ವಿಚಾರವಾದದ ಹೆಸರಿನಲ್ಲಿ ನಂಬಿಕೆಯ ವಿಜ್ಞಾನವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ: ರಾಘವೇಶ್ವರ ಶ್ರೀಗಳು

ಗೋಕರ್ಣ: ದೃಢವಾದ ನಂಬಿಕೆಯಲ್ಲಿ ಅಡಗಿದ ವಿಜ್ಞಾನ ಆಧುನಿಕ ವಿಜ್ಞಾನಕ್ಕೆ ಗೊತ್ತಿಲ್ಲ. ಇದನ್ನು ಆಧುನಿಕ ವಿಜ್ಞಾನ ಅರ್ಥ ಮಾಡಿಕೊಳ್ಳಬೇಕಾದರೆ ಅದು ನೂರಾರು ಮೈಲಿ ದೂರ ಸಾಗಬೇಕು. ವಿಚಾರವಾದದ ಹೆಸರಿನಲ್ಲಿ ನಂಬಿಕೆಯ ವಿಜ್ಞಾನವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಆರನೇ ದಿನದ ಕಾರ್ಯಕ್ರಮದಲ್ಲಿ ನಂಬಿಕೆ … Continued

ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಗುರುಕುಲ ಚಾತುರ್ಮಾಸ್ಯ ಆರಂಭ : ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಲಿ-ರಾಘವೇಶ್ವರ ಶ್ರೀಗಳು

ಗೋಕರ್ಣ: ಸಮಸ್ತ ಸಮಾಜಕ್ಕೆ ಸುಜ್ಞಾನದ ಬೆಳಕನ್ನು ಹರಿಸಿದ ಗುರುಪರಂಪರೆಯ ಪೂಜೆಯೇ ಗುರುಪೂರ್ಣಿಮೆಯ ವಿಶೇಷ. ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಬೇಕು ಎಂಬ ಮಹತ್ಸಂಕಲ್ಪದೊಂದಿಗೆ ಈ ಬಾರಿಯ ಚಾತುರ್ಮಾಸ್ಯವನ್ನು ಗುರುಕುಲ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ. ಗುರುಕುಲ ಚಾತುರ್ಮಾಸ್ಯ ಆರಂಭದ ದಿನವಾದ ಬುಧವಾರ (ಜುಲೈ ೧೩) ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ … Continued

ಗೋಕರ್ಣ: ಜುಲೈ 13ರಿಂದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ 29ನೇ ಚಾತುಮಾರ್ಸ್ಯ ಆರಂಭ

ಕುಮಟಾ: ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ 29ನೇ ಚಾತುರ್ಮಾಸ್ಯ ಜುಲೈ 13ರಿಂದ ಸೆಪ್ಟೆಂಬರ್‌ 10ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಅಶೋಕೆಯಲ್ಲಿ ನಡೆಯಲಿದ್ದು, ಇದನ್ನು ಗುರುಕುಲ ಚಾತುರ್ಮಾಸ್ಯ ಎಂದು ಸಂಕಲ್ಪಿಸಲಾಗಿದೆ ಈ ವರ್ಷದ ಚಾತುಮಾಸ್ಯ ಕುಮಟಾ ತಾಲೂಕಿನ ಗೋಕರ್ಣದ ಅಶೋಕೆಯಲ್ಲಿ ಶುಭಕೃತ ಸಂವತ್ಸರದ ಆಶಾಢ ಪೂರ್ಣಿಮೆಯಿಂದ … Continued

ಗೋಕರ್ಣ: ಕೋಟಿತೀರ್ಥದಲ್ಲಿ ಮುಳುಗಿ ಸಾವು

ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಗೋಕರ್ಣದ ಕೋಟಿತೀರ್ಥ ಕೆರೆಯಲ್ಲಿ ಈಜಾಡಲು ತೆರಳಿದ ವ್ಯಕ್ತಿಯೊರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಈತನನ್ನು ಗೋಕರ್ಣದ ಮೇಲಿನಕೇರಿಯ ಸಂತೋಷ ರೆಬೆಲೂ ( 45) ಎಂದು ಗುರುತಿಸಲಾಗಿದ್ದು, ಮಧ್ಯಾಹ್ನದ ವೇಳೆ ಸ್ನಾನಕ್ಕಾಗಿ ತೆರಳಿದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ತಕ್ಷಣ ಪೊಲೀಸ್ ತುರ್ತುವಾಹನ 112 ಆಗಮಿಸಿ ಪರಿಶೀಲನೆ ನಡೆಸಿ, … Continued

ಸಾರ್ವಜನಿಕ ಗೌರವ ಸ್ವೀಕರಿಸಿದ ಮಾರನೇ ದಿನ ಇಹಲೋಕ ತ್ಯಜಿಸಿದ ಭೂಷಣ್‌ ಡಾಕ್ಟರ್ ಖ್ಯಾತಿಯ ಡಾ. ಜಠಾರ

ಗೋಕರ್ಣ: ಹಿರಿಯ ವೈದ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಎಸ್.ವಿ ಜಠಾರ (93) ಭಾನುವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗ ಇದೆ. ವೈದ್ಯಕೀಯ ರಾಜಕೀಯ, ಸಹಕಾರ, ಕೃಷಿ, ವೇದದಲ್ಲಿ ಸುದೀರ್ಘ ಅಧ್ಯಯನ ಹಾಗೂ ಸೇವೆ ಸಲ್ಲಿಸಿ … Continued

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ಯಶಸ್ಸಿನ ಹಿಂದೆ ದಕ್ಷಿಣ ಕಾಶಿ ಖ್ಯಾತಿಯ ಗೋಕರ್ಣ ಮೂಲದ ವ್ಯಕ್ತಿ…!

ವಾರಾಣಸಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ದೊಡ್ಡ ಮಟ್ಟದಲ್ಲಿ ಉತ್ತೇಜಿಸುವ ನಿಟ್ಟಿನಲ್ಲಿ ಬೃಹತ್ ಯೋಜನೆಯಾದ ಕಾಶಿ ವಿಶ್ವನಾಥ್ ಧಾಮ್ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ. 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಕಾಶಿ ವಿಶ್ವನಾಥ ಕಾರಿಡಾರ್‌ ಯೋಜನೆಯು ಐತಿಹಾಸಿಕ ಕಾಶಿ ವಿಶ್ವನಾಥ ದೇವಾಲಯ ಹಾಗೂ ಐತಿಹಾಸಿಕ ದಶಾಶ್ವಮೇಧ ಘಾಟ್ ವರೆಗೂ ಸುತ್ತುವರೆದಿದೆ. … Continued

ಗೋಕರ್ಣ: ಈಜಲು ಸಮುದ್ರಕ್ಕೆ ಇಳಿದ ಬೆಂಗಳೂರಿನ ಯುವಕ ನಾಪತ್ತೆ

ಕುಮಟಾ: ಸಮುದ್ರದಲ್ಲಿ ಈಜಲು ಹೋಗಿದ್ದ ಪ್ರವಾಸಿಗನೊಬ್ಬ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರು ಮೂಲದ ರವಿ ನಂದನ್ (23) ಎಂದು ಗುರುತಿಸಲಾಗಿದೆ. ಆತನ ಪತ್ತೆಗಾಗಿ ಹುಡುಕಾಟ ನಡೆದಿದೆ. ಭಾನುವಾರ ಬೆಂಗಳೂರಿನಿಂದ ಐದು ಜನ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ … Continued

ಗೋಕರ್ಣ:ಸಮುದ್ರದ ಅಲೆಗೆ ಸಿಲುಕಿ ವೈದ್ಯಕೀಯ ವಿದ್ಯಾರ್ಥಿ ಸಾವು

ಕಾರವಾರ:- ಸಮುದ್ರದಲ್ಲಿ ಈಜಲು ಹೋದ ಯುವಕನೊಬ್ಬ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ಇಂದು (ಮಂಗಳವಾರ) ನಡೆದ ವರದಿಯಾಗಿದೆ. ಮೃತಪಟ್ಟವನನ್ನು ಬೀದರ್ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮಿಕ್ರಮ ಎಂದು ಗುರುತಿಸಲಾಗಿದೆ. ಆರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದರು. ಈ ವೇಳೆ … Continued