ಗಂಗಾವತಿ: ಧಾರ್ಮಿಕ ಕಾರ್ಯಕ್ರಮದ ಪೆಂಡಾಲ್ ಕುಸಿದು ಮಹಿಳೆ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲು ಕಾರ್ಯಕ್ರಮದ ವೇದಿಕೆಯ … Continued

ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಇಂದು

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಂದು ಸೋಮವಾರ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಬೆಟ್ಟದ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಇಂದು(ಡಿಸೆಂಬರ್‌ 5) ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳು, ಹೊರರಾಜ್ಯಗಳಿಂದ ಭಕ್ತರು ಭಾನುವಾರವೇ ಬಂದಿದ್ದಾರೆ. ಒಂದೂವರೆಯಿಂದ ಎರಡು ಲಕ್ಷ ಹನುಮ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಗಂಗಾವತಿ ನಗರದಿಂದ ನಡೆಯಲಿರುವ … Continued