲೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯು ವಿನೇಶ ಮತ್ತು ಶ್ಯಾಮ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ತಾಜ್‌ಮಹಲ್‌ನ ಭದ್ರತೆಯ ಹೊಣೆಯನ್ನು ಸಿಐಎಸ್‌ಎಫ್‌ ಹೊಂದಿದೆ. … Continued