ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued

ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

ಮುಂಬೈ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಸರ್ಕಾರ ಸಲ್ಮಾನ್‌ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬೆಂಗಾವಲು ವಾಹನ ಈಗ … Continued

ಜೈಲಿನಿಂದ ಹೊರಬಂದ ನಂತರ ಬೆಂಬಲಿಗರೊಂದಿಗೆ ಮೆಗಾ ರ್‍ಯಾಲಿ ನಡೆಸಿದ ಗ್ಯಾಂಗ್‌ಸ್ಟರ್‌ : ಮತ್ತೆ ಬಂಧಿಸಿದ ಪೊಲೀಸರು

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಕುಖ್ಯಾತ ಗ್ಯಾಂಗ್‌ಸ್ಟರ್‌ ನನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಬೆತೆಲ್ ನಗರದಿಂದ ಅಂಬೇಡ್ಕರ ಚೌಕದ ವರೆಗೆ ಬೆಂಬಲಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ವೀಡಿಯೊ ವೈರಲ್ ಆದ ನಂತರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜುಲೈ 23 ರಂದು, ಗ್ಯಾಂಗ್‌ಸ್ಟರ್‌ ಹರ್ಷದ್ ಪಾಟಣಕರ್ ಜೈಲಿನಿಂದ ಬಿಡುಗಡೆಯಾದ … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued

ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್‌ನೊಂದಿಗೆ ಗೋಲ್ಡಿ ಬ್ರಾರ್ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ ಹೊರಡಿಸಿದ ನೋಟಿಸ್ ತಿಳಿಸಿದೆ. ಗೋಲ್ಡಿ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಮತ್ತು … Continued