ಪೊಲೀಸರ ಕಣ್ಣಿಗೆ ಖಾರದ ಪುಡಿ ಎರಚಿ ಕಸ್ಟಡಿಯಲ್ಲಿದ್ದ ಗ್ಯಾಂಗ್‌ಸ್ಟರಗೆ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಜೈಪುರ: ರಾಜಸ್ಥಾನದ ಭರತಪುರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೊಲೆ ಪ್ರಕರಣದ ಆರೋಪಿ ಗ್ಯಾಂಗ್‌ಸ್ಟರ್ ಕುಲದೀಪ್ ಜಘೀನಾ ಎಂಬಾತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ದುಷ್ಕರ್ಮಿಗಳು ಪೊಲೀಸರ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆಕೋರನನ್ನು ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸರು ಗ್ಯಾಂಗ್‌ಸ್ಟರ್ ಕುಲದೀಪ್ ಜಘೀನಾನನ್ನು ಜೈಪುರ ಜೈಲಿನಿಂದ ಭರತಪುರ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿದೆ. … Continued